ಯಾದಗಿರಿ | ಜೋಡಿ ಕೊಲೆ​ ಕೇಸ್‌ಗೆ ಟ್ವಿಸ್ಟ್; ಪ್ರಕರಣದ ಹಿಂದೆ ವಿವಾಹೇತರ ಸಂಬಂಧದ ನೆರಳು

Date:

ಯಾದಗಿರಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. 11 ವರ್ಷಗಳ ಹಿಂದೆ ಅನೈತಿಕ ಸಂಬಂಧದ ವಿಚಾರದಿಂದ ಉಂಟಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.

ಇತ್ತೀಚೆಗೆ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಗ್ರಾಮದ ಬಳಿ ಎರಡು ಪ್ರತ್ಯೇಕ ಗುಂಪುಗಳಿಂದ ದಲಿತ ಮುಖಂಡ ಮಾಪಣ್ಣ (52) ಹಾಗೂ ಆತನ ಸಹಚರ ಅಲಿಸಾಬ (55)ರನ್ನು ಹತ್ಯೆ ಮಾಡಲಾಗಿತ್ತು. ಸದ್ಯ ಕೊಲೆ ಆರೋಪಿಗಳಾದ ಶಿವಪ್ಪಗೌಡ, ಹುಸೇನಿ, ಮೊಹಮ್ಮದ್ ರಿಯಾಜ್​ರನ್ನು ಪೊಲೀಸರು ಬಂಧಿಸಿದ್ದಾರೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಾ.16 ರಂದು ಸಾದ್ಯಾಪುರ ಕ್ರಾಸ್ ಬಳಿ ಕಟಿಂಗ್ ಮಾಡಿಸಿಕೊಂಡು ಹೋಗುತ್ತಿದ್ದಾಗ ಮಾಪಣ್ಣನನ್ನು ಸುಪಾರಿ ಪಡೆದಿದ್ದ ಗ್ಯಾಂಗ್​ ಒಂದು ಬರ್ಬರವಾಗಿ ಕೊಲೆ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಬಂಧಿತ ಆರೋಪಿ ಶಿವಪ್ಪಗೌಡ 11 ವರ್ಷಗಳ ಹಿಂದೆ ಅನೈತಿಕ ಸಂಬಂಧದಲ್ಲಿ ದಲಿತ ಮುಖಂಡ ಮಾಪಣ್ಣನ ಕಣ್ಣಿಗೆ ಸಿಕ್ಕಿಬಿದ್ದಿದ್ದ. ಆಗ ನ್ಯಾಯ ಪಂಚಾಯ್ತಿ ಮಾಡಲಾಗಿತ್ತು. ಇದೇ ವಿಚಾರಕ್ಕೆ ಮಾಪಣ್ಣ ಮತ್ತು ಶಿವಪ್ಪಗೌಡ ನಡುವೆ ದ್ವೇಷ ಬೆಳೆದಿತ್ತು. ಹಾಗಾಗಿ 2014ರಲ್ಲಿ ಮಾಪಣ್ಣ ಕೊಲೆಗೆ ರೌಡಿಶೀಟರ್ ಹುಸೇನಿಗೆ ಶಿವಪ್ಪಗೌಡ ಸುಪಾರಿ ಕೊಟ್ಟಿದ್ದ.

2014ರಲ್ಲಿ ಭೀಮರಾಯನಗುಡಿ ಬಳಿ ಮಾಪಣ್ಣನ ರೌಡಿಶೀಟರ್ ಹುಸೇನಿ ಗ್ಯಾಂಗ್​ ಗುಂಡಿನ ದಾಳಿ ಮಾಡಿತ್ತು. ಆಗ ಮಾಪಣ್ಣ ಸ್ವಲ್ಪದರಲ್ಲೇ ಬದುಕುಳಿದಿದ್ದ. ಬಳಿಕ 3 ಬಾರಿ ಮಾಪ್ಪಣ್ಣನ ಮೇಲೆ ಸುಪಾರಿ ಗ್ಯಾಂಗ್ ದಾಳಿ ಮಾಡಿತ್ತು. 2019ರಲ್ಲಿ ಮಾಪಣ್ಣ ಗ್ಯಾಂಗ್ ಹುಸೇನಿಯ ಮೇಲೆ ಹಲ್ಲೆ ಮಾಡಿತ್ತು. ಇದರಿಂದಾಗಿ ಮಾಪಣ್ಣ ಹಾಗೂ ಹುಸೇನಿ ನಡುವೆ ದ್ವೇಷ ಬೆಳೆದಿತ್ತು.

ಇದನ್ನೂ ಓದಿ: ಯಾದಗಿರಿ | ರಾಜ್ಯ ಸರ್ಕಾರದ ಅಸ್ಥಿರತೆ ಖಂಡನೀಯ: ದಸಂಸ ಪ್ರತಿಭಟನೆ

ಪ್ರತಿ ಭಾನುವಾರ ಮಾಪಣ್ಣ ಭೀಮರಾಯನಗುಡಿಗೆ ಬರುತ್ತಿದ್ದ. ಬೈಕ್​ನಲ್ಲಿ ಬರುತ್ತಿದ್ದ ಮಾಪಣ್ಣನನ್ನು ಕಾರಿನಲ್ಲಿ ಬೆನ್ನಟ್ಟಿದ್ದ ಗ್ಯಾಂಗ್, ಸಾದ್ಯಾಪುರ ಕ್ರಾಸ್ ಬಳಿ ಬೈಕ್​ಗೆ ಕಾರಿನಿಂದ ಡಿಕ್ಕಿ ಹೊಡೆದು ಬಳಿಕ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...