ಯಾದಗಿರಿ | ಉನ್ನತ ಸ್ಥಾನಕ್ಕೇರಲು ಬಡತನ ಎಂದೂ ಅಡ್ಡಿಯಲ್ಲ: ಸ್ಯಾಮ್‌ಸನ್ ಬಂಟು

Date:

ಬದುಕಿನಲ್ಲಿ ಉನ್ನತ ಸ್ಥಾನಕ್ಕೇರಲು ಬಡತನ ಎಂದೂ ಅಡ್ಡಿಯಾಗುವುದಿಲ್ಲ. ಇಚ್ಛಾಶಕ್ತಿ ಇರಬೇಕಷ್ಟೇ ಎಂದು ವರ್ಲ್ಡ್ ವಿಷನ್ ಸಂಸ್ಥೆಯ ನಿರ್ದೇಶಕ ಸ್ಯಾಮ್‌ಸನ್ ಬಂಟು ಹೇಳಿದರು.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊತಪೇಟೆಯ ಸರಕಾರಿ ಪ್ರೌಢಶಾಲೆಯಲ್ಲಿ ವರ್ಲ್ಡ್ ವಿಷನ್ ಇಂಡಿಯಾ ವತಿಯಿಂದ ಪಿಎನ್ಎಸ್ಎಫ್ಎ ಮತ್ತು HOSh (hope to shine) ಅನುಷ್ಠಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, “ಮಕ್ಕಳು ಬಡತನದಿಂದ ವಿದ್ಯಾಭ್ಯಾಸ ವಂಚಿತರಾಗಲು ಸಾಧ್ಯವಿಲ್ಲ. ಮಕ್ಕಳಿಗೆ ಓದುವ ಆಸಕ್ತಿ ಇರಬೇಕು. ಸರಕಾರವು ಅನೇಕ ಸೌಲಭ್ಯಗಳು ಒದಗಿಸುತ್ತಿದ್ದು ವರ್ಲ್ಡ್ ವಿಷನ್ ಸಂಸ್ಥೆ ಮಕ್ಕಳ ವಿಕಾಸಕ್ಕೋಸ್ಕರ ಕೆಲಸ ಕಾರ್ಯಗಳನ್ನು ಮಾಡುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಹಣಮಂತ್ ಕರಡಿ ಮಾತನಾಡಿ, ಮಕ್ಕಳಿಗೆ 14 ವರ್ಷದವರೆಗೆ ಅವರಿಗೆ ಕೊಡಬೇಕಾದ ಎಲ್ಲ ಸೌಲಭ್ಯ, ಮಕ್ಕಳ ಹಕ್ಕುಗಳನ್ನು ಪೂರೈಸಬೇಕು. ಯಾವುದೇ ಮಗುವು ಶಿಕ್ಷಣದಿಂದ ವಂಚಿತರಾಗದೆ ಇದ್ದರೆ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಜೀವಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಯಾದಗಿರಿ 22

ಯಾದಗಿರಿ ಜಿಲ್ಲಾ ಮಕ್ಕಳ ಯೋಜನಾಧಿಕಾರಿ ಪ್ರೇಮ್ ಮೂರ್ತಿ ಮಾತನಾಡಿ, ಮಕ್ಕಳಿಗೆ ಎಲ್ಲ ರೀತಿಯ ಸೌಲಭ್ಯಗಳು ಒದಗಿಸುವುದು ಹಾಗೂ ಮಕ್ಕಳ ಆರೈಕೆಯಲ್ಲಿ ಪಾಲಕರ ಕರ್ತವ್ಯ ಹಾಗೂ ಶಿಕ್ಷಕರ ಕರ್ತವ್ಯಗಳ ಬಗ್ಗೆ ತಿಳಿಸಿದರು.

ಮಕ್ಕಳ ಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ಮಾತನಾಡಿ, ಬಾಲಕಾರ್ಮಿಕ ಮಕ್ಕಳನ್ನು ಶಾಲೆಗೆ ಬರುವಂತೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ಎಲ್ಲ ಮಗು ಶಿಕ್ಷಣವನ್ನು ಪಡೆದುಕೊಳ್ಳುವುದು ಬಹಳ ಪ್ರಮುಖವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಕಲಚೇತನ ಮಕ್ಕಳಿಗೆ 6 ವೀಲ್ ಚೇರ್ ಹಾಗೂ ಅಂಗನವಾಡಿ ಮಕ್ಕಳಿಗೆ 350 ಟಿಫನ್ ಬಾಕ್ಸ್, ಪ್ರೌಢ ಶಾಲಾ ಮಕ್ಕಳಿಗೆ 220 ಹೈಜೀನ್ ಕಿಟ್, 10ನೇ ತರಗತಿ ಮಕ್ಕಳಿಗೆ ನೋಟ್ ಬುಕ್ ವಿತರಣೆ ಹಾಗೂ ಜನನ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಇದನ್ನು ಓದಿದ್ದೀರಾ? ಕಲಬುರಗಿ ಕೇಂದ್ರೀಯ ವಿವಿ ವಿವಾದ: ಆರ್‌ಎಸ್‌ಎಸ್‌ನ ಧ್ಯೇಯಗೀತೆ ಹಾಡಿದರು, ಬೆದರಿಕೆ ಒಡ್ಡಿದರು

ಕಾರ್ಯಕ್ರಮದ ಅಧ್ಯಕ್ಷ್ಯತೆಯನ್ನು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸಿ.ಬಿ.ರಾಜೇಶ್ವರಿ ವಹಿಸಿದ್ದರು. ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಅನಿಲ್ ತೇಜಪ್ಪ, ತಾಲೂಕು ಆರೋಗ್ಯಾಧಿಕಾರಿ ರಮೇಶ್ ಗುತ್ತೇದಾರ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಅಂಬಲಮ್ಮ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶಕೀನಾಬಿ, ಮೇಲ್ವಿಚಾರಕಿ ಅಂಜುಮ್ ಬೇಗಂ, ನಾಗಪ್ಪ, ಗ್ರಾಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶರಣಪ್ಪ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಲ್ಲಣ್ಣ ಹುಲಿಕಲ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಬು ಸೇರಿದಂತೆ ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...