ಯಾದಗಿರಿ | ಕಂದಕಕ್ಕೆ ಬಿದ್ದು ಹಸು ಸಾವು; ಪರಿಹಾರಕ್ಕೆ ಆಗ್ರಹ

Date:

ರಸ್ತೆಯ ಸೇತುವೆ ಕಂದಕಕ್ಕೆ ಹಸುವೊಂದು ಬಿದ್ದು, ಮೃತಪಟ್ಟಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಪರಿಹಾರ ನೀಡುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ.

ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಮಳ್ಳಳ್ಳಿ ಗ್ರಾಮದ ಮಲ್ಲಪ್ಪ ಹಣಮಂತ ಬಳಿಚಕ್ರ ಎಂಬುವವರ ಹಸು ಮೃತಪಟ್ಟಿದ್ದು, ಗ್ರಾಮಸ್ಥರ ಸಹಾಯದಿಂದ ಹಸುವಿನ ಮೃತ ದೇಹವನ್ನು ಹೊರತೆಗೆದು ಅಂತ್ಯ ಸಂಸ್ಕಾರ ಮಾಡಿದ ಬಳಿಕ ಮಾತನಾಡಿದರು.

“ಈ ಹಿಂದೆ ಧಾರಾಕಾರವಾಗಿ ಮಳೆ ಸುರಿದ ಕಾರಣದಿದಂದ ರಸ್ತೆ ಹಾಳಾಗಿದೆ. ರಸ್ತೆಯ ಕಳಪೆ ಕಾಮಗಾರಿ ಮಾಡಿದ್ದು, ಸಮರ್ಪಕ ಸೇತುವೆ ನಿರ್ಮಿಸದ ಕಾರಣ ರಸ್ತೆಯ ಮಗ್ಗುಲಲ್ಲಿರುವ ಕಂದಕ ಬಿದ್ದು ಹಸು ಮೃತಪಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗುರುಸುಣಿಗಿಯಿಂದ ಮಳ್ಳಳ್ಳಿಗೆ ಹೋಗುವ ಪ್ರಮುಖ ರಸ್ತೆ ಇದಾಗಿದ್ದು, ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದು ಇದೇ ರಸ್ತೆಯಾಗಿದೆ. ಹೀಗಾಗಿ ಇಂತಹ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಈ ರಸ್ತೆಯಲ್ಲಿ ಸುಮಾರು 5 ರಿಂದ 6ಕಡೆ ಕಂದಕಗಳು ನಿರ್ಮಾಣವಾಗಿರುವುದು ತೀರ ಆತಂಕಕಾರಿ ಸಂಗತಿಯಾಗಿದೆ” ಎಂದರು.

“ಇದೇ ರಸ್ತೆಯ ಮುಖಾಂತರ ಬಸ್ ಸೇರಿದಂತೆ ಇತರೆ ಎಲ್ಲ ವಾಹನಗಳೂ ಸಂಚರಿಸುತ್ತಿದ್ದವು. ಆದರೆ, ರಸ್ತೆ ಗುಂಡಿ ಬಿದ್ದಿರುವ ಕಾರಣ ಇತ್ತೀಚೆಗೆ ಬಸ್‌ ಹಾಗೂ ಬೃಹತ್ ವಾಹನಗಳ ಸಂಚಾರವೂ ಸ್ಥಗಿತಗೊಂಡಿದೆ. ಇದರಿಂದಾಗಿ ಸಣ್ಣ ಪುಟ್ಟ ವಾಹನಗಳು ಟಂಟಂಗಳು ಸಂಚರಿಸುತ್ತಿವೆ. ಈ ರಸ್ತೆಯಲ್ಲಿ ಹೊಸಬರು ಸಂಚರಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಗ್ರಾಮಸ್ಥರು ಜೀವ ಕೈಯಲ್ಲಿ ಹಿಡಿದು ಸಂಚಾರ ಮಾಡುತ್ತಿದ್ದಾರೆ. ಹೀಗಾಗಿ ಇಲ್ಲಿ ಇನ್ನೂ ಹೆಚ್ಚಿನ ಅನಾಹುತ ಆಗುವ ಮೊದಲೇ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು. ಮೃತಪಟ್ಟ ಹಸುವಿಗೆ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನರಸಾಪುರ ಕೆರೆ ಒತ್ತುವರಿ ತೆರವುಗೊಳಿಸಿ : ಸಚಿವ ಬೋಸರಾಜು ಸೂಚನೆ

“ಇನ್ನು ಮುಂದೆ ಯಾವುದೇ ಜೀವ ಹಾನಿಯಾದರೂ ಜಿಲ್ಲಾಡಳಿತವೇ ಹೊಣೆ ಹೊರಬೇಕಾಗುತ್ತದೆ. ಇಲ್ಲವಾದಲ್ಲಿ ಪ್ರಕರಣ ದಾಖಲಿಸಲು ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಈ ವೇಳೆ ನಿಂಗಪ್ಪ, ಬಾಬು, ಮರೆಪ್ಪ, ಅಮ್ಮಣ್ಣ, ಸಾಬರೆಡ್ಡಿ, ತಿಪ್ಪಣ್ಣ, ಪದ್ಮಣ್ಣ, ದೇವು ಸೇರಿದಂತೆ ಗ್ರಾಮಸ್ಥರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...