ಯಾದಗಿರಿ| ದೇಶದ ಏಕತೆ, ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ: ಹಿರಿಯ ಸಾಹಿತಿ ಶಿವಣ್ಣ ಇಜೇರಿ

Date:

ನಮ್ಮ ಪ್ರಜಾಸತ್ತಾತ್ಮಕ ವ್ಯವಸ್ಥೆಯು ಇಡೀ ವಿಶ್ವದಲ್ಲಿಯೇ ತನ್ನದೆ ಆದ ಖ್ಯಾತಿ ಪಡೆದುಕೊಂಡಿದೆ. ವಿಶ್ವಕ್ಕೇ ಮಾದರಿಯಾಗಿರುವ ನಮ್ಮ ದೇಶದ ಏಕತೆ ಹಾಗೂ ಸೌಹಾರ್ದತೆಯನ್ನು ಕಾಪಾಡುವುದು ಈ ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಯಾದಗಿರಿಯ ಹಿರಿಯ ಸಾಹಿತಿ ಶಿವಣ್ಣ ಇಜೇರಿ ಅಭಿಪ್ರಾಯಪಟ್ಟರು.

ಶಹಾಪೂರ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸೌಹಾರ್ದ ಸಂಘಟನೆಗಳ ವತಿಯಿಂದ ಮಹಾತ್ಮ ಗಾಂಧಿಯವರು ಹುತಾತ್ಮ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ʼಸೌಹಾರ್ದ ಸಂಕಲ್ಪ ದಿನʼ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, “ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಹಬ್ಬಿರುವ ಅಸಹಿಷ್ಣುತೆ, ಕೋಮುವಾದ, ಜ್ಯಾತ್ಯಾಂಧತೆ, ಮತಾಂಧತೆ ಮೊದಲಾದವು ರಾಷ್ಟ್ರೀಯ ಏಕತೆಗೆ ಭಂಗ ತರುತ್ತಿವೆ. ಇವು ದೇಶದ ಅಭಿವೃದ್ಧಿಗೆ ಮಾರಕವಾಗಿ ಪರಿಣಮಿಸುತ್ತಿವೆ. ಪರಸ್ಪರರಲ್ಲಿ ಭೇದ ಹುಟ್ಟಿಸುತ್ತಿರುವ, ಐಕ್ಯತೆಯ ಸುಖಮಯ ಜೀವನ ಹಾಳು ಮಾಡುತ್ತಲಿರುವ ಇಂತಹ ಘಟನೆಗಳಿಂದ ಸಮಾಜದಲ್ಲಿ ಅನಾರೋಗ್ಯಕರ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ತಪ್ಪು ಗ್ರಹಿಕೆ, ಊಹೆ, ಸಾಮಾಜಿಕ, ಧಾರ್ಮಿಕ, ನೈತಿಕ ಮೌಲ್ಯಗಳ ಅಧಃಪತನ, ದುರ್ಬೋಧನೆ ಮತ್ತು ಮತಾಂಧ ಧಾರ್ಮಿಕ ಪ್ರಣಾಳಿಕೆಗಳು ಜನಸಾಮಾನ್ಯರನ್ನು ದಾರಿ ತಪ್ಪಿಸುತ್ತಿವೆ. ಇಂತವುಗಳಿಂದ ಸಾಮಾಜಿಕ ಉದ್ವಿಗ್ನತೆ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ನಮ್ಮ ಪಾರಂಪರಿಕ ಸಹನಾಶೀಲ ಗುಣವನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಶ್ರಮಿಸಬೇಕು” ಎಂದು ಹೇಳಿದರು.

“ವಿವಿಧ ಜಾತಿ, ಧರ್ಮ, ಜನಾಂಗ, ವಿವಿಧ ನಂಬಿಕೆ, ಭಾಷೆ, ಸಂಪ್ರದಾಯ ಮುಂತಾದವುಗಳನ್ನು ಒಳಗೊಂಡು ಸಹಸ್ರಾರು ವರ್ಷಗಳಿಂದ ಭಾರತದ ಜನಸಮುದಾಯ ಐಕ್ಯತೆ ಹಾಗೂ ಅಖಂಡತೆಯ ಸೂತ್ರದಲ್ಲಿ ಜೀವಿಸುತ್ತ ಬಂದಿರುವುದನ್ನು ಮರೆಯಬಾರದು. ಧಾರ್ಮಿಕ ಸಹಿಷ್ಣುತೆ, ಕೋಮು ಸೌಹಾರ್ದತೆ, ಸಾಮಾಜಿಕ ಒಗ್ಗಟ್ಟು ನಮ್ಮ ಏಕತೆಯ ಮೂಲಧಾರವಾಗಿದೆ. ಗಾಂಧಿಜಿಯವರ ಮತ್ತು ಅಂಬೇಡ್ಕರ್ ಅವರ ತತ್ವ ವಿಚಾರಗಳು ಪ್ರತಿಯೊಬ್ಬರು ಅಳವಡಿಸಿಕೊಂಡು ರಾಷ್ಟ್ರದ ಐಕ್ಯತೆ ಹಾಗೂ ಸೌಹಾರ್ದತೆ ಕಾಪಾಡಲು ಪ್ರತಿಯೊಬ್ಬರೂ ಶ್ರಮಿಸೋಣ” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹಿತಿ ಡಾ. ಸಿದ್ದರಾಮ ಹೊನ್ಕಲ್ ಮಾತನಾಡಿ, “ಅಸಹಿಷ್ಣತೆ ಹೆಚ್ಚುತ್ತಿರುವ ವಿಷಮ ಪರಿಸ್ಥಿತಿಯಲ್ಲಿ ಸೌಹಾರ್ದತೆ ಮೆರೆಯುವ ಕಾರ್ಯಗಳು ಹೆಚ್ಚಾಗಬೇಕು. ಬಹುಸಂಖ್ಯಾತ ಜನ ಸಮುದಾಯದಲ್ಲಿರುವ ಸಹನಾಶೀಲ ಗುಣವನ್ನು ಉತ್ತೇಜಿಸಬೇಕು. ಬಹುಮುಖಿ ಸಮಾಜಕ್ಕೆ ಮಾನ್ಯತೆ ನೀಡಬೇಕು. ಸತ್ಯಶೋಧನೆ ಹಾಗೂ ನಿರ್ಭೀತ ಮನೋಭಾವ ಯಾವತ್ತೂ ಸಮಾಜದ ಆರೋಗ್ಯಕ್ಕೆ ಕಾರಣವಾಗುತ್ತದೆ. ಸಹನೆ, ಸಹಿಷ್ಣುತೆ ಹಾಗೂ ಸಹಬಾಳ್ವೆಯ ಮೂಲಕ ಭಾರತದ ಸಮಗ್ರತೆ ಹಾಗೂ ಸಾರ್ವಭೌಮತೆಯ ಸಂರಕ್ಷಣೆ ಸಾಧ್ಯ. ಇದರಿಂದ ಪರಂಪರಾಗತ ಮೌಲ್ಯಗಳನ್ನು ಅರಿತುಕೊಳ್ಳಲು ನೆರವಾಗುತ್ತದೆ” ಎಂದು ಆಶಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಯಾದಗಿರಿ| ಎಸ್‌ಡಿಪಿಐ ಜಿಲ್ಲಾಧ್ಯಕ್ಷರಾಗಿ ಇಶಾಕ್ ಹುಸೇನ್ ಆಯ್ಕೆ

ಕಾರ್ಯಕ್ರಮದಲ್ಲಿ ರೈತಪರ ಚಿಂತಕ ಮಲ್ಲಿಕಾರ್ಜುನ ಸತ್ಯಪೆಂಟ, ಅಡಿವಪ್ಪ ಜಾಕಾ ಸಾಹು, ಚನ್ನಪ್ಪ ಆನೆಗುಂದಿ, ದಾವಲಸಾಬ ನದಾಫ, ಪ್ರಗತಿಪರ ಚಿಂತಕ ನೀಲಕಂಠ ಬಡಿಗೇರ, ಕಸಾಪ ಅಧ್ಯಕ್ಷ ಡಾ. ರವೀಂದ್ರನಾಥ ಹೊಸ್ಮನಿ, ಎಸ್ ಎಮ್ ಜಮದಾರ, ಸಿದ್ದಯ್ಯ ಹಿರೇಮಠ, ಪ್ರದೀಪಕುಮಾರ, ಡಾ. ರಾಘವೇಂದ್ರ ಹಾರಣಗೇರಾ, ನಿಂಗಣ್ಣ ನಾಯ್ಕೊಡಿ, ರಾಜು ತಿಪ್ಪನಳ್ಳಿ, ಭೀಮರಾಯ ಪೂಜಾರಿ, ಸುಭಾಸ ಹೋತಪೇಟ ಹಾಗೂ ವಿವಿಧ ಸಂಘಟನೆಯ ಮುಖಂಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...