ಯಾದಗಿರಿ | ರೈತ ಹೋರಾಟಗಾರ ಚನ್ನಪ್ಪ ಆನೇಗುಂದಿ ಮೇಲೆ ದೂರು : ಪ್ರಾಂತ ರೈತ ಸಂಘ ಖಂಡನೆ

Date:

ನಕಲಿ ಹಾಗೂ ಕಳಪೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಕಾಳಸಂತೆಯಲ್ಲಿ ಮಾರಾಟ ದಂಧೆ ಕುರಿತು ಗಮನ ಸೆಳೆದ ಕಾರಣಕ್ಕೆ ರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚನ್ನಪ್ಪ ಆನೇಗುಂದಿ ಅವರ ಮೇಲೆ ಕೃಷಿ ಪರಿಕರಗಳ ಮಾರಾಟಗಾರರು ಸುಳ್ಳು ದೂರು ನೀಡಿದ್ದಾರೆ.

ರೈತರಿಗೆ ರಸೀದಿ ನೀಡದೇ ಕೃಷಿ ಪರಿಕರಗಳ ಖರೀದಿಗೆ ಒತ್ತಾಯಿಸುವುದು, ದಾಸ್ತಾನು ಪಟ್ಟಿ, ದರ ಪಟ್ಟಿ ಪ್ರಕಟಿಸದೇ ಕಾಳಸಂತೆ ದರದಲ್ಲಿ ಮಾರಾಟ ಮಾಡುವುದು, ರೈತರು ಕೇಳಿದ ಬೀಜ ,ಕ್ರಿಮಿನಾಶಕ ಹಾಗೂ ಗೊಬ್ಬರ ನೀಡದೇ ಕಳಪೆ ಹಾಗೂ ನಕಲಿ ಬ್ರಾಂಡ್ ವಿರುದ್ಧ ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಗೆ ಆಗ್ರಹಿಸಿದ್ದರು.

ಇದನ್ನು ನ್ಯಾಯೋಚಿತವಾಗಿ ಪರಿಶೀಲಿಸದೇ ಮಾರಾಟಗಾರರ ಸಂಘ ಚನ್ನಪ್ಪ ಅವರ ವಿರುದ್ಧ ದೂರು ದಾಖಲಿಸಿರುವುದನ್ನು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ಅಧ್ಯಕ್ಷ ಯು.ಬಸವರಾಜ, ಪ್ರಧಾನ ಕಾರ್ಯದರ್ಶಿ ಟಿ. ಯಶವಂತ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚನ್ನಪ್ಪ ಆನೇಗುಂದಿ ಅವರ ಆರೋಪದಿಂದ ನಮಗೆ ಅವಮಾನ ಆಗಿದೆ ಎಂದು ಸುಮಾರು 400ಕ್ಕೂ ಹೆಚ್ಚು ಕೃಷಿ ಪರಿಕರಗಳ ಮಾರಾಟಗಾರರು ಮೆರವಣಿಗೆ ಮುಖಾಂತರ ಭೀಮರಾಯಗುಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

1003857231
ರೈತ ಹೋರಾಟಗಾರ ಚನ್ನಪ್ಪ ಆನೇಗುಂದಿ

ಜಿಲ್ಲಾ ಪಂಚಾಯತ್ ಸಿಇಓ, ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಮುಂತಾದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲೇ ಉಸ್ತುವಾರಿ ಸಚಿವರಿಗೆ ಆಹವಾಲು ಹೇಳಿಕೊಳ್ಳುವಾಗ ಸುಮ್ಮನಿದ್ದ ಕೃಷಿ ಪರಿಕರಗಳ ಮಾರಾಟಗಾರರು ಅವರೆಲ್ಲರೂ ಕಾರ್ಯಕ್ರಮ ಮುಗಿಸಿ ತೆರಳಿದ ನಂತರ ಕೃಷಿ ಪರಿಕರಗಳ ಮಾರಾಟ ಸಂಘದ ರಾಜ್ಯಾಧ್ಯಕ್ಷ ಬಸನಗೌಡ ಮಾಲಿಪಾಟೀಲ್ ಹಾಗೂ ಅಶೋಕರೆಡ್ಡಿ ಲಿಂಗದಾಳ ಅವರ ನೇತೃತ್ವದಲ್ಲಿ ದೂರು ಹೇಳಿದ್ದಕ್ಕಾಗಿ ಅವಾಚ್ಯವಾಗಿ ನಿಂದಿಸಿ, ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಇಂತಹ ಬೆದರಿಕೆಗಳಿಂದ ರೈತ ಹೋರಾಟವನ್ನು ಬಗ್ಗು ಬಡಿಯಲು ಸಾಧ್ಯವಿಲ್ಲ. ನಕಲಿ ಹಾಗೂ ಕಳಪೆ ಕೃಷಿ ಪರಿಕರಗಳ ಮಾರಾಟ ಮತ್ತು ಕಾಳಸಂತೆ ಮಾರಾಟದ ವಿರುದ್ಧ ರೈತ ಹೋರಾಟ ನಿಲ್ಲಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಕೆಪಿಆರ್‌ಎಸ್ ಕರ್ನಾಟಕ ರಾಜ್ಯ ಸಮಿತಿ ತಿಳಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಧೈರ್ಯವಾಗಿ ದೂರು ಹೇಳಿದ್ದಕ್ಕೆ ನಿಂದನೆ, ಬೆದರಿಕೆ, ದೌರ್ಜನ್ಯ ಎಸಗಿದ ಬಸನಗೌಡ ಮಾಲಿಪಾಟೀಲ್, ಅಶೋಕ ರೆಡ್ಡಿ ಲಿಂಗದಾಳ ಮುಂತಾದವರ ಮೇಲೆ ಶಹಾಪುರ ತಾಲ್ಲೂಕು ಅಧ್ಯಕ್ಷ ಭೀಮಣ್ಣ ಪಟ್ಟೆದಾರ್ ನೀಡಿದ್ದ ದೂರನ್ನು ದಾಖಲಿಸಿಕೊಳ್ಳದೇ ತಿರಸ್ಕರಿಸಿ ದೂರು ಅರ್ಜಿಯ ಮೇಲೆ ತಿರಸ್ಕರಿಸಲಾಗಿದೆ ಎಂದು ಸಹಿ ಮತ್ತು ಶೀಲು ಹಾಕಿದ್ದಾರೆ. ಮಾರಾಟಗಾರರು ನೀಡಿದ ದೂರನ್ನು ದಾಖಲಿಸಿ ರೈತರು ನೀಡಿದ ದೂರನ್ನು ತಿರಸ್ಕರಿಸಿರುವುದು ಪೊಲೀಸರ ಪಕ್ಷಪಾತವನ್ನು ತೋರುತ್ತದೆ ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ: ಕಾರ್ಮಿಕರ ಸ್ಥಿತಿ: ಎಲ್ಲಿಂದ ಎಲ್ಲಿಗೆ? (ಭಾಗ- 1)

ಕೂಡಲೇ ರೈತರು ನೀಡಿರುವ ದೂರನ್ನು ದಾಖಲಿಸಿ ನಿಂದನೆ, ಬೆದರಿಕೆ ದೌರ್ಜನ್ಯ ಎಸಗಿರುವ ಗುಂಪು ಹಲ್ಲೆಗೆ ಪ್ರಚೋದಿಸಿರುವ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷ ಮತ್ತಿತರರನ್ನು ಬಂಧಿಸಬೇಕು. ಕೂಡಲೇ ನಕಲಿ, ಕಳಪೆ ಬೀಜ, ಗೊಬ್ಬರ, ದಾಖಲಾಗಿರುವ ಸುಳ್ಳು ದೂರನ್ನು ರದ್ದುಪಡಿಸಿ ಅನ್ಯಾಯ, ಅಕ್ರಮದ ವಿರುದ್ಧ ,ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ರೈತ ನಾಯಕರಿಗೆ ಸೂಕ್ತ ರಕ್ಷಣೆ ನೀಡಬೇಕು. ಇಲ್ಲವಾದರೆ ಬೃಹತ್ ಪ್ರತಿಭಟನೆ ಎದುರಿಸಬೇಕಾಗುತ್ತದೆ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...