ಯಾದಗಿರಿ | ನಾಲೆಗಳಲ್ಲಿ ಜಂಗಲ್ ಕಟಿಂಗ್‌ಗೆ ಒತ್ತಾಯ

Date:

2023ರ ಬರಗಾಲದ ಬಳಿಕ, ಇತ್ತೀಚೆಗೆ ಮಳೆಯಾಗುತ್ತಿದೆ. ಜಲಾಶಯಗಳಿಗೆ ನೀರು ಬರುತ್ತಿದೆ. ಆದರೆ, ನಾರಾಯಣಪೂರ ಜಲಾಶಯದ ಎಡ ಮತ್ತ ಬಲದಂಡ ಕಾಲುವೆಗಳು ಶಿಥಿಲಗೊಂಡಿದ್ದು, ಅವುಗಳನ್ನು ದುರಸ್ತಿ ಮಾಡಬೇಕಿದೆ. ಜಲಾಶಯದಿಂದ ನಾಲೆಗಳಿಗೆ ನೀರನ್ನು ಹರಿಸುವ ಡಿಸ್ಟ್ರುಬ್ಯೂಟರಗಳು, ಲ್ಯಾಟರಲ್‌ಗಳಲ್ಲಿ ಹೂಳು ತುಂಬಿಕೊಂಡಿದೆ. ಹೂಳು ತೆಗೆಯುವ ಕೆಲಸವೂ ಆಗಿಲ್ಲ. ಇದೆಲ್ಲದರಿಂದ ರೈತರಿಗೆ ಸರಿಯಾಗಿ ನೀರು ದೊರೆಯದೆ ಸಮಸ್ಯೆ ಎದುರಾಗುತ್ತಿದೆ ಎಂದು ರೈತ ಸಂಘದ ಕಾರ್ಯಕರ್ತರು ಆರೋಪಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಹುಣಸಗಿಯಲ್ಲಿ ಪ್ರತಿಭಟನೆ ನಡೆಸಿದ ರೈತಸಂಘದ ಕಾರ್ಯಕರ್ತರು ನಾರಾಯಣಪುರ ಜಲಾಶಯದ ಮುಖ್ಯ ಅಭಿಯಂತರರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಕಾಲುವೆಗಳಲ್ಲಿ ಸಿಲ್ವ, ಜಂಗಲ್ ಕಟಿಂಗ್ ಕೆಲಸಗಳು ನಡೆದಿಲ್ಲ. ಈ ಬಗ್ಗೆ ರೈತರು ಅಧಿಕಾರಿಗಳನ್ನು ಕೇಳಿದರ, ಇಲ್ಲಸಲ್ಲದ ನೆಪ ಹೇಳುತ್ತಾರೆ. ಈ ಕಲಸಗಳಿಗೆ ಹಣವಿಲ್ಲವೆಂದು ಸಬೂಬು ಹೇಳುತ್ತಾರೆ. ಕಳೆದ ವರ್ಷ ಕೂಡ ನಾಲೆಯಲ್ಲಿ ಯಾವುದೇ ಕೆಲಸ ನಡೆದಿಲ್ಲ. ಜಂಗಲ್ ಕಟಿಂಗ್ ಕೆಲಸ ಮಾಡದೆ, ನೀರು ಹರಿಸಿದ್ದಾರೆ. ಈಗಾಗಲೇ ಈ ಕಾಲುವೆಗಳ ಕೊನೆಯ ಬಾಗದ ರೈತರಿಗೆ ನೀರು ದೊರೆಯದೆ, ವಂಚಿತರಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರತಿ ವರ್ಷ ಎರಡು ಬಾರಿ ಸಲಹಾ ಸಮಿತಿ ಮೀಟಿಂಗ್ ಕರೆಯುತ್ತಾರೆ. ಸಭೆಯಲ್ಲೂ ಕೂಡಾ ತಾರತಮ್ಯ ಮಾಡುತ್ತಾರೆ. ಸಮಯಕ್ಕೆ ಸರಿಯಾಗಿ ಕರೆಯದೆ ತಮ್ಮ ಮನಸಿಗೆ ಬಂದಂತೆ ದಿನಾಂಕ ನಿಗದಿ ಮಾಡುತ್ತಾರೆ. ಇದರಲ್ಲಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಇಬ್ಬರೇ ಇರುತ್ತಾರೆ. ಸಭೆಗೆ ರೈತರನ್ನೂ ಕರೆಯಬೇಕು. ಅವರ ಸಲಹೆಗಳನ್ನು ಪಡೆಯಬೇಕು ಎಂದರೂ ನಿರ್ಲಕ್ಷ್ಯಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿಹಣಮಗೌಡ, ಗದ್ದೆಪ್ಪ ನಾಗನೇನಾಗಳ, ಜಂಗಿನಗಾದ್ದೆ, ಸಾಹೇಬಗೌಡ ಮದಲಿಂಗನಾಳ, ಹಣಮಂತ್ರಾಯ ಚಂದಲಾಪೂರ, ತಿಪ್ಪಣ್ಣ ಜಂಪಾ ಕಕ್ಕೇರಿ, ನಿಂಗನಗೌಡ ಗೂಳಬಾಳ, ‎‫ಅವಿನಾಶ ನಾಯಕ, ಅಮರೇಶ ಕಾಮನಕೇರಿ, ,ಮಲ್ಲಣ್ಣ ಹಲಬಾವಿ, ಗದ್ದೆಪ್ಪ, ತಿಪಣ್ಣ, ಸಾಹೇಬ್ ಗೌಡ, ಹಣಮೇಗೌಡ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...