ಯಾದಗಿರಿ | ಪೌರ ಕಾರ್ಮಿಕರಿಗೆ ಕ್ಷಯ ರೋಗ ಅರಿವು ಕಾರ್ಯಕ್ರಮ

Date:

ಯಾದಗಿರಿಯಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನ ಘಟಕ ಮತ್ತು ನಗರ ಸಭೆ ಸಯುಕ್ತ ಆಶ್ರಯದಲ್ಲಿ ಕ್ಷಯ ಮುಕ್ತ ನಗರವನ್ನು ಮಾಡುವ ಸದಉದ್ದೇಶದಿಂದ ನಗರ ಸಭೆಯ ಪೌರ ಕಾರ್ಮಿಕರಿಗೆ ಕ್ಷಯ ರೋಗದ ಬಗ್ಗೆ ಅರಿವು ಕಾರ್ಯಕ್ರಮ ಮತ್ತು ಆರೋಗ್ಯ ತಪಾಸಣೆ ಶಿಬಿರವನ್ನು ಹಾಗೂ ʼಟಿಬಿ ಅನ್ನು ಸೋಲಿಸಿ ದೇಶವನ್ನು ಗೆಲ್ಲಿಸಿ ʼ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ. ಸಂಜೀವುಕುಮಾರ್ ಮಾತನಾಡಿ, ಕ್ಷಯ ರೋಗದ ಬಗ್ಗೆ ಭಯ ಬೇಡ. ಕ್ಷಯ ರೋಗವು ಒಂದು ಸಾಂಕ್ರಾಮಿಕ ರೋಗವಾಗಿದೆ. ಕ್ಷಯರೋಗ ಸೊಂಕಿತ ವ್ಯಕ್ತಿ ಇಂದ ಒಬ್ಬರಿಂದ ಒಬ್ಬರಿಗೆ ಗಾಳಿಯ ಮುಖಾಂತರ ಹರಡುವ ಒಂದು ಸಾಂಕ್ರಾಮಿಕ ರೋಗ. ಇದು ಮೈಕೋಬ್ಯಾಕ್ಟ್ರಿಯಂ (tuberculosis) ಎಂಬ ಒಂದು ಬ್ಯಾಕ್ಟ್ರಿಯ ಮುಖಾಂತರ ಹಾರಡುತ್ತದೆ ಎಂದು ಹೇಳಿದರು.

ಕ್ಷಯ ರೋಗ ಸಂಬಂಧಿಸಿದಂತೆ 2 ವಾರಕಿಂತ ಹೆಚ್ಚು ಕೆಮ್ಮು, ಕಫದಲ್ಲಿ ರಕ್ತ ಬೀಳುವದು, ತೂಕದಲ್ಲಿ ಪ್ರಮಾಣ ಕಡಿಮೆ ಆಗುವದು, ರಾತ್ರಿವೇಳೆ ಜ್ವರ ಬರುವದು, ಇವು ಕ್ಷಯ್ ರೋಗದ ಲಕ್ಷಣಗಳು. ಇದರಲ್ಲಿ ಯಾವದಾದ್ರು ಒಂದು ಲಕ್ಷಣ ಇದ್ದಲ್ಲಿ ಸಮೀಪದ ಆರೋಗ್ಯ ಕೇಂದ್ರಕ್ಕೆ ಹೋಗಿ ಸಂಬಂಧ ಪಟ್ಟ ವೈದ್ಯಧಿಕಾರಿಗಳ ಸಲಹೆ ಮೇರೆಗೆ ಕಫ ಪರಿಶೀಲನೆ ಮಾಡಿಸಿಕೊಳ್ಳಬೇಕು. ಕಫದ ಪರೀಕ್ಷೆಯನ್ನು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ವಾಗಿ ತಪಾಸಣೆ ಮಾಡಲಾಗುತ್ತದೆ ಮತ್ತು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಸಹ ನಿಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಷಯ ಸೊಂಕಿತ ವ್ಯಕ್ತಿಗೆ ಸರ್ಕಾರದಿಂದ ಪ್ರತಿ ತಿಂಗಳು 500 ರೂಪಾಯಿ ಪೌಷ್ಟಿಕ್ ಆಹಾರ ಸೇವೆನೆಗೋಸ್ಕರ ನೇರ ವಾಗಿ ಡಿಬಿಟಿ ಮುಖಾಂತರ ಅವರ ಖಾತೆಗೆ ಜಮಾ ಮಾಡಲಾಗುತ್ತದೆ. ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ನಗರ ಅರೋಗ್ಯ ಕೇಂದ್ರ ವೈದ್ಯಧಿಕಾರಿ ಡಾ. ವಿನುತಾ, ಸಲೀಂ ಹೆಲ್ತ್ ಇನ್ಸ್ಪೆಕ್ಟರ್, ಎಸ್‌ಟಿಎಲ್‌ಎಸ್‌ ಸುಭಾಷ್ ಮತ್ತು ಆಶಾ ಕಾರ್ಯ ಕರ್ತರು ಮತ್ತು ನಗರ ಸಭೆ ಸಿಬ್ಬಂದಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...