ಯಾದಗಿರಿ | ಮರಳು ವಿಲೇವಾರಿಗೆ ದಸಂಸ ಖಂಡನೆ

Date:

ಯಾದಗಿರಿ ಜಿಲ್ಲೆ ಶಹಾಪೂರ ತಾಲೂಕಿನ ಹಳೆ ತಹಶೀಲ್ ಕಾರ್ಯಾಲಯದ ಎದುರು ಮತ್ತು ಶಹಾಪೂರ ಪ್ರವಾಸಿ ಮಂದಿರದ ಐಬಿಯಲ್ಲಿ ಇರುವ ಮರಳು ವಿಲೇವಾರಿ ಮಾಡಿದ್ದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಜಿಲ್ಲಾ ಸಮಿತಿ ಕಾರ್ಯಕರ್ತರು ಕರ್ನಾಟಕ ಸರ್ಕಾರ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದರು.

“ತಾಲೂಕಿನ ಹಳೆ ತಹಶೀಲ್ ಕಾರ್ಯಾಲಯದ ಪಿಡಬ್ಲ್ಯೂಡಿ ಕಚೇರಿ ಮತ್ತು ಶಹಾಪೂರ ಪ್ರವಾಸಿ ಮಂದಿರ(ಐಬಿ)ದಲ್ಲಿ 2015-16 ರಿಂದ ಪ್ರಸ್ತುತ 2023 ರವರೆಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವಾಗ ಅಕ್ರಮ ಮರಳನ್ನು ಕೋರ್ಟ್ ಸಾಧರ ಪಡಿಸಿ ಪ್ರಕರಣ ದಾಖಲಿಸಿ ಕೋರ್ಟ್ ನಿರ್ದೇಶನ ಮೇರೆಗೆ ಶಹಾಪೂರದ ಪಿಡಬ್ಲ್ಯೂಡಿ ಅವರ ಸುಪರ್ದಿಯಲ್ಲಿ ಸಂಗ್ರಹಿಸಲಾಗಿತ್ತು” ಎಂದು ದಸಂಸ ಕಾರ್ಯಕರ್ತರು ತಿಳಿಸಿದರು.

“ಪ್ರಸ್ತುತ ಸದರಿ ಮರಳನ್ನು ಕೋರ್ಟ್ ಪರವಾನಿಗೆ ಪಡೆಯದೆ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಮರಳನ್ನು ವಿಲೇವಾರಿ ಮಾಡುತ್ತಿದ್ದೇವೆ. ಸ್ಥಳೀಯ ಸರ್ಕಾರಿ ಕಾಮಗಾರಿಗಳ ಹೆಸರಿನಿಂದ ವರ್ಕ್ ಆರ್ಡರ್ ನಮೂದಿಸಿ ರಾಯಲ್ಟಿ ಕಟ್ಟಿ ನೀಡುತ್ತಿದ್ದೇವೆಂದು ಸ್ಥಳೀಯ ಪಿಡಬ್ಲ್ಯೂಡಿ ಅಧಿಕಾರಿ ಹೇಳುತ್ತಿದ್ದಾರೆ. ಈ ಹಿಂದೆ ಹಲವು ಜಿಲ್ಲಾಧಿಕಾರಿಗಳು ಬಂದು ಹೋಗಿದ್ದು, ಅಂದು ಇಲ್ಲದ ಆದೇಶವನ್ನು ಪ್ರಸ್ತುತದಲ್ಲಿ ನೀಡುತ್ತಿರುವುದು ಎಷ್ಟು ಸರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿರಳೆ ಬಿದ್ದ ಹಾಲು ಸೇವನೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

“ಪ್ರಸ್ತುತ ಮರಳು ವಿಲೇವಾರಿ ಆದೇಶ ನ್ಯಾಯಾಲಯಕ್ಕೆ ಅಗೌರವ ತೋರಿಸಿದಂತಾಗುತ್ತಿದೆ. ಹಾಗಾಗಿ ಕೂಡಲೇ ಇದನ್ನು ಪೂರ್ವಕವಾಗಿ ಪರಿಗಣಿಸಬೇಕು. ಒಂದು ವೇಳೆ ನಿರ್ಲಕ್ಷಿಸಿದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ನ್ಯಾಯಾಲಯಕ್ಕೆ ಗೌರವ ನೀಡುವ ದೃಷ್ಟಿಯಿಂದ ನ್ಯಾಯಾಲಯದ ಮೊರೆಹೋಗುವುದು ಅನಿವಾರ್ಯವಾಗುತ್ತದೆ” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ತಾಲೂಕ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಹೋತಪೇಟ್,‌ ವಿದ್ಯಾರ್ಥಿ ಘಟಕ ಜಿಲ್ಲಾ ಸಂಚಾಲಕ ಶೇಖರ್ ಬಡಿಗೇರ್‌, ಡಿಎಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಸಿದ್ದು ಮುಂಡಾಸ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...