ಯಾದಗಿರಿ | ರೈತರಿಗೆ ಅನ್ಯಾಯವಾಗದಂತೆ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುವುದು: ಜಿ.ಕುಮಾರ ನಾಯಕ

Date:

ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಹಾಗೂ ಭೀಮ ನದಿ ಅಪಾಯ ಮಟ್ಟ ಮೀರಿ ಹರಿದ ಹಿನ್ನೆಲೆ ಎಲ್ಲಾ ಬೆಳೆಗಳು ಸಂಪೂರ್ಣವಾಗಿ ಹಾಳಾಗಿದೆ. ಅಧಿಕಾರಿಗಳು ಈಗಾಗಲೇ ಬೆಳೆಹಾನಿ ಸಮೀಕ್ಷೆ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ. ಸಮೀಕ್ಷೆ ನಡೆಸಿ ಬೆಳೆ‌ ನಷ್ಟದ ಕುರಿತು ವರದಿಯನ್ನು ಸಿದ್ದಪಡಿಸಲಿದ್ದು, ಆ ವರದಿಯಂತೆ ಸರ್ಕಾರ ಪರಿಹಾರ ನೀಡಲಿದೆ ಎಂದು ಸಂಸದ ಜಿ.ಕುಮಾರ ನಾಯಕ ತಿಳಿಸಿದರು.

ಯಾದಗಿರಿ ತಾಲ್ಲೂಕಿನ ಯಾದಗಿರಿ ಬಿ,ನಾಯ್ಕಲ್, ಗುರುಶಿಣಗಿ, ಹತ್ತಿಗೂಡುರ್ ಗ್ರಾಮ ವ್ಯಾಪ್ತಿಯ ಸೀಮಾಂತರದಲ್ಲಿ ಬೆಳೆ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳೀಯ ರೈತರೊಂದಿಗೆ ಮಾತನಾಡಿ ಮಾಹಿತಿ ಪಡೆದರು.

ಹಾನಿ 2

ನೆರೆಪೀಡಿತ ಪ್ರದೇಶಗಳಿಗೆ ಕಳೆದ ವಾರ ಜಿಲ್ಲಾ ಉಸ್ತುವಾರಿ ಸಚಿವರ, ಶಾಸಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಇಲ್ಲಿನ ವಾಸ್ತವ ಸ್ಥಿತಿಯ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ನಾನು ಕೂಡ ನಿರಂತರವಾಗಿ ಜಿಲ್ಲಾಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾನೆ. ಅಧಿಕಾರಿಗಳು ಬೆಳೆಹಾನಿ ಸಮೀಕ್ಷೆಗೆ ನಿಮ್ಮ ನಿಮ್ಮ ಗ್ರಾಮಗಳಿಗೆ ಬರುತ್ತಾರೆ, ಆ ಸಂರ್ಭದಲ್ಲಿ ಬೆಳೆಹಾನಿ ಬಗ್ಗೆ ಸಂಪೂರ್ಣ ವಿವರವನ್ನು ರೈತರು ನೀಡಬೇಕೆಂದು ಅವರು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಯಾದಗಿರಿ | ರೈತರ ಪರ ಎಐಕೆಕೆಎಂಎಸ್,ಎಸ್‌ಯುಸಿಐ(ಸಿ) ಬೃಹತ್ ಪ್ರತಿಭಟನೆ

ಅಧಿಕಾರಿಗಳು ರೈತರಿಗೆ ಅನ್ಯಾಯವಾಗದಂತೆ ಸರಿಯಾದ ರೀತಿಯಲ್ಲಿ ಹಾನಿಯಾದ ಬೆಳೆಗಳ ಬಗ್ಗೆ ಸಮೀಕ್ಷೆ ನಡೆಸಬೇಕು. ಹತ್ತಿ, ಭತ್ತ, ತೊಗರಿ, ಜೋಳ ಸೇರಿದಂತೆ ಈಗ ಬಿತ್ತನೆಯಾದ ಎಲ್ಲ ಬೆಳೆಗಳ ಸಮೀಕ್ಷೆ ಮಾಡಬೇಕು. ಸಮೀಕ್ಷೆ ಮುಗಿದ ನಂತರ ರಾಜ್ಯ ಸರ್ಕಾರದಿಂದ ಹಾಗೂ ಕೇಂದ್ರದ ಎನ್‌ಡಿಆರ್‌ಎಫ್ ನಿಧಿಯಿಂದ ತಮಗೆ ಪರಿಹಾರ ದೊರಕುವ ಭರವಸೆ ಇದೆ. ಒಂದು ವೇಳೆ ಕೇಂದ್ರ ಸರ್ಕಾರವು ಪರಿಹಾರ ನಿಧಿಯನ್ನು ನೀಡುವುದಕ್ಕೆ ತಡವಾದರೆ ನಾನು ಕೇಂದ್ರಕ್ಕೆ ಪತ್ರವನ್ನು ಬರೆದು ಈ ಭಾಗದ ರೈತರಿಗೆ ಕೂಡಲೇ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಚನ್ನಾರೆಡ್ಡಿ ಪಾಟೀಲ್, ಕೃಷಿ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಭೀಮಣ್ಣ ಮೇಟಿ, ಸುದರ್ಶನ ನಾಯಕ್, ಶಾಂತಗೌಡ ನಾಯ್ಕಲ್, ಎಮ್.ಡಿ.ಖಾಜಾ ಮಿರ್ಚಿ, ರಮೇಶ್ ದೊರೆ, ವೆಂಟಕೇಶ್ ಬೇಟೆಗಾರ್, ಸೇರಿದಂತೆ ಅನೇಕ ರೈತರು ಸಾರ್ವಜನಿಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...