ಶಾಹಪುರ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.28ರ ಹಣಮಂತನಗರದಲ್ಲಿರುವ ಸಾರ್ವಜನಿಕ ಶೌಚಾಲಯವನ್ನು ತಕ್ಷಣ ದುರಸ್ಥಿಗೊಳಿಸಿ, ನೀರಿನ ಟ್ಯಾಂಕ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸರ್. ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘ ಶುಕ್ರವಾರ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದೆ.
ಮನವಿ ಸಲ್ಲಿಸಿ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಪ್ರದೀಪ್ ಅಣಬಿ ಮಾತನಾಡಿ, ‘ಹಣಮಂತ ನಗರದ ಸಾರ್ವಜನಿಕ ಶೌಚಾಲಯ ಸಂಪೂರ್ಣ ಹಾಳಾಗಿದೆ. ಬಾಗಿಲುಗಳು ಮುರಿದು ಹೋಗಿವೆ, ಗೋಡೆಗಳು ಹಾಗೂ ಟೈಲ್ಸ್ ಉದುರಿಹೋಗಿವೆ. ನಳಗಳು ಕಿತ್ತಿಹೋಗಿದ್ದು, ನೀರಿನ ಟ್ಯಾಂಕ್ ಒಡೆದುಹೋಗಿದೆ. ಜೊತೆಗೆ ವಿದ್ಯುತ್ ಸಂಪರ್ಕವೂ ಇಲ್ಲದ ಕಾರಣ ರಾತ್ರಿ ವೇಳೆ ಶೌಚಾಲಯ ಬಳಕೆ ಸಂಪೂರ್ಣ ಅಸಾಧ್ಯವಾಗಿದೆ,’ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಆರೆಸ್ಸೆಸ್ ವಿರುದ್ಧ ಕ್ರಮಕ್ಕೆ ದಲಿತ ಸೇನೆ ಆಗ್ರಹ
ಅವರು ಮುಂದುವರಿದು, ‘ಶೌಚಾಲಯದ ಸುತ್ತಮುತ್ತ ಮುಳ್ಳಿನ ಕಂಟಿಗಳು ಬೆಳೆದು ಪ್ರದೇಶ ಅಸೌಕರ್ಯಕರ ಸ್ಥಿತಿಯಲ್ಲಿದೆ. ಸಾರ್ವಜನಿಕರ ಆರೋಗ್ಯ ಮತ್ತು ಸೌಕರ್ಯವನ್ನು ಪರಿಗಣಿಸಿ, ಮುಳ್ಳಿನ ಕಂಟಿಗಳನ್ನು ತೆಗೆದು ಶೌಚಾಲಯವನ್ನು ಸಂಪೂರ್ಣ ದುರಸ್ಥಿಗೊಳಿಸಬೇಕು. ನಳಗಳು ಹಾಗೂ ನೀರಿನ ಟ್ಯಾಂಕ್ ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸಿ ಸಾರ್ವಜನಿಕರಿಗೆ ಸುಲಭವಾಗಿ ಬಳಸುವಂತಾಗುವಂತೆ ಕ್ರಮ ಕೈಗೊಳ್ಳಬೇಕು,’ ಎಂದು ಆಗ್ರಹಿಸಿದರು.





