ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

Date:

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ ಪರಿಹಾರ ನೀಡಬೇಕು ಮತ್ತು ಹುಣಸಗಿ ತಾಲೂಕಿನ ಎಲ್ಲಾ ರೈತರಿಗೆ ಸಮಪರ್ಕವಾಗಿ ರಸಗೊಬ್ಬರ ವಿತರಣೆ ಮಾಡುವಂತೆ ರೈತ ಸಂಘಗಳ ಸಾಮೂಹಿಕ ಸಂಘಟನೆಗಳಿಂದ ಆಗ್ರಹಿಸಿದರು.

ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿ ಯಾದಗಿರಿ ಮತ್ತು ಸಾಮೂಹಿಕ ಸಂಘಟನೆಗಳು ನೇತೃತ್ವದಲ್ಲಿ ಹುಣಸಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಗೆ ಮನವಿ ಸಲ್ಲಿಸಿದರು.

ರೈತ ಮುಖಂಡ ಹಣಮಂತ್ರಾಯ ಚಂದಲಾಪೂರ್ ಮಾತನಾಡಿ, ‘ಈ ವರ್ಷ ಮುಂಗಾರು ಮಳೆ ಸಮಯಕ್ಕೆ ಸರಿಯಾಗಿ ಬಂದಿರುವುದರಿಂದ ಜಿಲ್ಲೆಯಾದ್ಯಂತ ಎಲ್ಲಾ ರೈತರು ಬಿತ್ತನೆ ಮಾಡಿದ್ದರು. ಈಗ ಬಿತ್ತಿರುವುದಕ್ಕಿಂತ ಬೆಳೆಗಳು ಮಳೆಯಾಶ್ರಿತ ಬೆಳೆಗಳು ಮತ್ತು ನೀರಾವರಿಯ ಇಲ್ಲದ ಕೊನೆಯ ಭಾಗದ ರೈತರು ಬೆಳೆಗಳಾದ ಶೇಂಗಾ ಹತ್ತಿ, ಸಜ್ಜೆ, ತೊಗರಿ ಮುಂತಾದ ಬೆಳೆಗಳು ರೈತರು ಬೆಳೆದಿರುತ್ತಾರೆ. ಆದರೆ ಇದಕ್ಕೆಲ್ಲಾ ಒಂದು ಸಲ ಬೆಳೆಯಬೇಕಾದರೆ ಮೂರು ಸಲ ಗೊಬ್ಬರ ಕೀಟನಾಶಕ ಸಿಂಪಡಿಸಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼರೈತರು ಸಾಲ ಸೂಲ ಮಾಡಿ ಬಿತ್ತನೆಗೆ ಸಾಕಷ್ಟು ಖರ್ಚು ಮಾಡುತ್ತಾರೆ. ಕನಿಷ್ಠ ಒಂದು ಎಕರೆ ಬೆಳೆಯನ್ನು ಬೆಳೆಯಬೇಕಾದರೆ 30 ರಿಂದ 40 ಸಾವಿರ ರೂಪಾಯಿ ಖರ್ಚು ಮಾಡಿ ಬೆಳೆಯನ್ನು ಬೆಳೆಯುತ್ತಾರೆ. ಆದರೆ ಈ ವರ್ಷದಲ್ಲಿ ಸರ್ಕಾರ ರಸಗೊಬ್ಬರದ ಕೊರತೆ ಮಾಡಿ ರೈತರ ಗಾಯದ ಮೇಲೆ ಬರಿ ಎಳೆದಂತಾಗಿದೆ’ ಎಂದು ತಮ್ಮ ಅಳಲನ್ನು ತೊಡಗಿಕೊಂಡರು

‘ರೈತರು ಒಂದಲ್ಲಾ ಒಂದು ಸಂಕಷ್ಟಕ್ಕೀಡಾಗುತ್ತಿದ್ದಾನೆ. ರೈತರು ಬೆಳೆದಿರುವ ಬೆಳೆ ಸೂಕ್ತ ದರ ಇರುವುದಿಲ್ಲ. ಸರಿಯಾಗಿ ಮಳೆ ಬಂದು ಬೆಳೆ ಬೆಳೆದರೆ ಗೊಬ್ಬರವಿಲ್ಲ. ರೈತರ ಜೊತೆಯಲ್ಲಿ ಚೆಲ್ಲಾಟವಾಡುವ ಸರ್ಕಾರಗಳು ನಮಗೇಕೆ ಬೇಕು, ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ರೈತರ ಗೋಳು ಕೇಳುವುದಿಲ್ಲ. ರಸಗೊಬ್ಬರ ಸಮಸ್ಯೆ ಬಗೆಹರಿಸಲು ಆಗಿಲ್ಲ. ತಿಂಗಳಾದರೂ ರೈತರಿಗೆ ಯೂರಿಯಾ ಗೊಬ್ಬರ ಸಿಗದೇ ಪರದಾಡುತ್ತಿದ್ದಾರೆʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಈ ಸಂದರ್ಭದಲ್ಲಿ ರೈತ ಮುಖಂಡರಾದ ಗೆದ್ದೆಪ್ಪ ನಾಗಬೇವಿನಾಳ, ಸಾಹೇಬಗೌಡ ಮದಲಿಂಗನಾಳ, ಹನುಮಗೌಡ ನಾರಾಯಣಪುರ, ನಿಂಗನಗೌಡ ಗುಳಬಾಳ, ವೆಂಕಟೇಶಗೌಡ ಕುಪಗಲ್, ತಿರುಪತಿ ಕುಪಗಲ್, ತಿಪ್ಪಣ್ಣ ಜಂಪಾ, ಮೌನೇಶ ಅರಳಹಳ್ಳಿ, ಗುಂಡುರಾವ, ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...