ಯಾದಗಿರಿ | ಕಾನೂನು ಬಾಹಿರವಾಗಿ ಹುದ್ದೆ ಆಯ್ಕೆ ಆರೋಪ : ಅಧಿಕಾರಿಯನ್ನು ವಜಾಗೊಳಿಸುವಂತೆ ಆಗ್ರಹಿಸಿ ಮನವಿ

Date:

ಶಹಾಪೂರ ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ (ಗ್ರಾ.ಕು.ನೀ.ನೈ.) ಉಪವಿಭಾಗದಲ್ಲಿ ನೀರಿನ ಮಾದರಿ ಸಂಗ್ರಾಹಕ ಹುದ್ದೆಗೆ ಕಾನೂನು ಬಾಹಿರವಾಗಿ ನೇಮಕಾತಿ ನಡೆದಿರುವುದನ್ನು ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ನೀಲಿ ಸೇನೆಯ ರಾಜ್ಯ ಉಪಾಧ್ಯಕ್ಷ ಜಾಪರ ಹುಸೇನಿ ಅವರು ಉಸ್ತುವಾರಿ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಆಯರೆಡ್ಡಿ ಅವರನ್ನು ತಕ್ಷಣ ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ‘ಶಹಾಪೂರ ಉಪವಿಭಾಗದ ಗ್ರಾ.ಕು.ನೀ.ನೈ. ಕಚೇರಿಯಲ್ಲಿ ಖಾಲಿ ಇರುವ ನೀರಿನ ಮಾದರಿ ಸಂಗ್ರಾಹಕ ಹುದ್ದೆಗೆ ಯಾವುದೇ ಸಾರ್ವಜನಿಕ ಪ್ರಕಟಣೆ, ಮೆರಿಟ್ ಆಧಾರಿತ ಆಯ್ಕೆ, ಮೀಸಲಾತಿ ನಿಯಮ ಅಥವಾ ಪಾರದರ್ಶಕ ಪ್ರಕ್ರಿಯೆ ಅನುಸರಿಸದೆ ಕಾನೂನುಬಾಹಿರವಾಗಿ ಆಯ್ಕೆ ಮಾಡಲಾಗಿದೆ. ಇದು ಸರ್ಕಾರದ ನೇಮಕಾತಿ ನಿಯಮಾವಳಿಗಳಿಗೆ ವಿರುದ್ಧವಾಗಿದೆ’ ಎಂದು ಆರೋಪಿಸಿದರು.

ಮುಂದುವರಿದು ಅವರು, ‘ಹುದ್ದೆ ಭರ್ತಿಯಲ್ಲಿ ಪಾರದರ್ಶಕತೆ ಹಾಗೂ ಅರ್ಹತಾ ಮಾನದಂಡಗಳನ್ನು ಪಾಲಿಸಬೇಕು. ಅನರ್ಹ ವ್ಯಕ್ತಿಯನ್ನು ನೇಮಕ ಮಾಡುವುದು ಸರಕಾರದ ನೀತಿಗೆ ಧಕ್ಕೆ ತರುತ್ತದೆ. ಆದ್ದರಿಂದ ಈ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ರದ್ದುಪಡಿಸಿ, ನಿಯಮಾನುಸಾರವಾಗಿ ಹೊಸ ಆಯ್ಕೆ ಪ್ರಕ್ರಿಯೆ ಕೈಗೊಳ್ಳಬೇಕು,’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಚಿತ್ತಾಪುರ ಆರೆಸ್ಸೆಸ್‌ ಪಥಸಂಚಲನಕ್ಕೆ ಅನುಮತಿ ವಿಚಾರಣೆ ನ.13ಕ್ಕೆ ಮುಂದೂಡಿಕೆ

‘ಒಂದು ವೇಳೆ ನೇಮಕಾತಿಯನ್ನು ತಡೆಯದಿದ್ದರೆ ಶಹಾಪೂರ ಉಪವಿಭಾಗದ ಕಚೇರಿ ಮುಂದೆ ಉಗ್ರ ಹೋರಾಟ ನಡೆಸಲಾಗುವುದೆಂದು’ ಎಚ್ಚರಿಕೆ ನೀಡುವುದರ ಮೂಲಕ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಅಧ್ಯಕ್ಷ ವಾಲ್ಮೀಕಿ ನಾಯಕರ, ವಿಶ್ವರಾಧ್ಯ ದಳವಾಯಿ, ಕಾಸಿಮಸಾಬ ನಡಿಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...