ಯಾದಗಿರಿ | ಮೀನುಗಾರರಿಗೆ ನಿವೇಶನ, ಸ್ಮಶಾನ ಭೂಮಿ ಮಂಜೂರು ಮಾಡುವಂತೆ ದಸಂಸ ಮನವಿ

Date:

ಮೀನುಗಾರರ ಕುಟುಂಬಗಳಿಗೆ ನಿವೇಶನ, ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ(ಆರ್) ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ರಾಜ್ಯ ದಲಿತ ಮಹಿಳಾ ಒಕ್ಕೂಟ (ಕ್ರಾಂತಿಕಾರಿ) ಯಾದಗಿರಿ ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಸಿ, ವಡಗೇರಾ ತಹಸೀಲ್ದಾರರ ಮುಖಾಂತರ ಯಾದಗಿರಿ ಜಿಲ್ಲಾಧಿಕಾರಿಗೆ
ಮನವಿ ಸಲ್ಲಿಸಲಾಯಿತು.

ಸಂಘಟನೆಯ ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, “2024ರ ಅಕ್ಟೋಬರ್ 21ರಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ರವರು ವಡಗೇರಾ ತಾಲೂಕಿನ ಕದರಾಪೂರ ಗ್ರಾಮದ ಕೃಷ್ಣಾ ನದಿಯ ದಡದಲ್ಲಿರುವ ಮೀನುಗಾರರ ಗುಡಿಸಲುಗಳಿಗೆ ಭೇಟಿ ಕೊಟ್ಟು, ಇವರಿಗೆ ಖಾಯಂ ಆಗಿ ಒಂದು ಕಡೆ ವಾಸಿಸಲು ಮನೆಗಳಿಗಾಗಿ ಜಮೀನು ಮಂಜೂರು ಮಾಡುವಂತೆ ಮೌಖಿಕವಾಗಿ ಆದೇಶ ಮಾಡಿದ್ದರು. ಈ ಹಿಂದಿನ ತಹಶೀಲ್ದಾರರು ಪಂಚನಾಮೆ ಮಾಡಿಕೊಂಡು ಬಂದಿದ್ದು, ಗ್ರಾಮ ಲೆಕ್ಕಿಕ, ಕಂದಾಯ ನೀರಿಕ್ಷಕರು ಅವರು ಕೂಡಾ ಪಂಚನಾಮೆ ಮಾಡಿದ್ದರು. ಆದರೆ ಮೇಲಧಿಕಾರಿಗಳು ಇಲ್ಲಿಯವರೆಗೂ ಪ್ರಸ್ತಾವನೆ ಸಲ್ಲಿಸದೆ ಕಾರ್ಯ ರೂಪಕ್ಕೆ ತರದೆ ಇರುವುದು ಖಂಡನೀಯ” ಎಂದರು.

“ಕದರಾಪೂರ ಮತ್ತು ರೋಟ್ನಡಗಿ ಸೀಮೆಯಲ್ಲಿ ಜಮೀನು ಲಭ್ಯವಿಲ್ಲದ ಪ್ರಯುಕ್ತ ತುಮಕೂರು ಪರಂಪೋಕ ಸರ್ವೆ ನಂ. 378 ರಲ್ಲಿ ಜಮೀನು ಲಭ್ಯವಿದ್ದು, ನಿವೇಶನಕ್ಕಾಗಿ, ಸ್ಮಶಾನಕ್ಕಾಗಿ ಭೂಮಿ ಮಂಜೂರು ಮಾಡಿ ಇವರುಗಳಿಗೆ ಅನುಕೂಲ ಮಾಡಿಕೊಡಬೇಕೆಂದು” ಮನವಿ ಮಾಡಿದ ಅವರು, “ಒಂದು ವೇಳೆ ವಿಳಂಬವಾದಲ್ಲಿ ಇದೇ ಆಗಸ್ಟ್ 28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಮೀನುಗಾರರ ಕುಟುಂಬದವರು ಆಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಿದ್ದಾರೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಯಾದಗಿರಿ | ಹಳೆ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಕುರಕುಂದಿ, ಮಹಾದೇವಪ್ಪ ಬಿಜಾಸಪುರ್, ಅಜೀಜಸಾಬ್ ಐಕ್ಯೂರ್, ಮಲ್ಲಿಕಾರ್ಜುನ ಶಾಖಾನವರ್, ಶೇಖರ್ ಜೀವಣಗಿ, ಮಾನಪ್ಪ ಬಿಜಾಸಪುರ್, ರಾಮಣ್ಣ ಶೆಳ್ಳಗಿ, ಜಟ್ಟೆಪ್ಪ ನಾಗರಾಳ, ದೇವಿಂದ್ರಾಪ್ಪ ಬಾದ್ಯಾಪುರ್, ಬಸವರಾಜ್ ಗೋನಾಲ, ಚಂದ್ರಕಾಂತ ಹಂಪಿನ್, ಮೂರ್ತಿ ಬೊಮ್ಮನಹಳ್ಳಿ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...