ಯಾದಗಿರಿ | ಹಳೆಯ ವೈಷಮ್ಯ ಹಿನ್ನೆಲೆ : ನಗರಸಭೆ ಮಾಜಿ ಅಧ್ಯಕ್ಷೆ ಅಂಜಲಿ ಕಾಂಬಾನೂರರ ಹತ್ಯೆಗೆ ಯತ್ನ

Date:

ಸಮಾಜ ಕಲ್ಯಾಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಶಹಾಬಾದ್ ನಗರಸಭೆಯ ಮಾಜಿ ಅಧ್ಯಕ್ಷೆ ಅಂಜಲಿ ಗಿರೀಶ ಕಾಂಬಾನೂರರ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲು ಯತ್ನಿಸಿದ ಘಟನೆ ಬುಧವಾರ ಬೆಳಿಗ್ಗೆ ಚಿತ್ತಾಪುರ ರಸ್ತೆಯ ಗ್ರೀನ್‌ಸಿಟಿ ಸಮೀಪ ನಡೆದಿದೆ.

ಹರಿತವಾದ ಆಯುಧಗಳಿಂದ ನಡೆದ ದಾಳಿಯಲ್ಲಿ ಅಂಜಲಿ ಗಂಭೀರವಾಗಿ ಗಾಯಗೊಂಡಿದ್ದು, ಕಾರು ಚಾಲಕ ಅಜೀಮಿರ್ ತಕ್ಷಣ ಅವರನ್ನು ಯಾದಗಿರಿಯ ಯಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಅವರನ್ನು ಕಲಬುರಗಿಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಂಜಲಿ ಕಾಂಬಾನೂರ ಅವರು ದಲಿತ ದೌರ್ಜನ್ಯ ಕಾಯ್ದೆಯಡಿ ಅನುಕಂಪದ ಆಧಾರದ ಮೇಲೆ ಸರ್ಕಾರಿ ಸೇವೆಗೆ ಸೇರಿ ಯಾದಗಿರಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ಬೆಳಿಗ್ಗೆ ಎಂದಿನಂತೆ ಕೆಲಸಕ್ಕೆ ತೆರಳುವ ವೇಳೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಾದಗಿರಿ | ಬ್ರಾಹ್ಮಣ್ಯವಾದಿ ಶಕ್ತಿಗಳು ಸಂವಿಧಾನ ವಿರೋಧಿ ಚಟುವಟಿಕೆ ನಡೆಸುತ್ತಿವೆ ; ಚಂದ್ರಕಾಂತ ಬಜೇರಿ

ಕೆಲವು ವರ್ಷಗಳ ಹಿಂದೆ ಅವರ ಪತಿ ಗಿರೀಶ ಕಾಂಬಾನೂರರ ಹತ್ಯೆ ಶಹಾಬಾದ್‌ನಲ್ಲಿ ನಡೆದಿದ್ದು, ಆ ಪ್ರಕರಣಕ್ಕೆ ಸಂಬಂಧಿಸಿದ ಹಳೆಯ ವೈಷಮ್ಯವೇ ಈ ದಾಳಿಗೆ ಕಾರಣವಾಗಿರಬಹುದು ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಪ್ರಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ತೀವ್ರ ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...