ಯಾದಗಿರಿ | ಕಾರ್ಮಿಕರಿಗೆ ಕನಿಷ್ಠ ವೇತನ ಪರಿಷ್ಕರಣೆ; ಸಂಘಟಿತ ಹೋರಾಟಕ್ಕೆ ಸಂದ ಗೆಲುವು : ಎಐಯುಟಿಯುಸಿ

Date:

ಕರ್ನಾಟಕ ರಾಜ್ಯ ಸರ್ಕಾರವು ಅನುಸೂಚಿತ ಉದ್ದಿಮೆಗಳಡಿ ಬರುವ ವಿವಿಧ ವಲಯವಾರು ಹಾಗೂ ವಿವಿಧ ಕುಶಲತೆಯ ಕಾರ್ಮಿಕರಿಗೆ ನೀಡಬೇಕಾಗಿರುವ ದಿನದ ಮತ್ತು ಮಾಸಿಕ ಕನಿಷ್ಠ ವೇತನವನ್ನು ಹೆಚ್ಚಿಸಿರುವುದು ಮತ್ತು ಬೇಡಿಕೆಯಂತೆ 3 ವಲಯಗಳನ್ನು ಮಾಡಿ ಅಧಿಸೂಚನೆ ಪ್ರಕಟಿಸಿರುವುದನ್ನು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ್ ಯಾದಗಿರಿ ಸ್ವಾಗತಿಸಿದ್ದಾರೆ.

ʼರಾಜ್ಯದ ಕಾರ್ಮಿಕರು ಮತ್ತು ನೌಕರರು ಮತ್ತಿತರ ದುಡಿಯುವ ಜನರು ಕಡು ಕಷ್ಟದಲ್ಲಿ ಜೀವನ ನಡೆಸುತ್ತಿರುವ ಸಂದರ್ಭದಲ್ಲಿ ಈ ಪರಿಸ್ಕೃತ ವೇತನ ದರಗಳು ಅವರ ಕುಟುಂಬಗಳಿಗೆ ಕನಿಷ್ಠ ಸಮಾಧಾನ ತಂದಿದೆ. ಎಐಯುಟಿಯುಸಿ ಸೇರಿದಂತೆ ಎಲ್ಲಾ ಸಂಘಟನೆಗಳ ಸಂಘಟಿತ ಪ್ರಯತ್ನದ ಫಲವಾಗಿ ಸರ್ಕಾರವು ಇದೀಗ ಕನಿಷ್ಠ ವೇತನ ಪರಿಷ್ಕರಿಸಿರುವುದು ಕಾರ್ಮಿಕರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಇದು ಕಾರ್ಮಿಕರ ಸಂಘಟಿತ ಹೋರಾಟಕ್ಕೆ ಸಿಕ್ಕ ಮಹತ್ವದ ಗೆಲುವಾಗಿದೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼನಮ್ಮ ಸಂಘಟನೆ ಎಐಯುಟಿಯುಸಿ ಸೇರಿದಂತೆ ರಾಜ್ಯದ ಕೇಂದ್ರೀಯ ಕಾರ್ಮಿಕ ಸಂಘಗಳು, ಕನಿಷ್ಠ ವೇತನ ಪರಿಷ್ಕರಿಸುವಾಗ ಕಾರ್ಮಿಕರ ಜೀವನ ವೆಚ್ಚಕ್ಕೆ ಸಂಬಂಧಿಸಿದಂತೆ, ಮೆ.ರೆಪ್ಟಕೋಸ್ ಬ್ರೆಟ್ ಅಂಡ್ ಕಂಪನಿ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ಹೇಳಿದ ಮಾನದಂಡ ಆಧರಿಸಿ ಮಾಸಿಕ 35,950 ರೂ. ಕನಿಷ್ಠ ವೇತನ ನಿಗದಿಪಡಿಸಬೇಕೆಂದು ವಾಸ್ತವಿಕವಾದ ಅಧ್ಯಯನ ಆಧರಿಸಿ, ಜಂಟಿಯಾಗಿ ಕನಿಷ್ಟ ವೇತನ ಸಲಹಾ ಮಂಡಳಿಯಲ್ಲಿ ಮತ್ತು ಸರ್ಕಾರದ ಸಚಿವರಿಗೆ ಒತ್ತಾಯಿಸಿ ಚರ್ಚಿಸಿದ್ದವುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕಾರ್ಮಿಕರನ್ನು ವಲಯಗಳಲ್ಲಿ ಹಂಚಿಕೆ ಮಾಡುವಲ್ಲಿ ಹಲವಾರು ಲೋಪದೋಷಗಳು ಇವೆ. ವಿಡಿಎ ಕುರಿತು ಪ್ರಸ್ತಾಪವಿಲ್ಲ, ಹಿಂದಿನ ಪರಿಷ್ಕರಣೆ ಮುಕ್ತಾಯವಾಗಿರುವ 2022ರಿಂದ ಅನ್ವಯ ಮಾಡದಿರುವುದು, ಹಲವಾರು ಪ್ರಮುಖ ಸೆಕ್ಟರ್ ಕಾರ್ಮಿಕರ ವೇತನ ಪರಿಷ್ಕರಣೆಯನ್ನು ತಡೆ ಹಿಡಿದಿರುವುದು ಸೇರಿದಂತೆ ಹಲವಾರು ಅಂಶಗಳ ಕುರಿತು ಈ ಅಧಿಸೂಚನೆಯಲ್ಲಿ ಸೇರಿಸಬೇಕೆಂದು ಸರ್ಕಾರ ಮತ್ತು ಕಾರ್ಮಿಕ ಇಲಾಖೆಗೆ ಒತ್ತಾಯಿಸಿ ಲಿಖಿತ ಪತ್ರವನ್ನು ಸಲ್ಲಿಸಲಾಗುವುದುʼ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾದಾಜಿ ಖೋಬ್ರಗಡೆ: ಭತ್ತದ ಜೊತೆಗೆ ಬದುಕಿದ ಸಾಮಾಜಿಕ ಸಂತ

ʼಸರ್ಕಾರವು ಕನಿಷ್ಠ ವೇತನ ಕಾಯ್ದೆ ಅಡಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ ಈ ಅಧಿಸೂಚನೆಯಲ್ಲಿ ನಮೂದಿಸಿರುವ ವೇತನ ದರಗಳನ್ನು ಉಳಿಸಿಕೊಂಡು, ನಮ್ಮ ಸಂಘಟನೆ ಎತ್ತಿರುವ ಕೆಲವು ಕಾರ್ಮಿಕರ ಪರವಾದ ನ್ಯಾಯಯುತ ಅಂಶಗಳನ್ನು ಈ ಅಧಿಸೂಚನೆಯಲ್ಲಿ ಸೇರಿಸಿ ಕೂಡಲೇ ಜಾರಿಗೆ ಬರುವಂತೆ ಅಂತಿಮ ಅಧಿಸೂಚನೆಯನ್ನು ಹೊರಡಿಸಬೇಕೆಂದು ಎಐಯುಟಿಯುಸಿ ರಾಜ್ಯ ಸಮಿತಿಯಿಂದ ಸರ್ಕಾರಕ್ಕೆ ಒತ್ತಾಯಿಸುತ್ತೇವೆʼ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...