ಯಾದಗಿರಿ | ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ಹುಣಸಗಿಯಲ್ಲಿ ಪ್ರತಿಭಟನೆ

Date:

ಪ.ಜಾತಿ ಮತ್ತು ಪ ಪಂಗಡ ಸಮುದಾಯದ ಹಣದ ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿ ಹಾಗೂ ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ರಾಜ್ಯ ಸರ್ಕಾರ ಮತ್ತು ಕೆಂದ್ರ ಸರ್ಕಾರದ ವಿರುದ್ಧ ಹುಣಸಗಿಯ ಪ.ಜಾತಿ, ಪ.ಪಂಗಡ ಸಾಮೂಹಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಬಿ.ಆರ್ ಅಂಬೇಡ್ಕರ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುವುದರ ಮೂಲಕ ಹುಣಸಗಿ ತಹಶೀಲ್ದಾರ್ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಪತ್ರ ಸಲ್ಲಿಸಿ ದೇವಿಂದ್ರಪ್ಪ ಬಳಿಚಕ್ರ ಮಾತನಾಡಿ, “ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣವನ್ನು ಬೇರೆ ಯೋಜನೆಗಳಿಗೆ ರಾಜ್ಯ ಸರ್ಕಾರ ವರ್ಗಾಯಿಸಿದ್ದು, ಅದನ್ನು ಹಿಂದಿರುಗಿಸಬೇಕು. ಸಂಬಂಧಪಟ್ಟ ವ್ಯಕ್ತಿಗಳಿಗೆ ಶಿಕ್ಷೆಯಾಗಬೇಕು. ವಾಲ್ಮೀಕಿ ನಿಗಮದ ಹಣ ಖಾಸಗಿ ವ್ಯಕ್ತಿಗಳಿಗೆ ವರ್ಗಾವಣೆಯಾದ ಕುರಿತು ತನಿಖೆ ಮತ್ತು ತಪ್ಪಿತಸ್ಥ ವ್ಯಕ್ತಿಗಳಿಗೆ ಶಿಕ್ಷೆಯಾಗಬೇಕು. ರಾಮನಗರದಲ್ಲಿ ದಲಿತ ವ್ಯಕ್ತಿಯ ಕೈ ಕತ್ತರಿಸಿದವರಿಗೆ ಬಂಧನ ಮತ್ತು ಶಿಕ್ಷೆಯಾಗಬೇಕು. ಯಾದಗಿರಿ ನಗರದ ಪಿಎಸ್‌ಐ ಪರಶು ರಾಮ್ ಅವರ ಸಾವಿಗೆ ಕಾರಣರಾದವರನ್ನು ತಕ್ಷಣ ಬಂಧಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 23 at 6.38.43 PM

ಕೆಂದ್ರ ಮತ್ತು ರಾಜ್ಯ ಸರ್ಕಾರ ದಲಿತ ಸಮುದಾಯಗಳಾದ ರೈತರು, ಕೃಷಿ ಕಾರ್ಮಿಕರು, ಮಹಿಳಾ ಕಾರ್ಮಿಕರು, ದೀನ ದಲಿತರು, ವಿದ್ಯಾರ್ಥಿಗಳು ಕಟ್ಟಡ ಕಾರ್ಮಿಕರಿ ಆಗಿರುವ ಅನ್ಯಾಯವನ್ನು ಸರಿದೂಗಿಸಲು ವಿಶೇಷ ಪ್ಯಾಕೇಜ್ ಮುಖಾಂತರ ಹಣ ಮಂಜೂರು ಮಾಡಿ ಅಭಿವೃದ್ಧಿ ಮಾಡಬೇಕು ಎಂದು ಇದೇ ವೇಳೆ ಪ್ರತಿಭಟನಾಕಾರರು ಆಗ್ರಹಿಸಿದರು.

ದಲಿತ ಸಮುದಾಯಕ್ಕೆ ನ್ಯಾಯ ಸಿಗದಿದ್ದರೆ ರಾಜ್ಯಾದಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಮನವಿ ಸಲ್ಲಿಸುವ ಮೂಲಕ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮುದಣ್ಣ ದೊರೆ ಹುಣಸಗಿ, ಶರಣಪ್ಪ ತೆಗ್ಗೆಳ್ಳಿ, ಜುಮಣ್ಣ ಬಲಶೇಟ್ಟಿಹಾಳ, ವಿರೇಶ್ ಗುಳಬಾಳ, ಶಿವು ರಾಠೋಡ, ಬಸವರಾಜ ಹಗರಟಗಿ, ಚಂದ್ರಶೇಖರ ಹಳ್ಳೂರ, ಗುರುಪುತ್ರ ಹೊಸಮನಿ, ರಾಜ ವಜ್ಜಲ, ಸಿದ್ದು ಮೇಲಿನಮನಿ, ಕಾಶಿನಾಥ ಹಾದಿಮನಿ, ಪರಮಣ್ಣಿ ಕನ್ನಳ್ಳಿ, ನಾಗಯ್ಯ ಹುಣಸಗಿ, ಯಲ್ಲಪ್ಪ ಕಡದರಗಡ್ಡಿ, ಪ್ರಬು ಕಚನೂರ, ಮಲ್ಲಣ್ಣ ಹೆಬ್ಬಾಳ್ ಹುಣಸಗಿ, ಭೀಮನಗೌಡ ಪ್ರೋ. ಪಾಟೀಲ್, ಸಿದ್ದಣ್ಣ ಮೇಲಿನಮನಿ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...