ಯಾದಗಿರಿ | ಗುಂಡಿಗಳಿಗೆ ಕಾಂಕ್ರೀಟ್ ಸುರಿದು ರಸ್ತೆ ದುರಸ್ತಿಗೊಂಡಿದೆ‌ ಎಂದು ತಿಳಿಸಿದ ಅಧಿಕಾರಿಗಳು!

Date:

ನೆರೆಯ ರಾಜ್ಯ ತೆಲಂಗಾಣದ ಹೈದರಾಬಾದ್‌ಗೆ ಸಂಪರ್ಕ ಕಲ್ಪಿಸುವ ಯಾದಗಿರಿ ಜಿಲ್ಲೆಯ ದೋರನಹಳ್ಳಿಯ ರಾಜ್ಯ ಹೆದ್ದಾರಿಯ ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ರಸ್ತೆ ಗುಂಡಿಗಳು ಬಿದ್ದಿದೆ. ರಸ್ತೆ ಉದ್ದಕ್ಕೂ ತಗ್ಗು ಗುಂಡಿಗಳು ಬಿದ್ದಿರುವುದರಿಂದ ಪ್ರಯಾಣಿಕರು, ವಾಹನ ಸವಾರರು ಸಂಚಾರ ನಡೆಸುವುದಕ್ಕೆ ಜೀವಭಯ ಉಂಟಾಗಿದೆ.

ರಸ್ತೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ, ಶಾಸಕ ಚನ್ನಾರೆಡ್ಡಿ ತುನ್ನೂರ ಪಾಟೀಲ, ಸಚಿವ ಶರಣ ಬಸಪ್ಪ ದರ್ಶನಾಪುರ ಜಿಲ್ಲೆಯವ ರಾಜ್ಯ ಹೆದ್ದಾರಿ ಕುರಿತು ಗಮನ ಹರಿಸುತ್ತಿಲ್ಲ. ಸುಮಾರು ವರ್ಷಗಳೆ‌ ಕಳೆದಿವೆ ರಸ್ತೆ ದುರಸ್ತಿ ಕಂಡಿಲ್ಲ ಎಂದು ದೋರನಹಳ್ಳಿಯ ಗ್ರಾಮಸ್ಥರು ದೂರಿದ್ದಾರೆ.

ಸಾಮಾಜಿಕ ಹೋರಾಟಗಾರ ಸುರೇಶ್ ರೆಡ್ಡಿ ಈ ದಿನ.ಕಾಮ್‌ ಜೊತೆಗೆ ಮಾತನಾಡಿ, “ದೊರನಹಳ್ಳಿ ಮುಖ್ಯ ರಸ್ತೆ ಹದಗೆಟ್ಟಿದೆ. ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು, ನನ್ನ ವಾಹನ ಕೂಡ ಅಪಘಾತಕ್ಕೀಡಾಗಿತ್ತು. ಸಾಕಷ್ಟು ಜನರು ಕಷ್ಟ ನಷ್ಟ ಅನುಭವಿಸಿದ್ದಾರೆ. ಈ ಹಿಂದೆ ರಸ್ತೆ ಸಮಸ್ಯೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ದಿವ್ಯ ನಿರ್ಲಕ್ಷ ವಹಿಸುತ್ತಿದ್ದಾರೆ. ಶಾಸಕರು, ಸಚಿವರು ಮಲತಾಯಿ ಧೋರಣೆ ಮಾಡುತ್ತಿದ್ದಾರೆ. ಒಂದು ವೇಳೆ ದುರಸ್ತಿ ಮಾಡದೇ ಇದ್ದಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರಸ್ತೆ1 2

ದೋರನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಾವತಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸಮಸ್ಯೆ ಕುರಿತು ಅಧಿಕಾರಿಗಳಿಗೆ ತಿಳಿಸಿ ದುರಸ್ತಿ ಮಾಡುವಂತೆ ನೋಡಿಕೊಳ್ಳುವೆ” ಎಂದು‌ ತಿಳಿಸಿದರು.

ಗ್ರಾಮ ಪಂಚಾಯತಿ ಅಭಿವೃದ್ಧಿ ‌ಅಧಿಕಾರಿ ದೇವರಾಜ್‌ ಮೌರ್ಯ ಈದಿನ.ಕಾಮ್ ಜೊತೆಗೆ ಮಾತನಾಡಿ, “ರಸ್ತೆ ದುರಸ್ತಿ ನಡೆಯುತ್ತಿದೆ. ಗುಂಡಿಗಳಿಗೆ ಕಾಂಕ್ರೀಟ್ ಹಾಕಿ ಮುಚ್ಚಲಾಗಿದೆ” ಎಂದು ತಿಳಿಸಿದರು. ಆದರೆ, ರಸ್ತೆಯನ್ನು ಗಮನಿಸಿದರೆ, ಅದು ದುರಸ್ತಿಯೋ ಅಥವಾ ಕಾಟಾಚಾರಕ್ಕೆ ಮಾಡಿದ ಕೆಲಸವೊ ಎಂಬಂತಿದೆ.

ರಸ್ತೆ 9

ಈ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿ ಸುಗಾ ರೆಡ್ಡಿ ಮಾತನಾಡಿ, ರಸ್ತೆ ನಿರ್ಮಾಣ ಮಾಡಿ ಬಹಳ ವರ್ಷವಾಗಿರುವುದರಿಂದ ಈ ರಸ್ತೆ ಹೀಗಿರುವುದಕ್ಕೆ ಕಾರಣ. ಕ್ರಿಯಾ ಯೋಜನೆಯ ಬಳಿಕ ಬಜೆಟ್ ಇಲ್ಲ. ಹಾಗಾಗಿ ಯಾದಗಿರಿ ಶಾಸಕ ಚನ್ನಾರೆಡ್ಡಿ‌ ಪಾಟೀಲ್ ಅವರು ಕೆಕೆ‌ಆರ್‌ಡಿಬಿ‌ಯ ಅಡಿಯಲ್ಲಿ ಬೇಡಿಕೆ ಇಟ್ಟಿದ್ದಾರೆ. ಆದರೆ ಶಾಸಕರು ಯಾದಗಿರಿಯಲ್ಲಿಲ್ಲ. ಅವರು ಬಂದ ಬಳಿಕ ಕೆಕೆಆರ್‌ಡಿ‌ಬಿಯ ಆದೇಶ ಸಿಕ್ಕ ತಕ್ಷಣವೇ ರಸ್ತೆ ದುರಸ್ತಿ ಕಾಮಗಾರಿ ನಡೆಸಲಾಗುವುದು” ಎಂದು ತಿಳಿಸಿದರು.

ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು, ಯಾದಗಿರಿ ನಗರ ಠಾಣೆಯ ಪಿಎಸ್ಐ ಪರಶುರಾಮ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕೊಂಡಿರುವುದರಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಸೇರಿದಂತೆ ಇನ್ನಿತರ ಕೆಲಸಗಳು ನೆನೆಗುದಿಗೆ ಬಿದ್ದಿದೆ. ಇದರಿಂದಾಗಿ ಯಾದಗಿರಿ ಜಿಲ್ಲೆಯ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್‌ ಬಿಡಲ್ಲ, ತಿದ್ದುಪಡಿಗೆ ಒಪ್ಪದಿದ್ದರೆ ಹೋರಾಟ: ಆರ್‌ ಅಶೋ‌ಕ್‌

ಅಧಿಕಾರಿಗಳು, ರಾಜ್ಯ ಹೆದ್ದಾರಿ ದೋರನಹಳ್ಳಿ ಮುಖ್ಯ ರಸ್ತೆ ದುರಸ್ತಿ ಮಾಡಿ‌, ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವರೇ? ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಈ ಬಗ್ಗೆ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.

ಗೀತಾ ಹೊಸಮನಿ
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...