ಯಾದಗಿರಿ | ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನ ಪಾವತಿಸಲು ಒತ್ತಾಯಿಸಿ ಪ್ರತಿಭಟನೆ

Date:

ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಬಾಕಿ ಇರುವ ವೇತನ ಪಾವತಿಸಲು ಒತ್ತಾಯಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ (ರಿ) ದಿಂದ ಯಾದಗಿರಿ ಜಿಲ್ಲಾ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಪತ್ರ ಸಲ್ಲಿಸಿ ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್ ಮಾತನಾಡಿ, “ಕಳೆದ ಸೆಪ್ಟೆಂಬರ್ ತಿಂಗಳ 30ನೇ ತಾರೀಖಿನಂದು ಸಂಘದಿಂದ ಪತ್ರ ಸಲ್ಲಿಸಿ ಬಾಕಿ ವೇತನ ಪಾವತಿ ಮಾಡಲು ಕೋರಿದ್ದರಿಂದ ಕಾಲೇಜ್ ಹಾಸ್ಟೆಲ್ ಕಾರ್ಮಿಕರಿಗೆ ಕೇವಲ 1 ತಿಂಗಳ ವೇತನ ಪಾವತಿ ಮಾಡಿದ್ದಾರೆ. ಇನ್ನುಳಿದ ಬಾಕಿ ವೇತನ ಪಾವತಿಸಲು ಪುನಃ ಕೋರಲಾಗಿದೆ. ಆದರೆ ವೇತನ ಪಾವತಿ ಮಾಡಲಿಲ್ಲ” ಎಂದು ಕಿಡಿಕಾರಿದರು.

“ಕಾರ್ಮಿಕರು ಮಹತ್ವದ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ. ಪ್ರತಿ ತಿಂಗಳು 5ನೇ ತಾರೀಖಿನ ಒಳಗಾಗಿ ವೇತನ ಪಾವತಿಸುವಂತೆ ಇಲಾಖೆಯ ಆದೇಶವಿದ್ದರೂ ಸಮಯಕ್ಕೆ ಸರಿಯಾಗಿ ವೇತನ ಪಾವತಿಯಾಗುತ್ತಿಲ್ಲ. ಮೂರ್ನಾಲ್ಕು ತಿಂಗಳ ವೇತನ ಬಾಕಿ ಉಳಿಸಿಕೊಳ್ಳಲಾಗುತ್ತಿದೆ. ಕಾರ್ಮಿಕರು ದಿನ ನಿತ್ಯ ಹಾಸ್ಟೆಲ್ ಕೆಲಸಕ್ಕೆ ಹೋಗಿ ಬರಲು ಸಹ ಸಾಲದ ಮೊರೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಬೆಲೆ ಏರಿಕೆಯಂತಹ ಇಂತಹ ದಿನಗಳಲ್ಲಿ ದುಡಿದ ಹಣ ಕೈಗೆ ಸಿಗದೆ ಕಾರ್ಮಿಕರು ತಮ್ಮ ಜೀವನ ನಡೆಸಲು ಹೆಣಗಾಡುವಂತೆ ಆಗಿದೆ” ಎಂದು‌ ನೋವು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002066742

“ಸಕಾಲದಲ್ಲಿ ವೇತನ ಪಾವತಿಸಿ ಕಾರ್ಮಿಕರ ಸೇವೆಯನ್ನು ಗೌರವಿಸಬೇಕಾದ ಇಲಾಖೆ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ. ಮತ್ತೊಂದೆಡೆ ಕಾರ್ಮಿಕರಿಗೆ ಸಿಗಬೇಕಾದ ಶಾಸನಬದ್ಧ ಸೌಕರ್ಯಗಳು ಸಹ ಲಭಿಸುತ್ತಿಲ್ಲ. ಹಾಗಾಗಿ ಬಾಕಿ ವೇತನ ಕೂಡಲೇ ಪಾವತಿ ಮಾಡಿ ಮತ್ತು ಸೇವೆಯಿಂದ ನೋಟಿಸ್ ನೀಡದೆ ವಜಾ ಮಾಡಿರುವ ಕಾರ್ಮಿಕರನ್ನು ಪುನಃ ಸೇವೆಗೆ ನಿಯೋಜಿಸಿಕೊಳ್ಳಿ” ಎಂದು ಪಟ್ಟು ಹಿಡಿದು ಒತ್ತಾಯಿಸಲಾಯಿತು.

ಪ್ರತಿಭಟನಾ ಸ್ಥಳಕ್ಕೆ ಧಾವಿಸಿದ ಬಂದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರು ಆಗಮಿಸಿ ನಿರಂತರವಾಗಿ ಚರ್ಚಿಸಿ, ಆದಷ್ಟು ಶೀಘ್ರವಾಗಿ ವೇತನ ಪಾವತಿ ಮಾಡುವ ಭರವಸೆ ನೀಡಿದರು. ಇನ್ನುಳಿದ ಸಮಸ್ಯೆಗಳ ಕುರಿತು ಎರಡು ದಿನದಲ್ಲಿ ಸಭೆ ಕರೆದು ಚರ್ಚೆ ಮಾಡಿ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಶರಣಪ್ಪ ಜಿ ತೆಳಿಗೇರಿಕರ್, ಮುಖಂಡರಾದ ಭೀಮಾಶಂಕರ ನಾಯ್ಕಲ್, ಶ್ರೀಕಾಂತ್ ಚಿಕ್ಕಮೇಟಿ, ಗಜಾನಂದ, ಆನಂದಪ್ಪ, ನರಸಪ್ಪ, ಸಿದ್ದಪ್ಪ, ಜಗದೇವಿ, ಶ್ರೀದೇವಿ, ಮಮ್ಮಾದೇವಿ, ಆಶಮ್ಮ, ಲಕ್ಷ್ಮೀ ಸೇರಿದಂತೆ ಅನೇಕ ಹಾಸ್ಟೆಲ್ ಹೊರಗುತ್ತಿಗೆ ನೌಕರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...