ಯಾದಗಿರಿ | ಮಕ್ಕಳ ಸಂರಕ್ಷಣೆ ಕಾಯ್ದೆಗಳ ಅರಿವು ಎಲ್ಲರಿಗೂ ಅವಶ್ಯ‌: ಮಲ್ಲಣ್ಣ ದೇಸಾಯಿ

Date:

ಮಕ್ಕಳ ಸಂರಕ್ಷಣೆ ಕುರಿತ ಕಾಯ್ದೆಗಳ ಅರಿವು ಪ್ರತಿಯೊಬ್ಬರಿಗೂ ಅತ್ಯವಶ್ಯಕ ಎಂದು ಶಹಾಪೂರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಣ್ಣ ದೇಸಾಯಿ ಹೇಳಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ ಮಕ್ಕಳ ಸಂರಕ್ಷಣಾ ಘಟಕದ ಸದಸ್ಯರಿಗೆ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳೆಂದರೆ ಯಾರು, ಯಾವ ಕಾಯ್ದೆಗಳಲ್ಲಿ ಯಾರ್ಯಾರನ್ನು ಮಕ್ಕಳೆಂದು ಕರೆಯುತ್ತಾರೆ ಎಂಬುದನ್ನು ತಿಳಿದಿರಬೇಕು. ಜುವಿನಯಿಲ್ ಜಸ್ಟಿಸ್ ಆಕ್ಟ್ 2015, ಪ್ರೊಟೆಕ್ಷನ್ ಆಫ್ ಚಿಲ್ಡ್ರನ್ ಫ್ರಮ್ ಸೆಕ್ಷುವಲ್ ಅಫೆನ್ಸ್ ಆಕ್ಟ್ (ಪೋಕ್ಸೋ) 2012, ಚೈಲ್ಡ್ ಅಂಡ್ ಅಡೊಲೊಸೆಂಟ್ ಲೇಬರ್ ಪ್ರೊಹಿಬಿಷನ್ ಅಂಡ್ ರೆಗ್ಯುಲೇಶನ್ ಆಕ್ಟ್ 1986. ಪ್ರೋಹಿಬಿಷನ್ ಆಫ್ ಚೈಲ್ಡ್ ಮ್ಯಾರೇಜ್ ಆಕ್ಟ್ 2006, ಮತ್ತು ಮಕ್ಕಳ ಹಕ್ಕುಗಳ ಕುರಿತು ಸವಿಸ್ತಾರವಾಗಿ ಶಿಬಿರಾರ್ಥಿಗಳಿಗೆ ತಿಳಿಸಿಕೊಟ್ಟರು.

ಮಕ್ಕಳ ರಕ್ಷಣಾ ಘಟಕದ ಸದಸ್ಯರಿಗೆ ಹಲವು ಪ್ರಶ್ನೆಗಳನ್ನು ಕೇಳಿ ವಿಷಯಗಳನ್ನು ಅರ್ಥಮಾಡಿಕೊಳ್ಳುವಂತೆ ಮಾಡಿದರು. ಮಕ್ಕಳ ಮದುವೆ ಮಾಡಿದರೆ ಆಗುವ ಶಿಕ್ಷೆಯನ್ನು, ಮಕ್ಕಳಿಗೆ ಕೂಲಿ ಕೆಲಸಕ್ಕೆ ತೆಗೆದುಕೊಂಡರೆ ಆಗುವ ಶಿಕ್ಷೆಯನ್ನು, ಮಕ್ಕಳನ್ನು ಲೈಂಗಿಕವಾಗಿ ಶೋಷಣೆಗೊಳಪಡಿಸಿದರೆ ಮತ್ತು ಯಾವುದೇ ರೀತಿಯ ದೌರ್ಜನ್ಯ ಮಾಡಿದರೆ ಆಗುವ ಶಿಕ್ಷೆಯನ್ನು ವಿಸ್ತಾರವಾಗಿ ತಿಳಿಯಪಡಿಸಿದರು. ಮಕ್ಕಳ ಮೇಲೆ ಅತ್ಯಾಚಾರ ಮಾಡಿದರೆ ಆಗುವ ಶಿಕ್ಷೆಯನ್ನು ಯಾರಿಂದಲೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲವೆಂದು ಮನವರಿಕೆ ಮಾಡಿದರು. ಮಕ್ಕಳ ರಕ್ಷಣೆ ಕುರಿತು ಏನಾದರೂ ಘಟನೆಗಳು ಕಂಡು ಬಂದರೆ ಕೂಡಲೇ 1098 ಗೆ ಸಂಪರ್ಕಿಸಬೇಕೆಂದು ಕರೆ ನೀಡಿದರು. ಅನಿಲ್ ತೇಜಪ್ಪ ಬಲ್ಲೂರ್ ಕರ್ ವ್ಯವಸ್ಥಾಪಕರು ವರ್ಲ್ಡ್ ವಿಜನ್ ಇಂಡಿಯಾ ಅವರು ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತಿಥಿಗಳಾಗಿ ಆಗಮಿಸಿದ ಸಂತೋಷ್ ಕುಮಾರ್ ವಿಶ್ವಕರ್ಮ ಅವರು ಮಾತನಾಡಿ, “ಮಕ್ಕಳ ಸಂರಕ್ಷಣೆ ಕುರಿತು, ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಾ ಮಕ್ಕಳ ಅಭಿವೃದ್ಧಿಗಾಗಿ ಶ್ರಮಿಸಬೇಕೆಂದು” ಹೇಳಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ಗಂಗಮ್ಮ, ಐಶ್ವರ್ಯ, ಪೂಜಾ, ಪ್ರಕಾಶ್ ಹಾಗೂ 10ನೇ ತರಗತಿಯಲ್ಲಿ ಅಗ್ರ ಶ್ರೇಣಿಯಲ್ಲಿ ಪಾಸಾದ ಹುಸೇನ್ ಬಾಷಾ ಮತ್ತು ಶ್ರೇಯ ಅವರಿಗೆ ಸನ್ಮಾನ ಮಾಡಲಾಯಿತು.

ಇದನ್ನೂ ಓದಿ: ಯಾದಗಿರಿ | ನೀರು ಕುಡಿಯಲು ಹೋದ ಮೂವರು ಬಾಲಕರು ದುರ್ಮರಣ

ಕನ್ಯಾಕೋಳೂರು, ಜೆ ತಾಂಡ, ಹೊತಪೇಟೆ, ರಸ್ತಾಪುರ್ ಶಾರದಹಳ್ಳಿ ವಿಭೂತಿಹಳ್ಳಿ ಬೆನಕನಹಳ್ಳಿ ಮತ್ತು ತಿಪ್ಪನಹಳ್ಳಿ ಗಳಿಂದ ಮಕ್ಕಳ ಸಂರಕ್ಷಣೆ ಘಟಕದ ಸದಸ್ಯರುಗಳು ಮತ್ತು ಮಕ್ಕಳ ಗುಂಪುಗಳ ಸದಸ್ಯರುಗಳು ಸೇರಿದಂತೆ ಸುಮಾರು 55 ಮಂದಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಮೈಕಲ್ ಸಂಪತ್ ಕುಮಾರ, ರಾಬರ್ಟ್, ಅಶೋಕ್, ಶಿವು, ಮೇನಕ, ಸಿದ್ದಮ್ಮ ಮತ್ತು ಇತರ ಸ್ವಯಂಸೇವಕರುಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...