ಯಾದಗಿರಿ | ರೈತರ ಖಾತೆಗಳಿಗೆ ಹಣ ಜಮಾ ವಿಳಂಬ; ಪ್ರತಿಭಟನೆ

Date:

2023-24ನೇ ಸಾಲಿನ ಬರ ಪೀಡಿತ ಜಿಲ್ಲಾ ಹಾಗೂ ತಾಲೂಕುಗಳು ಎಂದು ಘೋಷಿಸಿ ಸರ್ಕಾರ ಹಣ ಮಂಜೂರು ಮಾಡಿದರೂ, ರೈತರ ಖಾತೆಗಳಿಗೆ ಹಣ ಜಮಾ ಆಗದೆ ವಿಳಂಬವಾಗಿರುವುದು ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ. ಯಾದಗಿರಿ ಜಿಲ್ಲೆಯ ಗುರುಮಿಟಕಲ್ ತಹಸೀಲ್ದಾರ್‌ಗೆ ಪ್ರತಿಭಟನಾಕಾರರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ತಾಲೂಕು ಅಧ್ಯಕ್ಷ ಲಾಲಪ್ಪ ತಲಾರಿ, “ಕರ್ನಾಟಕ ಸರ್ಕಾರ 2023-24ನೇ ಸಾಲಿನ ಬರಪಿಡಿತ ಜಿಲ್ಲೆ ಹಾಗೂ ತಾಲೂಕುಗಳೆಂದು ಘೋಷಿಸಿ ಹಣ ಬಿಡುಗಡೆಮಾಡಿದೆ. ಆದರೆ, ಈ ಹಣ ಮಂಜೂರಾಗಿ ತಿಂಗಳುಗಳು ಕಳೆದರೂ ಯಾದಗಿರಿ ಜಿಲ್ಲೆಯಾ ಗುರುಮಿಠಕಲ್ ತಾಲೂಕಿನ ರೈತರ ಖಾತೆಗಳಿಗೆ ಒಂದು ರೂಪಾಯಿ ಹಣ ಕೂಡಾ ಜಮಾ ಆಗಿಲ್ಲ ಮತ್ತು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯೂಸಿಗದೆ ರೈತರು ಕಂಗಲಾಗಿದ್ದಾರೆ” ಎಂದು ಹೇಳಿದ್ದಾರೆ.

ಕೂಲಿ-ನಾಲಿ ಮಾಡಿಕೊಂಡು ಜೀವನಮಾಡಬೇಕೆಂದರೆ, ಕಲ್ಯಾಣ ಕರ್ನಾಟಕ ಗಡಿಭಾಗದ ಅತೀ ಹಿಂದುಳಿದ ಯಾದಗಿರಿ ಜಿಲ್ಲೆಯ ನೂತನವಾಗಿ ಘೋಷಣೆಯಾದ ಗುರಮಿಠಕಲ್ ತಾಲೂಕಿನಲ್ಲಿ ಯಾವುದೇ ಅಭೀವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಇದರ ಪರಿಣಾಮವಾಗಿ ಈ ಭಾಗದ ರೈತರು ಏನುಮಾಡಬೇಕೆಂದು ದಿಕ್ಕುತೊಚದೆ ಕುಟುಂಬಸಹಿತ ಬೆಂಗಳೂರು, ಮುಂಬೈ ಹಾಗೂ ಹೈದ್ರಾಬಾದಿನಂತ ಮಹಾನಗರಗಳಿಗೆ ಕೆಲಸಕ್ಕಾಗಿ ಗುಳೆಹೊಗುತ್ತಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರಿಂದ ರೈತರ ಮಕ್ಕಳ ಶಿಕ್ಷಣ ಕುಂಠಿತವಾಗುತ್ತಿದೆ. ಪ್ರಯುಕ್ತ ಸಂಬಂಧ ಪಟ್ಟ ಅಧಿಕಾರಿಗಳು ಈ ವಿಷಯವನ್ನು ಗಂಭಿರವಾಗಿ ಪರಿಗಣಿಸಿ ರೈತರ ಖಾತೆಗಳಿಗೆ ಸರ್ಕಾರದಿಂದ ಮಂಜೂರಾದ ಹಣವನು ಶೀಘ್ರವಾಗಿ ಜಮಾಮಾಡಿ ರೈತರನ್ನು ಗುಳೆಹೊಗುವ ಮನಸಿಕ ಮನಃಸ್ಥಿತಿಯಿಂದ ತಪ್ಪಿಸಬೇಕು ವಿಳಂಬ ಮಾಡಿದರೆ ಮುಂದಿನ ದಿನಗಳಲ್ಲಿ ರೈತರೊಂದಿಗೆ ಜಿಲ್ಲಾಧಿಕಾರಿಗಳ ಕಾರ್ಯಲಯ ಮುಂದು ಹೋರಾಟಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಬಿ.ಎಸ್. ತಲಾರಿ, ಗುರುನಾಥ ಕುಂಬರ್, ಶ್ರೀಕಾಂತ್ ತಲಾರಿ, ಲಾಲಪ್ಪ ತಲಾರಿ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...