ಯಾದಗಿರಿ | ಐದು ದಿನಗಳಲ್ಲಿ ಶಾಲೆ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ; ಉಮೇಶ ಮುದ್ನಾಳ ಎಚ್ಚರಿಕೆ

Date:

ಗುರುಮಠಕಲ್ ತಾಲೂಕಿನ ಗಣಪೂರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಭೂತ ಬಂಗಲೆಯಂತಿದೆ. ಶಾಲೆಯ ಸಮಸ್ಯೆಗಳನ್ನು ಐದು ದಿನಗಳಲ್ಲಿ ಪರಿಹರಿಸದಿದ್ದರೆ, ವಿಜಯಪುರ-ಹೈದರಾಬಾದ್‌ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತೇವೆ ಎಮದು ಸಾಮಾಜಿಕ ಕಾರ್ಯಕರ್ತ ಉಮೇಶ್ ಕೆ ಮುದ್ನಾಳ ಎಚ್ಚರಿಕೆ ನೀಡಿದ್ದಾರೆ.

“ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂಬ ಹಣೆ ಪಟ್ಟಿ ಹೊತ್ತಿರುವ ಯಾದಗಿರಿ ಜಿಲ್ಲೆಯಲ್ಲಿ ಗಣಪೂರ ಗ್ರಾಮದ ಶಾಲೆಯ ಪರಿಸ್ಥಿತಿ ನೋಡಿದರೆ ಆತಂಕ ಉಂಟು ಮಾಡುತ್ತದೆ. ಶಾಲೆಯ ಪರಿಸ್ಥಿತಿಯಿಂದಾಗಿ ಮಕ್ಕಳು ಶಾಲೆಗೆ ದಾಖಲಾಗುತ್ತಿಲ್ಲ” ಎಂದು ಅವರು ದೂರಿದ್ದಾರೆ.

“ಶಾಲೆಯ ಹಿಂದೆ ದೊಡ್ಡ ಗುಂಡಿಯಿದ್ದು, ಕೊಳಚೆ ನೀರು ತುಂಬಿಕೊಂಡು ಗಬ್ಬು ನಾರುತ್ತಿದೆ. ಹಂದಿಗಳ ಆವಾಸ ತಾಣವಾಗಿ ಮಾರ್ಪಟ್ಟಿದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಶಾಲೆಯ ನಾಲ್ಕು ಕೊಠಡಿಗಳು ಮಳೆಯಿಂದಾಗಿ ಸೋರುತ್ತಿವೆ. ಕೋಣೆಯ ಗೋಡೆ ಹಾಗೂ ಬೀಮ್‌ಗಳನ್ನು ಮುಟ್ಟಿದರೆ ಸಿಮೆಂಟ್ ಚಕ್ಕಿ ಉದುರಿ ಬೀಳುತ್ತಿದೆ. ಸುಮಾರು 200 ವಿದ್ಯಾರ್ಥಿಗಳ ಸಂಖ್ಯಾ ಬಲವಿರುವ ಶಾಲೆಯಲ್ಲಿ ಅತೀ ಕಡಿಮೆ ಹಾಜರಾತಿ ಇದೆ. ಶಾಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗಬೇಕೆಂದರೆ, ಶಾಲೆಯ ಸಮಸ್ಯೆಗಳನ್ನು ಪರಿಹರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ಹತ್ತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಶಾಲೆಯಲ್ಲಿ ಕೃಷಿ ಕೂಲಿ ಕಾರ್ಮಿಕರು ಹಾಗೂ ಬಡ ರೈತರ ಮಕ್ಕಳೇ ಹೆಚ್ಚಾಗಿ ಓದುತಿದ್ದು, ಶಾಲೆಯ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಶಾಲೆ ಪರಿಶೀಲನೆ ವೇಳೆ ಆಂಜಿನೇಯ ಬೆಳಗೇರಿ, ತಾಯಪ್ಪ ಕಾಳಬೆಳಗುಂದಿ, ಗಣಪೂರ ಗ್ರಾಮದ ಮುಖಂಡ ನರಸಪ್ಪ, ಶಂಕರ, ಎಸ್.ಡಿ.ಎಂ.ಸಿ. ಅಧ್ಯಕ್ಷ ಬಸವರಾಜ, ಗ್ರಾಪಂ ಸದಸ್ಯರಾದ ನರಸಿಂಗಪ್ಪ, ಭೀಮರಾಯ, ತಾಯಪ್ಪ ಹೊಸಡಿ, ನಿಂಗಪ್ಪ, ಚೆನ್ನಪ್ಪ, ಭೀಮರಾಯ ಬಂಕಲಗಿ, ಕಾಂತು, ಆಂಜಿನೇಯ, ಮಾದೇವಪ್ಪ, ಮಾದೇವ, ತಾಯಪ್ಪ ನವಾಬುರಜ ಸೇರಿ ಅನೇಕರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...