ಯಾದಗಿರಿ | ಭೀಮ್‌ ಆರ್ಮಿ ಸಂಘಟನೆ ಪದಾಧಿಕಾರಿಗಳ ಆಯ್ಕೆ

Date:

ತಳಮಟ್ಟದ ಸಮುದಾಯದ ಜನಾಂಗದ ಮೇಲೆ ನಿರಂತರವಾಗಿ ದಬ್ಬಾಳಿಕೆ ದೌರ್ಜನ್ಯ ಸಾಮಾಜಿಕ ಬಹಿಷ್ಕಾರ ನಡೆತ್ತಲೇ ಇವೆ. ಇವುಗಳನ್ನು ತಡೆಗಟ್ಟುವಲ್ಲಿ ಜಿಲ್ಲಾಡಳಿತ ಸರ್ಕಾರ ಸಂಪೂರ್ಣ ವಿಫಲವಾಗಿರುವುದರಿಂದ ಯಾದಗಿರಿ ಜಿಲ್ಲೆಯಲ್ಲಿ ಭೀಮ್ ಆರ್ಮಿ ಸಂಘಟನೆ ಅಸ್ತಿತ್ವಕ್ಕೆ ತರಲು ನಿರ್ಧರಿಸಲಾಯಿತು ಎಂದು ಪ್ರಧಾನ ಕಾರ್ಯದರ್ಶಿ ಉಸ್ತುವಾರಿ ಶರಣರೆಡ್ಡಿ ಹತ್ತಿಗೂಡುರ್‌ ತಿಳಿಸಿದರು.

ಯಾದಗಿರಿ ಜಿಲ್ಲೆಯ ಡಾ. ಎಸ್ ಬಿ ಕಾಮರೆಡ್ಡಿ ಕಾರ್ಯಾಲಯದಲ್ಲಿ ನೂತನ ಭೀಮ್ ಆರ್ಮಿ (ಭಾರತ ಏಕತಾ ಮಿಷನ್) ಜಿಲ್ಲಾ ಸಮಿತಿ ಪದಾಧಿಕಾರಿಗಳ ಆಯ್ಕೆ ಸಂದರ್ಭದಲ್ಲಿ ಮಾತನಾಡಿದರು.

“ಮುಂಬರುವ ದಿನಗಳಲ್ಲಿ ಯಾದಗಿರಿ ಜಿಲ್ಲೆಯಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ರೈತರು, ಕಾರ್ಮಿಕರು, ಧ್ವನಿ ಇಲ್ಲದವರಿಗೆ ಧ್ವನಿಯಾಗಿ, ಸಮಾಜಮುಖಿ ಕಾರ್ಯಕ್ಕೆ ಸಂಘಟನೆಯ ಅವಶ್ಯಕತೆ ಇದೆ. ಸವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಸರ್ವ ಜನಾಂಗದ ಸಮಾನತೆ ಸಮಬಾಳು ಸಮಪಾಲು ಎಂಬಂತೆ ಆರ್ಥಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯವಾಗಿ ಸಮಾಜದ ಮುನ್ನೆಲೆಗೆ ಬರಲು ನಾವೆಲ್ಲರೂ ಒಗ್ಗೂಡಿ ಸಂಘಟನೆ ಕಟ್ಟಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶೋಷಿತ ಸಮುದಾಯದವರು ರಾಜಕೀಯ ಅಧಿಕಾರಕ್ಕಾಗಿ ಹೋರಾಟ ಮಾಡುವ ಅನಿವಾರ್ಯತೆ ಎದುರಾಗಿದೆ. ಸಮಾಜದ ಮಹಿಳೆಯರು, ಯುವಕರು ಸರ್ಕಾರದ ಸೌಲಭ್ಯ ಪಡೆದುಕೊಂಡು ಸಮಾಜದ ಮುನ್ನೆಲೆಗೆ ಬರಲು ಸಾಧ್ಯ. ಬುದ್ಧ, ಬಸವ, ಅಂಬೇಡ್ಕರ್ ಅವರ ಆಚಾರ ವಿಚಾರಧಾರೆಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಏಳಿಗೆಗಾಗಿ ದುಡಿಯೋಣ” ಎಂದು ಕರೆ ಕೊಟ್ಟರು.

ರಾಷ್ಟ್ರೀಯ ಅಧ್ಯಕ್ಷ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ರಾವಣ ನಾಯಕತ್ವ ಒಪ್ಪಿಕೊಂಡು ಭೀಮ್ ಆರ್ಮಿ ಗೋಪಾಲ್ ಡಿ‌ ಎಸ್ ಆದೇಶದ ಮೇರೆಗೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಜು ಅಣಬಿ ಅವರ ಅಧ್ಯಕ್ಷತೆಯಲ್ಲಿ ಪ್ರಮುಖ ಮುಖಂಡರು ಕಾರ್ಯಕರ್ತರು ಸೇರಿ ಎಲ್ಲರ ಅಭಿಪ್ರಾಯ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಮಣಿಪುರ ಘಟನೆ: ಅತ್ಯಾಚಾರ ಆರೋಪಿಗಳಿಗೆ ಮರಣ ದಂಡನೆ ವಿಧಿಸಿ; ದಸಂಸ ಆಗ್ರಹ

ಪೂರ್ವಭಾವಿ ಸಭೆಯಲ್ಲಿ ಸರ್ವಾನುಮತದಿಂದ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಅಧಿಕೃತವಾಗಿ ಆಯ್ಕೆ ಮಾಡಿದರು. ಭೀಮ್ ಆರ್ಮಿ ಜಿಲ್ಲಾ ಅಧ್ಯಕ್ಷರಾಗಿ ಪ್ರಭು ಬುಕ್ಕಲ್, ಪ್ರಧಾನ ಕಾರ್ಯದರ್ಶಿ ಉಸ್ತುವಾರಿಯಾಗಿ ಶರಣರೆಡ್ಡಿ ಹತ್ತಿಗೂಡುರ್‌, ಉಪಾಧ್ಯಕ್ಷರಾಗಿ ಕಂಡಪ್ಪ ಅಯ್ಯಾಳ ಬಿ, ಮಾನಪ್ಪ ರಸ್ತಾಪುರ್, ಮಲ್ಲಿಕಾರ್ಜುನ್ ಯರಗೋಳ ಅವರನ್ನು ನೇಮಕ ಮಾಡಿದರು.

ಈ ಸಂದರ್ಭದಲ್ಲಿ ಮರ್ಲಿಂಗ ಬೆನಕನಹಳ್ಳಿ, ಅಂಬಲಪ್ಪ ರಸ್ತಾಪುರ್, ಮಡಿವಾಳಪ್ಪ ಅಣಬಿ, ವಸಂತ ಮ್ಯಾಗೇರಿ, ವಿಶಾಲ ಅಣಿಬಿ, ಸಿದ್ದು ಯಾದಗಿರಿ, ಬಸು ನಟೇಕರ್, ಮಲ್ಲಣ್ಣ ಮಾಗನೂರು, ಪರಶುರಾಮ್ ಚಲವಾದಿ, ಶರಣು ಗ್ಯಾಂಗಿನ್, ಬಸಲಿಂಗಪ್ಪ ಶಿರವಾಳ, ದೇವಪ್ಪ ಪೂಜಾರಿ, ಶರಣು ಶಿರವಾಳ, ಮಲ್ಲಿಕಾರ್ಜುನ್ ಹೊಸಮನಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...