ಯಾದಗಿರಿ | ಒಳಮೀಸಲಾತಿ ಸಮೀಕ್ಷೆ ನಮೂನೆಯಲ್ಲಿ ಧರ್ಮದ ಕಾಲಂ ಕೈಬಿಟ್ಟ ಆಯೋಗ : ದೇವೇಂದ್ರ ಹೆಗಡೆ

Date:

ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ವರ್ಗೀಕರಣಕ್ಕಾಗಿ ಸಮೀಕ್ಷೆ ಕೈಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರ ಏಕ ಸದಸ್ಯ ಆಯೋಗವು ಒಳಮೀಸಲಾತಿ ಸಮೀಕ್ಷಾ ನಮೂನೆಯನ್ನು ಬಿಡುಗಡೆ ಮಾಡಿದ್ದು, ನಮೂನೆಯಲ್ಲಿ ಧರ್ಮದ ಕಾಲಂ ಅನ್ನು ಕೈಬಿಡುವ ಮೂಲಕ ಸಮೀಕ್ಷೆಯ ಆರಂಭದಲ್ಲಿ ಸಂವಿಧಾನ ಆಶಯಗಳನ್ನು ಗಾಳಿಗೆ ತೂರಿದೆ ಎಂದು ಬೌದ್ಧ ದಾಖಲಾತಿ ಆಂದೋಲನ ಕರ್ನಾಟಕ ಘಟಕವು ಆರೋಪಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬೌದ್ಧ ದಾಖಲಾತಿ ಆಂದೋಲನದ ರಾಜ್ಯ ಪ್ರತಿನಿಧಿ ಬುದ್ಧಘೋಷ್ ದೇವೇಂದ್ರ ಹೆಗ್ಗಡೆ, ‘ಈ ಸಂಬಂಧ ಬೌದ್ಧ ಸಮುದಾಯ ಸಂಘಟನೆಗಳು ನ್ಯಾಯಮೂರ್ತಿ ನಾಗಮೋಹನದಾಸ್ ಅವರನ್ನು ಭೇಟಿ ಮಾಡಿ ಧರ್ಮದ ಕಾಲಂ ಅನ್ನು ಸಮೀಕ್ಷೆಯಲ್ಲಿ ನಮೂದಿಸುವಂತೆ ಮನವಿ ಸಲ್ಲಿಸಲಾಗಿತ್ತು. ಆದರೆ ಆಯೋಗವು ಮನವಿಯನ್ನು ಪರಿಗಣಿಸಲ್ಲ. ಕ್ರೈಸ್ತ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರವಾದ ಪರಿಶಿಷ್ಟ ಜಾತಿಯ ಅಸ್ಪೃಶ್ಯ ಜನರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಧರ್ಮದ ಕಾಲಂ ಅನ್ನೇ ಕೈಬಿಡಲಾಗಿದೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ದೇಶದಲ್ಲಿ ಈವರೆಗೆ ನಡೆದ ಎಲ್ಲ ಜಾತಿ ಜನಗಣತಿಯಲ್ಲೂ ಧರ್ಮದ ಕಾಲಂ ಅನ್ನು ಕಡ್ಡಾಯವಾಗಿ ನಮೂದಿಸಿ ಸಮೀಕ್ಷೆ ನಡೆಸಲಾಗಿದೆ. ಆದರೆ ಒಳಮೀಸಲಾತಿಯ ಸಮೀಕ್ಷೆಯ ಸಂದರ್ಭದಲ್ಲಿ ಧರ್ಮದ ಕಲಂ ಅನ್ನು ಕೈಬಿಟ್ಟಿರುವುದು ಸಂವಿಧಾನದ ಕಾಯ್ದೆ (ಪ್ರೆಸಿಡೆನ್ಸಿಯಲ್ ಆರ್ಡರ್) 1950,1956 ಹಾಗೂ 1990 ಸ್ಪಷ್ಟ ಉಲ್ಲಂಘನೆ’ ಎಂದು ಹೇಳಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬೌದ್ಧ ಧರ್ಮ ಸ್ವೀಕರಿಸಿದ ಪರಿಶಿಷ್ಟ ಜಾತಿಯ ಜನರನ್ನು ಬಲವಂತವಾಗಿ ಹಿಂದೂಗಳು ಎಂದು ಲೆಕ್ಕ ತೋರಿಸುವ ಸಂಘ ಪರಿವಾರದ ಯೋಜನೆಯೂ ಇದಾಗಿದೆ‌. ಡಾ. ಅಂಬೇಡ್ಕರ್ ಅವರ ಧಾರ್ಮಿಕ ಚಳವಳಿಯನ್ನು ಮಟ್ಟಹಾಕಲು ಮಾಡಿದ ಸಂಚು. ಇಂತಹ ಸಾಂವಿಧಾನಿಕ ವಂಚನೆಯನ್ನು ನಿಜವಾದ ಅಂಬೇಡ್ಕರ್ ಅನುಯಾಯಿಗಳು ಸಹಿಸಲು ಸಾಧ್ಯವಿಲ್ಲ. ಇದು ಖಂಡನೀಯ. ಹಾಗಾಗಿ ಸಮೀಕ್ಷೆಯಲ್ಲಿ ಧರ್ಮದ ಕಾಲಂ ಅನ್ನು ಕಡ್ಡಾಯವಾಗಿ ನಮೂದಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಬೌದ್ಧ ಸಮುದಾಯದ ಮನವಿಗಳನ್ನು ಪರಿಗಣಿಸದ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗವು ಧರ್ಮದ ದಾಖಲೆಯ ಬಗ್ಗೆ ಅಸಡ್ಡೆ ತೋರಿರುವುದು ಅವರ ಪಕ್ಷಪಾತ ಧೋರಣೆ ಎತ್ತಿ ತೋರಿಸುತ್ತದೆ. ಮುಂದಿನ ದಿನಗಳಲ್ಲಿ ಇಂತಹ ಸಂವಿಧಾನ ವಿರೋಧಿ ನ್ಯಾಯಮೂರ್ತಿಗಳಿಂದ ಯಾವ ರೀತಿಯ ನ್ಯಾಯ ಸಿಗಲು ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...