ಯಾದಗಿರಿ | ಮಳೆಯಲ್ಲಿಯೇ ಮುಂದುವರೆದ ಆಶಾ ಕಾರ್ಯಕರ್ತೆಯರ ಧರಣಿ

Date:

ಮುಖ್ಯಮಂತ್ರಿಗಳು ಕೊಟ್ಟ 10 ಗ್ಯಾರಂಟಿ ಭರವಸೆಯ ಮಾತನ್ನು ಉಳಿಸಿಕೊಳ್ಳಬೇಕು, ನಿವೃತ್ತಿ ಆಶಾಗಳಿಗೆ 5 ಲಕ್ಷ ಪರಿಹಾರ ನೀಡಬೇಕೆಂದು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತವಾದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನಾ ಧರಣಿಯು ನಗರದಲ್ಲಿ ಜೋರಾಗಿ ಸುರಿದ ಮಳೆಯ ನಡುವೆಯೂ ಸಹ ಧರಣಿ ಮುಂದುವರೆದಿದೆ.

‘ರಾತ್ರಿಯೂ ಸಹ ಧರಣಾ ಸ್ಥಳದಲ್ಲೇ ಮಲಗಿದ್ದ ಆಶಾ ಕಾರ್ಯಕರ್ತೆಯರು ಮಧ್ಯಾಹ್ನ ಸುರಿದ ಮಳೆಯನ್ನು ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಚಿಕ್ಕ ಚಿಕ್ಕ ಮಕ್ಕಳನ್ನು ಕೊಂಕಳಲ್ಲಿ ಎತ್ತಿಕೊಂಡು ಮಳೆಯಲ್ಲೇ ನಿಂತಿದ್ದರು. ಇಡೀ ಪ್ರತಿಭಟನಾ ಸ್ಥಳದಲ್ಲಿ ಮಳೆ ನೀರು ಹರಿದಾಡಿದವು. ಸುಮಾರು ಒಂದು ಗಂಟೆಗೂ ಅಧಿಕ ಸುರಿದ ಮಳೆಯಲ್ಲೇ ಹೋರಾಟ ಮುಂದುವರೆಸಿದರು.
ತಾವೇ ಸಿದ್ಧಪಡಿಸಿದ್ದ ಅಡುಗೆಯನ್ನು ಮಳೆಯಲ್ಲಿಯೇ ನಿಂತು ಊಟ ಮಾಡುತ್ತಿರುವುದು ಕಂಡುಬಂತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 14 at 11.49.57 AM

‘ಮಳೆ ಸ್ವಲ್ಪ ಕಡಿಮೆ ಆದ ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೇಡಿಕೆಗಳ ಮನವಿ ಸ್ವೀಕರಿಸಿ, ಮುಖ್ಯಮಂತ್ರಿಗಳಿಗೆ ಮನವಿ ರವಾನಿಸುಲಾಗುವುದೆಂದು’ ತಿಳಿಸಿದರು.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ಹೆಣ ಹೂಳಲು ಗ್ರಾಮ ಪಂಚಾಯ್ತಿಯವರು ಹೇಳಿಲ್ಲ, ದೇವಸ್ಥಾನದ ಮಾಹಿತಿ ಕೇಂದ್ರದಿಂದಲೇ ಸೂಚನೆ: ಸಾಕ್ಷಿ ದೂರುದಾರ

ಎರಡನೇ ದಿನದ ಧರಣಿಯಲ್ಲಿ ಡಿ ಉಮಾದೇವಿ, ರಾಮಲಿಂಗಪ ಬಿ.ಎನ್, ಮಹಾದೇವಿ, ಶ್ರೀದೇವಿ, ಇಂದ್ರಮ್ಮ, ರಸೀದಾ, ಲಲಿತಾ, ರಾಚಮ್ಮ, ಸತ್ಯಾದೇವಿ, ಸೂಗಮ್ಮ, ಕಾಮಾಕ್ಷಿ, ಸರೋಜಾ, ಮಲ್ಲಮ್ಮ, ಅನಿತಾ, ಪದ್ಮಾ, ಜಯಶ್ರೀ, ಕೃಪಾ, ಶರಬಮ್ಮ, ಸುನೀತಾ, ಬೇಬಿ, ರೇಣುಕಾ, ಪುಷ್ಪಲಾತ ಸೇರಿದಂತೆ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...