ಯಾದಗಿರಿ | ರಾಕೇಶ ಹತ್ಯೆ ಖಂಡಿಸಿ ಮಾದಿಗ ಸಮಾಜದ ಪ್ರತಿಭಟನೆ

Date:

ದಲಿತ ಯುವಕ ರಾಕೇಶ ಕೊಲೆಯನ್ನು ಖಂಡಿಸಿ ಯಾದಗಿರಿ ಜಿಲ್ಲಾ ಮಾದಿಗ ಸಮಾಜ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿಗೆ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಯಾದಗಿರಿ ನಗರದಲ್ಲಿಯ ಶಹಾಪೂರಪೇಟ ಬಡಾವಣೆಯಲ್ಲಿ ಏ.21ರಂದು ತಡ ರಾತ್ರಿ ಮಾದಿಗ ಸಮಾಜಕ್ಕೆ ಸೇರಿದ ರಾಕೇಶ್ ಎಂಬ ದಲಿತ ಯುವಕನನ್ನು ನಿರ್ದಯದಿಂದ ಆಮಾನುಷವಾಗಿ ಅವನ ತಂದೆ-ತಾಯಿಗಳ ಮುಂದೆ ಕೊಲೆ ಮಾಡಿದನ್ನು ಉಗ್ರವಾಗಿ ನಾವು ಖಂಡಿಸುತ್ತೇವೆ ಎಂದರು.

ಒಬ್ಬ ದಲಿತ ಯುವಕ ರೊಟ್ಟಿಕೇಂದ್ರ ನಡೆಸುತ್ತಿರುವ ಮುಸ್ಲಿಂ ಯುವಕ ಫಯಾಜ ಅವರ ಮನೆಗೆ ಏ.21ರಂದು ಹೋಗಿ ರೊಟ್ಟಿಕೇಳಿದಾಗ ಆತನನ್ನು ತಳಿಸಿ ಅಲ್ಲಿಂದ ಕಳಿಸಿದ್ದಾರೆ. ಅಷ್ಟಕ್ಕೆ ನಿಲ್ಲದ ಈ ಜಿಹಾದಿ ಮನಸ್ಥಿತಿಯ ಯುವಕರ ಗುಂಪು ಕಟ್ಟಿಕೊಂಡು ದಲಿತ ಯುವಕನ ಮನೆಗೆ ಬಂದು, ಜಾತಿ ನಿಂದನೆ ಮಾಡುತ್ತ ಮನಬಂದಂತೆ ಹೊಡೆದು ಅವನ ತಂದೆ-ತಾಯಿಯ ಕಣ್ಣಮುಂದೆ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಬಂದಾಗಿನಿಂದ ಇಂತಹ ಜಿಹಾದಿ ಮನಸ್ಥಿಯ ವ್ಯಕ್ತಿಗಳು ತಮ್ಮ ಬಾಲಬಿಚ್ಚಿಕೊಂಡು ಕಾನೂನನ್ನು ಕೈಗೆ ತೆಗೆದುಕೊಂಡು ಕೊಲೆಗಳನ್ನು ಮಾಡುತ್ತಿರುವುದು ಸಾಮಾನವಾಗಿದೆ ಇಂತಹ ಘಟನೆಗಳು ಮರುಕಳಿಸಿದಂತೆ ಇಂತವರನ್ನು ಅವನ್ನು ಬೇಗ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ನಾವು ಸರ್ಕಾರಕ್ಕೆ ಆಗ್ರಹ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ಒಂದಾದಮೇಲೆ ಒಂದರಂತೆ ಕೊಲೆಗಳು ನಡೆಯುತ್ತಿರುವುದನ್ನು ನೋಡಿದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಸರ್ಕಾರ ಜನ ಸಾಮಾನ್ಯರನ್ನು ರಕ್ಷಿಸುವಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದೆ ಕೋಲೆ ನಡೆದ ನಂತರ ಇದನ್ನು ಮುಚ್ಚಿಹಾಕವ ಪ್ರಶ್ನೆಗಳು ನಡೆದಿವೆ. ಕೊಲೆಯಾದ 14ಗಂಟೆಗಳ ನಂತರ ಪೋಲಿಸರು ದೂರನ್ನು ದಾಖಲಿಕೊಂಡಿದ್ದಾರೆ. ದಲಿತ ಗೃಹಮಂತ್ರಿಿದ್ದು ಈ ರಾಜ್ಯದಲ್ಲಿ ದಲಿತರಿಗೆ ರಕ್ಷಣೆ ನೀಡಲು ಆಗುತ್ತಿಲ್ಲ ಎಂದರೆ ಅವರು ಇವರು ಇಲ್ಲದಂತಾಗಿದೆ ಇಂತಹ ಗಂಭೀರ ಘಟನೆಗಳು ರಾಜ್ಯದಲ್ಲಿ ಮೇಲಿಂದ ಮೇಲೆ ನಡೆಯುತ್ತಿರುವುದರಿಂದ ನೈತಿಕ ಹೊಣೆಹೊತ್ತು ಗೃಹಮಂತ್ರಿಗಳಾದ ಜಿ.ಪರಮೇಶ್ವರರವರು ಕೂಡಲೆ ತಮ್ಮ ಸ್ಥಾನಕ್ಕೆ ರಾಜಿನಾಮೆಯನ್ನು ನೀಡಿಬೇಕೆಂದು ಅಗ್ರಹಿಸಿದರು.

ಈ ಸಂದರ್ಭದಲ್ಲಿ ದೇವಿಂದ್ರಾನಾಥ ನಾದ, ಬಸವರಾಜ ಮೇತ್ರೆ ನಾಯ್ಕಲ್, ಹಣವಂತ ಇಟಗಿ, ಮಲ್ಲಿಕಾರ್ಜುನ ಜೊಲ್ಲಪ್ಪನೋರ, ಸಾಬಣ್ಣ ಹೊರುಂಚ, ಶಿವದೂರ ಮುದ್ನಾಳ, ಸೈದಪ್ಪ ಕೋನೆಹಳ್ಳಿ, ಹಣಮಂತ ಭಂಡಾರಿ, ಪ್ರಭು ಹಿರೇಮಟಿ, ಮರೆಪ್ಪ ಚಟ್ಟೇರಕೇರಾ, ಸಾಬಣ್ಣ ಗಡ್ಡೆಸೂಗೂರು, ಸಾಬಪ್ಪ, ನಾಗಪ್ಪ ಹೋನಗೇರಾ, ಗೋಪಾಲ್ ದಾಸನಕೇರಿ, ಸಂಜಯಕುಮಾರ್ ಕವಲಿ, ನಿಂಗಪ್ಪ ಬೀರನಾಳ, ಸೈದಪ್ಪ ಕೋಲೂರ್, ಸ್ವಾಮಿದೇವ್, ಡಾ. ಸಿ. ಆರ್.ಕಂಬಾರ, ಚಂದ್ರು ಮುಂಡಂಗಿ ಇನ್ನಿತರರು ಉಪಸ್ಥಿತರಿದ್ದರು.

ಬೇಡಿಕೆಗಳು

  • ಮೃತರ ಕುಟುಂಬಕ್ಕೆ 25ಲಕ್ಷ ರೂಪಾಯಿಗಳನ್ನು ಪರಿಹಾರ ಕೊಡಬೇಕು
  • ಮೃತನ ತಾಯಿಗೆ ಸರ್ಕಾರಿ ನೌಕರಿಯನ್ನು ಒದಗಿಸಬೇಕು
  • ಅವರ ಕುಟುಂಬಕ್ಕೆ 2 ಎಕರೆ ಜಮೀನು ಸರ್ಕಾರದಿಂದ ಮಂಜೂರು ಮಾಡಬೇಕು
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...