ಯಾದಗಿರಿ | ಕಾಲುವೆ ಮುಚ್ಚಿ ಹಾಕಿದ ಬಗ್ಗೆ ದೂರು ನೀಡಿದರೂ ಕ್ರಮವಿಲ್ಲ; ಅಧಿಕಾರಿಗಳ ವಿರುದ್ಧ ಆರೋಪ

Date:

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪುರಸಭಾ ವ್ಯಾಪ್ತಿಯಲ್ಲಿ ಬರುವ ಸರ್ವೆ ನಂ. 81/2 ಮತ್ತು 85ರ ಮಧ್ಯೆದಲ್ಲಿ ಬರುವ ಕಾಲುವೆಯನ್ನು ದೌರ್ಜನ್ಯದಿಂದ ಮುಚ್ಚಿ ಹಾಕಿ ಪ್ಲಾಟ್‌ಗಳನ್ನು ಮಾಡಲಾಗಿದ್ದು, ಈ ಕಾಲುವೆಯನ್ನು ಯಥಾ ಸ್ಥಿತಿ ಮಾಡಿಕೊಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮನವಿ ಸಲ್ಲಿಸಿರು ಯಾವುದೇ ಪ್ರಯೋಜನ ಆಗಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಈ ಸಮಸ್ಯೆಯ ಬಗ್ಗೆ ಈ ದಿನ. ಕಾಮ್ನೊಂದಿಗೆ ಮಾತನಾಡಿರುವ ಲಾಲಪ್ಪ ತಲಾರಿ ಎಂಬುವವರು, “ಗುರುಮಠಕಲ್ ಪುರಸಭೆ ವ್ಯಾಪ್ತಿಯಲ್ಲಿರುವ ಗುರಮಿಠಕಲ್ ಗ್ರಾಮದ ಸೀಮಾಂತರದಲ್ಲಿ ಬರುವ ಮತ್ತು ಟೌನ್ ಹಾಲ್ ಹಾಗೂ ತಹಶೀಲ್ದಾರರು ಹಾಗೂ ತಾಲೂಕು ದಂಡಾಧಿಕಾರಿಗಳ ಕಾರ್ಯಾಲಯ ಪಕ್ಕದಲ್ಲಿರುವ ಕಾಲುವೆಗಳನ್ನು ದೌರ್ಜನ್ಯದಿಂದ ಮುಚ್ಚಿ ಹಾಕಲಾಗಿದೆ. ಗುರಮಿಠಕಲ್ ಪಟ್ಟಣದ ಹರಿಜನವಾಡ ಮಾರ್ಗವಾಗಿ ಧಬ್ ಧಬಿ ಜಲಪಾತದವರೆಗೆ ಹಾದು ಹೋಗುವ ಕಾಲುವೆಯ ಜಾಗದಲ್ಲಿ ಪ್ಲಾಟ್‌ಗಳನ್ನು ಮಾಡುವವರು ಸಂಪೂರ್ಣವಾಗಿ ಮುಚ್ಚಿ ಹಾಕಿದ್ದಾರೆ. ಕಾಲುವೆಯನ್ನು ಮುಚ್ಚುವುದರಿಂದ ಮಳೆ ಬಂದರೆ ಸಂಪೂರ್ಣ ಜಲಾವೃತವಾಗಿ ನದಿಯಂತೆ ನೀರು ಹರಿಯುತ್ತವೆ. ಇದರಿಂದ ಲೇಔಟ್‌ನಲ್ಲಿ ಕಟ್ಟಿರುವ ಮನೆಗಳಿಗೆ ಹಾನಿ ಆಗುತ್ತಿವೆ” ಎಂದು ದೂರಿದ್ದಾರೆ.

“ಸರ್ವೆ ನಂಬರ್‌ಗಳ ಮೇಲ್ಬಾಗದ ಜಮೀನುಗಳಲ್ಲಿ ಈಗಾಗಲೇ ನೀರು ನಿಂತಿರುತ್ತವೆ. ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ನೀರು ನಿಂತು ಬೆಳೆ ನೀರಿನಲ್ಲಿ ನಾಶವಾಗುವ ಸ್ಥಿತಿ ಉಂಟಾಗುತ್ತದೆ. ಕಾಲುವೆಯಿಂದ ಹಾದು ಹೋಗುವ ನೀರನ್ನು ಪ್ರತಿದಿನ ದನ-ಕರುಗಳು ಮೇಯಲು ಹೋದಾಗ ನೀರಿನ ದಾಹವನ್ನು ತೀರಿಸಿಕೊಳ್ಳುತ್ತಿದ್ದವು. ಕಾಲುವೆ ಮುಚ್ಚಿರುವುದರಿಂದ ದನ ಕರುಗಳಿಗೆ ನೀರಿಲ್ಲದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರಕಾರವು ನೀರು ಶೇಖರಣೆಗಾಗಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್, ಗ್ರಾಮ ಪಂಚಾಯತಿ ಯೋಜನೆಯ ಅಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡುವ ಕಾಮಗಾರಿಗಳನ್ನು ಏರ್ಪಡಿಸಿದ್ದು, ತಿಳಿದು ಬಂದಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಇವರು ಕಾಲುವೆಯನ್ನು ಮುಚ್ಚಿರುವುದು ಮತ್ತು ಸದರಿ ಕಾಲುವೆಯು ಸುಮಾರು ವರ್ಷಗಳಿಂದ ಬಂದಿದ್ದು, ಅದನ್ನು ಗಮನಿಸಿದ ಪುರಸಭೆ ಅಧಿಕಾರಿಗಳು ಕಾಲುವೆ ಮುಚ್ಚಿ ಪ್ಲಾಟ್‌ಗಳನ್ನು ಮಾಡುತ್ತಿರುವುದು ಕಂಡು ಬಂದರೂ ಯಾವುದೇ ಕ್ರಮ ಮತ್ತು ನೋಟಿಸ್ ನೀಡಿಲ್ಲ. ಕಾಲುವೆಯು ತಹಶೀಲ್ದಾರರ್ ಹಾಗೂ ತಾಲೂಕಾ ದಂಡಾಧಿಕಾರಿಗಳ ಕಾರ್ಯಾಲಯಕ್ಕೆ ಹಿಂಭಾಗದಲ್ಲಿದ್ದು, ಸಂಬಂಧಪಟ್ಟ ಅಧಿಕಾರಿಗಳು ನೋಡಿಯೂ ನೋಡದಂತೆ ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ” ಎಂದು ಲಾಲಪ್ಪ ತಲಾರಿ ಆರೋಪಿಸಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ಧಬ್ ಧಬಿ ಜಲಪಾತವು ಪ್ರವಾಸಿಗರ ತಾಣವಾಗಿದ್ದು, ಸದರಿ ಧಬಿ ಧಭಿಗೆ ಹಾದು ಹೋಗುವ ಕಾಲುವೆಯ ನೀರು ನಿಲ್ಲಿಸಿ, ಪ್ರವಾಸಿಗರ ತಾಣವನ್ನು ಸಂಪೂರ್ಣವಾಗಿ ನಾಶ ಮಾಡಲು ಮುಂದಾಗಿದ್ದಾರೆ. ಆದ್ದರಿಂದ ಕೂಡಲೇ ಸಾರ್ವಜನಿಕರ ಹಿತದೃಷ್ಟಿಯಿಂದ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಭೇಟಿ ನೀಡಿ, ಪರಿಶೀಲನೆ ನಡೆಸಿ ನ್ಯಾಯ ಒದಗಿಸಿಕೊಡಬೇಕು. ಮುಚ್ಚಿದ ಕಾಲುವೆಯಲ್ಲಿ ಮೊದಲಿನಂತೆ ನೀರು ಹಾದು ಹೋಗುವಂತೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ತೀರ್ಥಹಳ್ಳಿ | ಪತ್ರಕರ್ತನ ಮೇಲೆ ಪೊಲೀಸ್ ಅಧಿಕಾರಿಯಿಂದ ದರ್ಪ; ಜಿಲ್ಲಾಡಳಿತಕ್ಕೆ ದೂರು

ಈ ಸಮಸ್ಯೆಯ ಬಗ್ಗೆ ಈ ದಿನ.ಕಾಮ್ ಗುರುಮಠಕಲ್ ಪುರಸಭೆ ಮುಖ್ಯಾಧಿಕಾರಿ ಭಾರತಿ ಅವರಿಗೆ ಕರೆ ಮಾಡಿ ಸಮಸ್ಯೆ ಕುರಿತು ವಿಚಾರಿಸಿದಾಗ, “ಸಮಸ್ಯೆಯ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ಸದರಿ ಜಾಗದಲ್ಲಿ ಲೇಔಟ್‌ನಲ್ಲಿ ಯಾವುದೇ ಅಕ್ರಮ ಆಗಿಲ್ಲ. ಲೇಔಟ್ ಮಾಲೀಕರಿಗೆ ಕಾಲುವೆ ದುರಸ್ಥಿ ಮಾಡುವಂತೆ ನೋಟೀಸ್ ಕಳುಹಿಸುತ್ತೇವೆ. ಮುಂದಿನ 15 ದಿನಗಳಲ್ಲಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇವೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...