ಯಾದಗಿರಿ | ಬಿರಾದಾರ ಆಸ್ಪತ್ರೆಯಲ್ಲಿ ಮಗು ಸಾವು; ಎಫ್‌ಐಆರ್ ನಂತರವೂ ಕ್ರಮಕ್ಕೆ ನಿರ್ಲಕ್ಷ್ಯ

Date:

ಯಾದಗಿರಿ ನಗರದ ಡಾ. ಎಸ್ ಎಂ ಬಿರಾದಾರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಮ್ಮ ಕರ್ನಾಟಕ ಸೇನೆ ಯಾದಗಿರಿ ಜಿಲ್ಲಾ ಘಟಕ ಆರೋಪಿಸಿದೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀದೇವಿ ಎನ್ ಕಟ್ಟಿಮನಿ ಮಾತನಾಡಿ, “‘ಆಸ್ಪತ್ರೆಯಿಂದ ಈಗಾಗಲೇ ಇಂತಹ ಪ್ರಕರಣಗಳು ವರದಿಯಾಗಿದ್ದು, 45 ದಿನಗಳ ಶಿಶುವಿಗೆ ಅವಧಿ ಮುಗಿದ ವ್ಯಾಕ್ಸಿನ್ ಹಾಕಿದ ಪ್ರಕರಣ ಸೇರಿದಂತೆ ರಾಮಸಮುದ್ರ ಗ್ರಾಮದ ಚೇಳು ಕಡಿದ ಮಗುವಿನ ಸಾವಿನ ಪ್ರಕರಣಗಳು ನಡೆದಿವೆ. ಈ ಎಲ್ಲ ಘಟನೆಗಳಿಗೆ ಆಸ್ಪತ್ರೆ ವೈದ್ಯರು ಹಾಗೂ ಹೆಚ್ಚುವರಿ ಔಷಧ ನಿಯಂತ್ರಕರು ಸೇರಿದಂತೆ 5 ಜನರ ಮೇಲೆ ಯಾದಗಿರಿ ನಗರ ಠಾಣೆಯಲ್ಲಿ ಕಳೆದ ಮಾರ್ಚ್‌ನಲ್ಲಿಯೇ ಪ್ರಕರಣ ದಾಖಲಾಗಿದೆ. ನಗರದ ದೇವಮ್ಮ ಎನ್ನುವವರ 45 ದಿನದ ಮಗುವಿಗೆ 2022 ರಲ್ಲಿಯೇ ಅವಧಿ ಮುಗಿದ ವ್ಯಾಕ್ಸಿನ್ ಅನ್ನು ಈ ವರ್ಷದ ಫೆಬ್ರವರಿಯಲ್ಲಿ ಹಾಕಿದ್ದಾರೆ. ಇದನ್ನು ತಿಳಿದ ಮಗುವಿನ ತಂದೆ ದೂರು ದಾಖಲಿಸಿದ್ದಾರೆ. ಇದಲ್ಲದೇ ಚೇಳು ಕಡಿತಕ್ಕೊಳಗಾದ ಮಗುವಿಗೂ ಸರಿಯಾಗಿ ಚಿಕಿತ್ಸೆ ನೀಡದೇ ಮಗುವಿನ ಸಾವಿಗೆ ಕಾರಣರಾಗಿದ್ದಾರೆ. ವಾಸ್ತವದಲ್ಲಿ ಹೃದಯ ತಜ್ಞರಾಗಿರುವ ಇವರು ತಮಗೆ ಸಂಬಂಧವಿಲ್ಲದ ಚಿಕಿತ್ಸೆ ನೀಡಿ ಅಮಾಯಕರ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಯಾದಗಿರಿ | ನೀರು ಕುಡಿಯಲು ಹೋದ ಮೂವರು ಬಾಲಕರು ದುರ್ಮರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಕರಣ ಸಂಬಂಧ 10 ದಿನಗಳ ಒಳಗಾಗಿ ಆಸ್ಪತ್ರೆ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಆಸ್ಪತ್ರೆಗೆ ಮುಳ್ಳುಬೇಲಿ ಹಚ್ಚಿ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆನೀಡಿದರು.

ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...