ಯಾದಗಿರಿ | ಪಿಡಿಒ ಮೇಲೆ ಖಾರದ ಪುಡಿ ಎರಚಿ, ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ!

Date:

ಗ್ರಾಮಸಭೆಗೆ ತೆರಳುತ್ತಿದ್ದ ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಅವರ ತಮ್ಮನೊಬ್ಬ ಸೇರಿಕೊಂಡು ಕಣ್ಣಿಗೆ ಖಾರದ ಪುಡಿ ಎರಚಿ, ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಶನಿವಾರ‌ (ಮೇ 3) ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಆರೋಪಿಸಲಾಗಿದೆ.

ದೋರನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ದೇವರಾಜ ರಂಗಪ್ಪ ಚಲವಾದಿ ಹಲ್ಲೆಗೆ ಒಳಗಾದವರು. ಗ್ರಾಮ ಪಂಚಾಯಿತಿ ಸದಸ್ಯೆ ತಾಯಮ್ಮ ಶ್ರೀಕಾಂತ ತೆಗನೂರ ಹಾಗೂ ಆಕೆಯ ತಮ್ಮ ಮಂಜುನಾಥ ಬಸಪ್ಪ ಅನ್ವರ ಹಲ್ಲೆ ಮಾಡಿದವರು.

ದೋರನಹಳ್ಳಿ ಗ್ರಾಮದಲ್ಲಿ ಗ್ರಾಮಸಭೆ ಇರುವ ಕಾರಣ ಶನಿವಾರ ಪಿಡಿಒ ಹಾಗೂ ಪಂಪ್‌ ಅಪರೇಟರ್ ಭೀಮರಾಯ ಕಂಬಾರ ಅವರೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಅದೇ ಸಮಯಕ್ಕೆ ಸದಸ್ಯೆ ತಾಯಮ್ಮ ಹಾಗೂ ಮಂಜುನಾಥ ಬಂದಿದ್ದಾರೆ. ಗ್ರಾಮಸಭೆ ಬಗ್ಗೆ ನಮಗೆ ಯಾಕೆ ಮಾಹಿತಿ ನೀಡಿಲ್ಲ ಎಂದು ಸದಸ್ಯೆ ತಾಯಮ್ಮ ಅವರು ಪಿಡಿಒ ಕಣ್ಣಿಗೆ ಖಾರದ ಪುಡಿ ಎರಚಿ, ಚಪ್ಪಲಿ ತೆಗೆದುಕೊಂಡು ಮುಖಕ್ಕೆ ಬೆನ್ನಿಗೆ ಹೊಡೆದು ಗಾಯಗೊಳಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಪಿಡಿಒ ಇಬ್ಬರ ವಿರುದ್ಧ ಶಹಾಪುರ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿದೂರು ದಾಖಲು:

ವಾರ್ಡ್‌ ಸಭೆ ಮಾಡದೇ, ಊರಲ್ಲಿ ಡಂಗೂರ ಸಾರಿ ಹೇಳದೇ ಊರ ಹೊರಗಡೆಯ ದೇವಸ್ಥಾನ ಬಳಿ ಗ್ರಾಮಸಭೆ ಏಕೆ ಮಾಡುತ್ತೀರಿ ಎಂದು ಕೇಳಿದಕ್ಕೆ ಪಿಡಿಒ ದೇವರಾಜ ಹಾಗೂ ಇತರ ಏಳು ಜನ ಸೇರಿಕೊಂಡು ತಮಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿನಿಂದನೆ ಹಾಗೂ ಅಪಮಾನ ಮಾಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯೆ ತಾಯಮ್ಮ ತೆಗನೂರ, ಮಂಜುನಾಥ ಬಸಪ್ಪ ಅನ್ವರ್‌ ಅವರು ಶಹಾಪುರ ಠಾಣೆಯಲ್ಲಿ ಪ್ರತಿದೂರು ನೀಡಿದ್ದಾರೆ.

ಅಧ್ಯಕ್ಷೆ ಚಂದ್ರಾವತಿ ದೊರೆ, ಉಪಾಧ್ಯಕ್ಷ ಈರಣ್ಣ ಕಸನ್, ಆರಿಫ್ ಮಠ, ಮಹಾಂತಗೌಡ ನಂದಿಕೋಲ, ವಿಜಯಕುಮಾರ ಮಲಗೊಂಡ, ಮಂಜುನಾಥ ದೊರೆ ಹಾಗೂ ಸಿದ್ದಣ್ಣ ದೇಸಾಯಿ ವಿರುದ್ಧವೂ ದೂರು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲ್ಯಾಣ ಕರ್ನಾಟಕದಲ್ಲಿ 21,381 ಶಿಕ್ಷಕರ ಹುದ್ದೆ ಖಾಲಿ : ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತಕ್ಕೆ ಕಾರಣಗಳೇನು?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...