ಯಾದಗಿರಿ | ಸತ್ಯಾಗ್ರಹ ನಿರತ ಬೌದ್ಧ ಬಿಕ್ಕುಗಳ ಮೇಲೆ ದೌರ್ಜನ್ಯ; ಪ್ರತಿಭಟನೆಗೆ ಬುದ್ಧಿಸ್ಟ್ ಫೋರಂ ಕರೆ

Date:

ಮಹಾಬೋಧಿ ಮಹಾ ವಿಹಾರದ ಮುಕ್ತಿ ಆಂದೋಲನದ ಸತ್ಯಾಗ್ರಹ ನಿರತ ಬೌದ್ಧ ಬಿಕ್ಕುಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಆಲ್ ಇಂಡಿಯಾ ಬುದ್ಧಿಸ್ಟ್ ಫೋರಂ ಪ್ರತಿಭಟನೆಗೆ ಕರೆ ನೀಡಿದೆ.

ಆಲ್ ಇಂಡಿಯಾ ಬುದ್ಧಿಸ್ಟ್ ಫೋರಂ ಕರ್ನಾಟಕದ ಪ್ರತಿನಿಧಿ ಬುದ್ಧ ಘೋಷ್ ದೇವಿಂದ್ರ ಹೆಗಡೆ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ, “ಬೋಧ್ ಗಯಾ ಟೆಂಪಲ್ ಆಕ್ಟ್ 1949 ರದ್ದುಗೊಳಿಸಿ, ಮಹಾಬೋಧಿ ಮಹಾ ವಿಹಾರದ ಆಡಳಿತ ಸಂಪೂರ್ಣ ಬೌದ್ಧರಿಗೆ ನೀಡಬೇಕು ಎಂದು ಒತ್ತಾಯಿಸಿ ಬುದ್ಧ ಗಯಾದ ಮಹಾಬೋಧಿ ಮಹಾ ವಿಹಾರದ ಮುಂದೆ ಬೌದ್ಧ ಬಿಕ್ಕುಗಳ ನೇತೃತ್ವದಲ್ಲಿ ಫೆ. 12ರಿಂದ ಪ್ರಾರಂಭವಾದ ಮಹಾಬೋಧಿ ಮಹಾ ವಿಹಾರದ ಮುಕ್ತಿ ಆಂದೋಲನದ ಅನಿರ್ಧಿಷ್ಟಾವಧಿ ಸರದಿ ಆಮರಣಾಂತ ಉಪವಾಸ ಸತ್ಯಾಗ್ರಹ ಶಾಂತಿಯುತವಾಗಿ ಹದಿನಾರನೇ ದಿನಕ್ಕೆ ತಲುಪಿದೆ. ಈ ಹೋರಾಟವನ್ನು ವಿಫಲಗೊಳಿಸಲು ಸಂಘಪರಿವಾರ ಹಲವು ಕುತಂತ್ರಗಳನ್ನು ಮಾಡಿದೆ. ಆದರೆ ಧರಣಿ ನಿರತ ಬೌದ್ಧ ಸಂಘ ಶಾಂತಿ ಮತ್ತು ತಾಳ್ಮೆಯಿಂದ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನಡೆದುಕೊಂಡು ವಿರೋಧಿಗಳ ತಂತ್ರಗಳನ್ನು ವಿಫಲಗೊಳಿಸಿದೆ”

ಮಹಾಬೋಧಿ ಮಹಾ ವಿಹಾರದ ಆಡಳಿತ ಸಂಪೂರ್ಣ ಬೌದ್ಧರಿಗೆ ನೀಡುವವರೆಗೆ ಹೋರಾಟ ನಿಲ್ಲದು. ಬಿಹಾರ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ ಕಾಲಮಿತಿಯೊಳಗೆ ಬೌದ್ಧರ ಬೇಡಿಕೆ ಈಡೇರಿಸುತ್ತೇವೆ ಎಂದು ಲಿಖಿತ ರೂಪದಲ್ಲಿ ಆಶ್ವಾಸನೆ ನೀಡಿದರೆ ಮಾತ್ರ ಹೋರಾಟವನ್ನು ಮುಂದೂಡಬಹುದು” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆದರೆ ಸರ್ಕಾರ ತನ್ನ ಕುತಂತ್ರ ಬುದ್ದಿ ತೋರಿ, ಬಂತೇಜಿಗಳ ಮೇಲೆ ಪ್ರಾಣಿಗಳಿಗಿಂತ ಕೀಳಾಗಿ ದೌರ್ಜನ್ಯ ಎಸಗಿದ್ದು, ನಿಮ್ಮ ಆರೋಗ್ಯ ಸರಿ ಇಲ್ಲ ಎಂದು ಕೆಲವರನ್ನು ಅಂಬುಲೆನ್ಸ್ ಗೆ ಬಲವಂತವಾಗಿ ಹಾಕಿಕೊಂಡು, ಇನ್ನೂ ಕೆಲವರಿಗೆ ಇಲ್ಲಿ ಸತ್ಯಾಗ್ರಹ ಕೂಡಲು ನಿಮಗೆ ಪರವಾನಗಿ ಇಲ್ಲ ಎಂದು ಪೊಲೀಸ್ ವ್ಯಾನ್ ನಲ್ಲಿ ಎತ್ತಿಹಾಕಿ ಹಿಂಸೆ ನೀಡಿದ್ದು, ಮಹಿಳಾ ಬಿಕ್ಕುಣಿಗಳ ಜೊತೆ ಅನುಚಿತವಾಗಿ ವರ್ತನೆ ಮಾಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಎಲ್ಲರನ್ನೂ ಬಲವಂತವಾಗಿ ಸತ್ಯಾಗ್ರಹ ಸ್ಥಳದಿಂದ ಬಂಧಿಸಿ ಕರೆದೊಯ್ದಿದ್ದಾರೆ. ಕೆಲವರನ್ನು ಗಯಾ ನಗರದ ಅನುಗ್ರಹ ನಾರಾಯಣ ಮಗಧ ಮೆಡಿಕಲ್ ಕಾಲೇಜು ಆಸ್ಪತ್ರೆ ಗೇಟ್ ಬಳಿ ತಂದು ಬಿಟ್ಟು ಪೊಲೀಸರು ಪರಾರಿಯಾಗಿದ್ದಾರೆ. ಇನ್ನೂ ಕೆಲವರಿಗೆ ಎಲ್ಲಿ ಬಂಧನದಲ್ಲಿ ಇಟ್ಟಿದ್ದಾರೆ ಎಂದು ಮಾಹಿತಿ ಸಹ ನೀಡಿರುವುದಿಲ್ಲ ಬಂತೇಜಿಗಳ ಆರೋಗ್ಯ ನೆಪ ಹೇಳಿದ ಅಧಿಕಾರಿಗಳು ಬಂತೇಜಿಗಳನ್ನು ಕನಿಷ್ಠ ಆಸ್ಪತ್ರೆಗೆ ದಾಖಲು ಸಹ ಮಾಡದೆ ಅಮಾನವೀಯವಾಗಿ ವರ್ತನೆ ಮಾಡಿದ್ದಾರೆ
ಬಿಹಾರ ಸರ್ಕಾರದ ಈ ಕ್ರಮ ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದೆ” ಎಂದು ಆರೋಪಿಸಿದರು.

ಇದನ್ನೂ ಓದಿ: ಉನ್ನತ ಶಿಕ್ಷಣ ಸಂಸ್ಥೆಯಿಲ್ಲ, ಸಾಕ್ಷರತೆಯೂ ಇಲ್ಲ: ಶೈಕ್ಷಣಿಕವಾಗಿ ಹಿಂದುಳಿದ ಯಾದಗಿರಿ

“ಕರ್ನಾಟಕ ರಾಜ್ಯದ ಎಲ್ಲಾ ದಲಿತ ಸಂಘಟನೆಗಳು, ಬೌದ್ಧ ಸಂಘ ಸಂಸ್ಥೆಗಳು ಮತ್ತು ಪ್ರಗತಿಪರ ಸಂಘಟನೆಗಳು, ಹಾಗೂ ಪ್ರಜಾಪ್ರಭುತ್ವ ವಾದಿ ಚಿಂತಕರು ಈ ಘಟನೆಯನ್ನು ಉಗ್ರವಾಗಿ ಖಂಡಿಸಿ ಪ್ರತಿಭಟನೆ ಮಾಡಿ ಮಹಾಬೋಧಿ ಮಹಾ ವಿಹಾರ ಮುಕ್ತಿ ಆಂದೋಲನಕ್ಕೆ ಬೆಂಬಲಿಸಬೇಕೆಂದು ಮತ್ತು ಆದಷ್ಟು ಬೇಗನೆ ಎಲ್ಲಾ ಜಿಲ್ಲೆಗಳಿಂದ ತಂಡಗಳನ್ನು ರಚಿಸಿಕೊಂಡು ಬುದ್ಧ ಗಯಾಕ್ಕೆ ತೆರಳಿ ಪ್ರತಿಭಟನಾ ಧರಣಿಯಲ್ಲಿ ಭಾಗವಹಿಸಬೇಕೆಂದು” ಆಲ್ ಇಂಡಿಯಾ ಬುದ್ಧಿಸ್ಟ್ ಫೋರಂ ಪ್ರತಿನಿಧಿ ಬುದ್ಧಘೋಷ್ ದೇವೇಂದ್ರ ಹೆಗಡೆ ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...