ಯಾದಗಿರಿ | ಗೋಗಡಿಹಾಳ ಗ್ರಾಮದ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರ ನೇಮಕಕ್ಕೆ ಒತ್ತಾಯ

Date:

ಗೋಗಡಿಹಾಳ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಸರ್ಕಾರಿ ಪ್ರಾಥಮಿಕ ಶಾಲೆ ಇದೆ. ಈ ಶಾಲೆಯಲ್ಲಿ ಸುಮಾರು 75 ವಿದ್ಯಾರ್ಥಿಗಳು ಇದ್ದು, ಇಷ್ಟೂ ಮಂದಿ ವಿದ್ಯಾರ್ಥಿಗಳಿಗೆ ಕೇವಲ ಒಬ್ಬರೇ ಖಾಯಂ ಶಿಕ್ಷಕರಿದ್ದಾರೆ. ಒಬ್ಬರೇ ಶಿಕ್ಷಕರಿಂದ ಕಚೇರಿಯ ಕೆಲಸ ಮತ್ತು ಮಕ್ಕಳಿಗೆ ವಿದ್ಯಾಭ್ಯಾಸ ಮಾಡಿಸುವುದಕ್ಕೆ ತುಂಬಾ ತೊಂದರೆಯಾಗಿದೆ ಎಂದು ಎಐಕೆಕೆಎಮ್‌ಎಸ್‌ ಉಪಾಧ್ಯಕ್ಷ ಜಮಾಲ್ ಸಹಾಬ್ ಹೇಳಿದರು.

ಗೋಗಡಿಹಾಳ ಗ್ರಾಮದ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಿಸುವಂತೆ ಒತ್ತಾಯಿಸಿ ಎಐಕೆಕೆಎಮ್‌ಎಸ್‌ ಹಾಗೂ ಎಐಡಿಎಸ್‌ಒ ನೇತೃತ್ವದಲ್ಲಿ ಯಾದಗಿರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

“ಒಬ್ಬರೇ ಶಿಕ್ಷಕರಿಂದ ಎಲ್ಲ ಕೆಲಸವೂ ಆಗಬೇಕೆಂದರೆ ಮಕ್ಕಳ ಕಲಿಕೆ ಕುಂಠಿತವಾಗಿ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ. ಈಗಾಗಲೇ ಈ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ ಕೂಡಾ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕೂಡಲೇ ಈ ಶಾಲೆಗೆ ಶಿಕ್ಷಕರನ್ನು ನೇಮಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಐಡಿಎಸ್‌ಒನ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ ಕೆ ಮಾತನಾಡಿ, “ಶಾಲೆಗೆ ಸಮರ್ಪಕ ಶಿಕ್ಷಕರನ್ನು ನೇಮಿಸಬೇಕಾಗಿರುವುದು ಸರ್ಕಾರದ ಕನಿಷ್ಠ ಜವಾಬ್ದಾರಿ. ಈ ಕನಿಷ್ಠ ಅವಶ್ಯಕತೆಯನ್ನು ಪೂರೈಸದಿರುವುದು ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಎತ್ತಿ ತೋರಿಸುತ್ತದೆ. ಸರ್ಕಾರಿ ಶಾಲೆಗಳಿಗೆ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ನೀಡದೆ ಸರ್ಕಾರ ಬಡಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಯಾವ ಸರ್ಕಾರ ಸರಕಾರಿ ಶಾಲೆಗಳ ಸಂಪೂರ್ಣ ಜವಾಬ್ದಾರಿಯನ್ನು ಹೊರಬೇಕೋ ಅವರೇ ಇಂದು ಸರ್ಕಾರಿ ಶಾಲೆಗಳನ್ನು ಮುಚ್ಚಲು ಕಾರಣಕರ್ತರಾಗಿದ್ದಾರೆ. ರಾಜ್ಯಾದ್ಯಂತ 4,700 ಸರ್ಕಾರಿ ಶಾಲೆಗಳು‌, ಏಕೋಪಾಧ್ಯಾಯ ಶಾಲೆಗಳಿವೆ. ಇದನ್ನು ಎಐಡಿಎಸ್‌ಒ ತೀವ್ರವಾಗಿ ಖಂಡಿಸುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಮನವಿ ಪತ್ರ ಸ್ವೀಕರಿಸಲು ಬಂದ ಅಧಿಕಾರಿಗಳು ಸಮರ್ಪಕ ಪರಿಹಾರ ಕೊಡದಿದ್ದಕ್ಕೆ, ಮಕ್ಕಳೊಂದಿಗೆ ಡಿಡಿಪಿಐ ಕಚೇರಿಯ ಮುಂದೆ ಧರಣಿ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...