ಯಾದಗಿರಿ | ಅಂಬೇಡ್ಕರ್ ಮೂರ್ತಿಗೆ ಹಾನಿ ಮಾಡಿದ ಆರೋಪಿ ಎನ್ಕೌಂಟರ್‌ಗೆ ಗಿರೀಶ್ ಚಟ್ಟೇರಕರ್ ಆಗ್ರಹ

Date:

ಪಂಜಾಬ್ ರಾಜ್ಯದ ಅಮೃತಸರ ನಗರದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಬಿ ಆರ್ ಅಂಬೇಡ್ಕರ್ ಅವರ ಮೂರ್ತಿಗೆ ಹಾನಿ ಮಾಡಿ, ಸಂವಿಧಾನ ಪ್ರತಿ ಸುಟ್ಟ ದೇಶದ್ರೋಹಿಯನ್ನು ಕೂಡಲೇ ಪೊಲೀಸರು ಎನ್ಕೌಂಟರ್ ಮಾಡಬೇಕು, ಆಗ ಮಾತ್ರ ಇಂತಹವರಿಗೆ ಕಾನೂನಿನ ಪಾಠ ಆಗುತ್ತದೆ ಎಂದು ಕದಸಂಸ ಘಟಕ ಸಂಚಾಲಕ ಗಿರೀಶ್ ಎಂ ಚಟ್ಟೇರಕರ್ ಆಗ್ರಹಿಸಿದರು.

ನಗರದಲ್ಲಿ ಪತ್ರಿಕಾ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಅವರು, “ಅಂಬೇಡ್ಕ‌ರ್ ಪ್ರತಿಮೆಗೆ ಅಪಮಾನ ಮಾಡಿ ಒಂದು ಕೇಸ್ ಆಗಿ ಮತ್ತೆ ಹೊರಬಂದು, ʼನಮಗೆ ಯಾರ ಭಯವೂ ಇಲ್ಲ, ಯಾವ ಕಾನೂನು ಏನು ಮಾಡುತ್ತೆʼ ಎಂಬ ಅಹಂ ನಿಂದ ಅಪರಾಧಿಗಳು ತಿರುಗಾಡುತ್ತಿದ್ದಾರೆ. ಅಂತವರಿಗೆ ಪೊಲೀಸರು ಗುಂಡೇಟು ಹಾಕಿ ಬುದ್ಧಿ ಕಲಿಸಲು ಮುಂದಾಗಬೇಕು. ಅಲ್ಲಿವರೆಗೆ ಇಂತಹ ಪ್ರಕರಣಗಳು ನಿಲ್ಲಲು ಸಾಧ್ಯವಿಲ್ಲ. ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಈ ರೀತಿ ಕೆಟ್ಟ ಹುಳಗಳನ್ನು ಮಟ್ಟ ಹಾಕದೇ ಹೋದ್ರೆ ಇಡೀ ಸಮುದಾಯದ ನೆಮ್ಮದಿ ಹಾಳು ಮಾಡುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಯಾದಗಿರಿ| ದೇಶದ ಏಕತೆ, ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ: ಹಿರಿಯ ಸಾಹಿತಿ ಶಿವಣ್ಣ ಇಜೇರಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...