ಯಾದಗಿರಿ | ಬಾಲಕಿಯ ಅತ್ಯಾಚಾರ: ದೂರು ದಾಖಲಿಸಿದ್ದಕ್ಕೆ ಸವರ್ಣೀಯರಿಂದ ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ

Date:

14 ವರ್ಷದ ದಲಿತ ಸಮುದಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ‌ಗ್ರಾಮದಲ್ಲಿ ನಡೆದಿದೆ.

ತಮ್ಮ ಮಾತಿನಂತೆ ಸಂಧಾನಕ್ಕೆ ಒಪ್ಪದೆ ದೂರು ನೀಡಿದರು ಎಂಬ ಕಾರಣಕ್ಕೆ ದಲಿತ ಕುಟುಂಬವನ್ನು ಬಹಿಷ್ಕರಿಸಿರುವ ಸವರ್ಣೀಯರು, ಗ್ರಾಮದ ಅಂಗಡಿಗಳಲ್ಲಿ ದಿನಸಿ ಸಾಮಗ್ರಿ ನೀಡದಂತೆ ಷರತ್ತು ವಿಧಿಸಿದ್ದಾರೆ.

ಈ ಸಾಮಾಜಿಕ ಬಹಿಷ್ಕಾರದಿಂದಾಗಿ ಗ್ರಾಮದ ದಲಿತ ಸಮುದಾಯದ ಮಕ್ಕಳಿಗೆ ಅಗತ್ಯವಿರುವ ಪೆನ್ನು, ನೋಟುಬುಕ್ ಮತ್ತು ದೈನಂದಿನ ದಿನಸಿ ಸಾಮಗ್ರಿ ಸಿಗದೆ ಹಲವು ಕುಟುಂಬಗಳು ಪರದಾಡುತ್ತಿವೆ. ಗ್ರಾಮದಲ್ಲಿ ಕಡಿಮೆ ಸಂಖ್ಯೆಯಲ್ಲಿರುವ ದಲಿತರು, ಇದೀಗ ಸಾಮಾಜಿಕ ಬಹಿಷ್ಕಾರದಿಂದಾಗಿ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಹಿಷ್ಕಾರಕ್ಕೆ ಕಾರಣವೇನು?

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿ ಆಗಲು ಕಾರಣನಾಗಿದ್ದ ಯುವಕನ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಕ್ಕೆ ಸಂಬಂಧಿಸಿ ಸಂತ್ರಸ್ತೆ ಕುಟುಂಬಸ್ಥರು ಸಂಧಾನಕ್ಕೆ ಒಪ್ಪದೆ, ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದರಿಂದ ಕೋಪಗೊಂಡ ಗ್ರಾಮದ ಸವರ್ಣೀಯರು, ಇಡೀ ಗ್ರಾಮದ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ದಲಿತ 9

ಗ್ರಾಮದಲ್ಲಿ ದಲಿತರಿಗ್ಯಾರಿಗೂ ದಿನಸಿ ಹಾಗೂ ಮತ್ತಿತರೆ ದೈನಂದಿನ ಬಳಕೆ ವಸ್ತುಗಳನ್ನು ಮಾರಾಟ ಮಾಡದಂತೆ ಕಟ್ಟಪ್ಪಣೆ ಹೊರಡಿಸಲಾಗಿದೆ ಎನ್ನಲಾಗಿದೆ. ಉಪ್ಪು ಖರೀದಿಸಲು ಅಂಗಡಿಯೊಂದಕ್ಕೆ ತೆರಳಿದ್ದ ದಲಿತ ಮಹಿಳೆ ಮತ್ತು ಪೆನ್ನು ಖರೀದಿಸಲು ತೆರಳಿದ್ದ ಶಾಲಾ ಮಕ್ಕಳಿಗೆ ಅಂಗಡಿ ಮಾಲೀಕರು ಬಹಿಷ್ಕಾರ ಹಾಕಿರುವ ವಿಚಾರವನ್ನು ಹೇಳಿದ್ದಾರೆ ಎನ್ನಲಾಗಿದೆ.

ಇಂಥ ಬಹಿಷ್ಕಾರ ಕುರಿತ ಧ್ವನಿಮುದ್ರಿಕೆ (ಆಡಿಯೋ ವಾಯ್ಸ್) ಇದೀಗ ವೈರಲ್‌ ಆಗಿದ್ದು, ಅದರಲ್ಲಿ ಯಾವುದೇ ತರಹದ ವಸ್ತುಗಳು ನೀಡಬಾರದು ಎಂದು ತಮಗೆ ಗ್ರಾಮದ ಪ್ರಮುಖರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆಂದು ಅಂಗಡಿಯವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಶಾಲೆಗೆ ಹೊರಟಿರುವ ಮಕ್ಕಳಿಗಾದರೂ ಪೆನ್ನು ಪೆನ್ಸಿಲ್‌ ಆದರೂ ನೀಡಿ ಎಂದು ಯುವಕರು ಕೇಳಿಕೊಂಡರೂ ಕೊಡಲೊಪ್ಪದ ಅಂಗಡಿ ಮಾಲೀಕರು, ಪೆನ್ನು, ಪುಸಕ್ತವಷ್ಟೇ ಅಲ್ಲ, ನಿಮ್ಮ ಮಂದಿಗೆ (ದಲಿತರು) ಯಾವುದನ್ನೂ ಕೊಡಬಾರದು ಎಂದು ಆಜ್ಞೆಯಾಗಿದೆ ಎಂದು ತಿಳಿಸಿದ್ದಾರೆ. ಈ ಸಾಮಾಜಿಕ ಕ್ರೌರ್ಯದಿಂದಾಗಿ ಬೆರಳಣಿಕೆಯಷ್ಟಿರುವ ಬಪ್ಪರಗಾ ಗ್ರಾಮದ ದಲಿತ ವರ್ಗದಲ್ಲಿ ಆತಂಕ ಮನೆ ಮಾಡಿದೆ.

ಘಟನೆಯ ಹಿನ್ನೆಲೆ:

ಬಪ್ಪರಗಾ ಗ್ರಾಮದ 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿದ್ದ ಪ್ರಬಲ ಜಾತಿ ಯುವಕನೊಬ್ಬ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಆಕೆ 5 ತಿಂಗಳ ಗರ್ಭಿಣಿಯಾಗಿದ್ದು, ಮದುವೆಗೆ ನಿರಾಕರಿಸಿದ್ದ.

ಈ ಸಂಬಂಧ ಒಂದು ತಿಂಗಳ ಹಿಂದೆ ನಾರಾಯಣಪುರ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಬಾಲಕಿ ತಾಯಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ತಮ್ಮೆದುರು ಸಂಧಾನಕ್ಕೆ ಬರುವ ಬದಲು ನೇರವಾಗಿ ಠಾಣೆಗೆ ತೆರಳಿ ದೂರು ದಾಖಲಿಸಿದ್ದಕ್ಕೆ ಆಕ್ರೋಶಗೊಂಡ ಸವರ್ಣೀಯರು, ಇಡೀ ದಲಿತ ಸಮುದಾಯಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ.

ಪರಿಶಿಷ್ಟ ಸಮುದಾಯದ ಜನರ ಜೊತೆಗೆ ಯಾವುದೇ ರೀತಿಯ ವ್ಯವಹಾರ ಮಾಡದಂತೆ ಎಲ್ಲ ಅಂಗಡಿಗಳಿಗೆ ತಾಕೀತು ಮಾಡಿ, ನಮಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ದಿನಸಿ ಪದಾರ್ಥವಷ್ಟೇ ಅಲ್ಲ, ಶಾಲಾ ಮಕ್ಕಳಿಗೆ ಪೆನ್ನು, ನೋಟ್‌ಬುಕ್ ಸೇರಿದಂತೆ ಯಾವುದೇ ಸಾಮಗ್ರಿಗಳನ್ನೂ ಮಾರಾಟ ಮಾಡುತ್ತಿಲ್ಲ ಎಂದು ಬಪ್ಪರಗಿ ಗ್ರಾಮದ ದಲಿತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...