ಯಾದಗಿರಿ | ಸರ್ವೆ ನಂ. 7/3 ಭೂಮಿ ಮಂಜೂರಾತಿಗಾಗಿ ದಸಂಸ ಪ್ರತಿಭಟನೆ

Date:

ಸುರಪುರ ಪಟ್ಟಣದ ಸರ್ವೆ ನಂ. 7/3 ರಲ್ಲಿ 43 ವರ್ಷಗಳಿಂದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ಭೂಮಿ ಮಂಜೂರಾತಿಗಾಗಿ ಆಗ್ರಹಿಸಿ ಮತ್ತು ಇತರ ನಾನಾ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭೀಮವಾದ ದಲಿತ ಸಂಘರ್ಷ ಸಮಿತಿ ಯಾದಗಿರಿ ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಡಾ. ಮಲ್ಲಿಕಾರ್ಜುನ ಅನಸೂಗೂರು, “ದೇಶದ ಶೋಷಿತ ವರ್ಗದ ಬದುಕಿನ ದಲಿತ ಸೂರ್ಯನಾಗಿ ಉದಯಿಸಿ ಸಾವಿರಾರು ವರ್ಷಗಳಿಂದ ಗುಲಾಮಗಿರಿಯಲ್ಲಿ ಬದುಕುತ್ತಿದ್ದ ನನ್ನಂತವರನ್ನು ಸಂವಿಧಾನ ಬರೆಯುವ ಮೂಲಕ ಬಂಧನದಿಂದ ಬಿಡುಗಡೆಗೊಳಿಸಿದ ಡಾ. ಬಾಬಾ ಸಾಹೇಬ ಅಂಬೇಡ್ಕರವರನ್ನು ಇಡಿ ವಿಶ್ವವೇ ಸ್ಮರಿಸುತ್ತಿದೆ. ಅದರಂತೆ ಸುರಪುರ ನಗರದ ಹೃದಯ ಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಹೆಚ್ಚಿನ ಅಭಿವೃದ್ಧಿಗಾಗಿ ಮತ್ತು ದಲಿತರ ಉದ್ದಾರಕ್ಕಾಗಿ ಅವಶ್ಯಕತೆ ಇರುವ ಸರ್ಕಾರಿ ಭೂಮಿ ಮಂಜೂರು ಮಾಡಬೇಕು. ಕಳೆದ ಆಗಸ್ಟ್ 20 ರಿಂದ ಯಾದಗಿರಿ ಜಿಲ್ಲಾಡಳಿತ ಮತ್ತು ಸುರಪುರ ತಾಲೂಕ ಆಡಳಿತವನ್ನು ಒತ್ತಾಯಿಸಿ ನಿರಂತರ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡು ಇಲ್ಲಿಯವರೆಗೆ 22 ದಿನಗಳು ಕಳೆದಿವೆ. ಆದರೆ ಜಿಲ್ಲಾಡಳಿತ ಈ ಹೋರಾಟದ ಬಗ್ಗೆ ಎಚ್ಚೆತ್ತುಕೊಂಡು ಬಗೆಹರಿಸುವಲ್ಲಿ ವಿಫಲವಾಗಿದೆ. ಈಗಲಾದರೂ ನಮ್ಮ ಬೇಡಿಕೆಯನ್ನು ಈಡೇರಿಸಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶರಣಪ್ಪ ಚತುರ್ವೇದಿ, ಶಿವಶಂಕರ ಹೆಚ್ ಹೊಸಮನಿ, ಮಲ್ಲಪ್ಪ ಲಂಡನಕರ್, ವೆಂಕಟೇಶ ಕಟ್ಟಿಮನಿ, ಮಲ್ಲಿಕಾರ್ಜುನ ತಳವಾರಗೇರಾ, ಸಿದ್ದರಾಮ ನಾಯ್ಕಲ್, ಹಣಮಂತ್ರಾಯ ಬಿ ವಡಗೇರಾ, ಮಲ್ಲಿಕಾರ್ಜುನ ಜಾಲಿಬೆಂಚಿ, ಹಣಮಂತ ತೇಲ್ಕರ್, ಮಲ್ಲಿಕಾರ್ಜುನ ಮುಷ್ಠಳ್ಳಿ, ಪರಶುರಾಮ ಮದರಕಲ್, ರಾಜು ಕುಮಾರಿ, ಸೈಯ್ಯದ, ಬಸವರಾಜ ಬಡಿಗೇರ, ಪುರುಷೋತ್ತಮ ಬಬಲಾದಿ, ಶರಣಪ್ಪ ದೊಡ್ಡಮನಿ, ಮೌಲಾಲ್ ಅಲಿ, ರಘುನಂದನ್ ತೇಲ್ಕರ್, ಭೀಮರಾಯ ಮಾಲಗತ್ತಿ, ಶೇಖಪ್ಪ ಹಾಲಭಾವಿ, ಚಂದ್ರಶೇಖರ ಇನ್ನಿತರರು ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಯಾದಗಿರಿ | ಸಾಲಬಾಧೆ : ರೈತ ಆತ್ಮಹತ್ಯೆ

ಹಕ್ಕೊತ್ತಾಯಗಳು :

1) ಸುರಪುರ ನಗರದ ಸರ್ವೆ ನಂ. 71 ಸರ್ಕಾರಿ ಖಾರೀಜ್ ಖಾತಾ ಭೂಮಿಯನ್ನು ಸರ್ಕಾರದಿಂದ ಸರ್ವೆ ಮಾಡಿಸಿ ವರದಿಯನ್ನು ಬಹಿರಂಗಗೊಳಿಸಿ ಒತ್ತುವರಿಯಾಗಿರುವ 2 ಎಕರೆ 26 ಗುಂಟೆ ಜಾಗವನ್ನು ಮಾ ಬಿ.ಆರ್. ಅಂಬೇಡ್ಕ‌ರ್ ರವರ ವೃತ್ತದ ಅಭಿವೃದ್ಧಿಗಾಗಿ ಮಂಜೂರು ಮಾಡುವುದು.
2) ಪರಿಶಿಷ್ಟ ಜಾತಿಯ ಅಲೆಮಾರಿ ಜನಾಂಗದವರಿಗೆ ಸರ್ಕಾರ 1% ಮೀಸಲಾತಿಯನ್ನು ಕಲ್ಪಿಸಿಕೊಡಬೇಕು.
3) ವಡಗೇರು ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಜೆಜೆಎನ್ ಕಾಮಗಾರಿ ಕಳಪೆ ಕಾಮಗಾರಿಯಾಗಿದ್ದು ಈಗಾಗಲೇ ಮೂರು ಜನ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿದ್ದು ಅವರನ್ನು ಸೇವೆಯಿಂದ ವಜಾಗೊಳಿಸಿ ಬಂಧಿಸಬೇಕು.
4) ಹುಣಸಗಿ ತಾಲೂಕಿನ ಕೂಡಲಗಿ ಗ್ರಾಮದಲ್ಲಿ ಜೆಜೆಎಮ್ ಕಾಮಗಾರಿ ಸಂಪೂರ್ಣ ಬೊಗಸ್ ಆಗಿದ್ದು, ಎ.ಇ.ಇ. ಮತ್ತು ಜೆ.ಇ. ಹಾಗೂ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಸೇವೆಯಿಂದ ವಜಾಗೊಳಿಸಬೇಕು.
5) ಸುರಪುರ ತಾಲೂಕಿನ ತಳವಾರಗೇರಾ ಗ್ರಾಮದಲ್ಲಿ ದಲಿತರ ಓಣಿಯಲ್ಲಿ ವಿದ್ಯುತ್ ಕಂಭಗಳಿಗೆ ಹಾಕಿರುವ ವಿದ್ಯುತ್ ತಂತಿ ತುಂಬಾ ಹಳೆಯದಾಗಿದ್ದು, ಮಳೆ ಗಾಳಿಗೆ, ಮಂಗಗಳು ಕುಳಿತುಕೊಳ್ಳುವಾಗ ಹಗಲಾಡಿ ವೈರ್‌ಗಳು ಹರಿದ್ದು ಬಿದ್ದು ಸಾರ್ವಜನಿಕರ ಜೀವಕ್ಕೆ ಅಪಾಯ ಮಾಡುತ್ತಿದ್ದು ತಕ್ಷಣವೇ ಅವುಗಳನ್ನು ತೆರವುಗೊಳಿಸಿ ಹೊಸ ವಿದ್ಯುತ್ ವೈರಗಳನ್ನು ಹಾಕಬೇಕು.
6) ಯಾದಗಿರಿ ಜಿಲ್ಲೆಯಾದ್ಯಂತ ಇರುವ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸರ್ಕಾರದಿಂದ ಬಂದಿರುವ ಸಬ್ಸಿಡಿ ಹಣವನ್ನು ಬ್ಯಾಂಕಿನ ಗ್ರಾಹಕರಿಗೆ ಕೊಡುವದಕ್ಕೆ ಇಲ್ಲ ಸಲ್ಲದ ನೆಪವೊಡ್ಡಿ ವರ್ಷವಾದರು ಕೊಡದೆ ತೊಂದರೆ ಕೊಡುತ್ತಿದ್ದಾರೆ.
7) ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದ ವಡ್ಡರ ಓಣಿಯಲ್ಲಿ ಸುಮಾರು ಎರಡು ನೂರು ಕುಟುಂಬಗಳಿಗೆ ವಾರಸುದಾರರು ಇಲ್ಲದೆ ಹಾಳು ಬಿದ್ದ ಚಿಕ್ಕ ಮನೆಯನ್ನು ತೆರವೊಗಳಿಸಿ ರಸ್ತೆ ನಿರ್ಮಿಸಿ ಕೊಡುವ ಬಗ್ಗೆ.
8) ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಭೂಸೇನಾ ನಿಗಮದಲ್ಲಿ ಸಿ.ಸಿ.ರೋಡ ಮತ್ತು ಶಾಲೆ ಅರ್ಧಕ್ಕೆ ನಿಲ್ಲಿಸಿದ್ದು, ಅದು ಪೂರ್ಣಗೊಳಿಸಬೇಕು. ಮತ್ತು ಹೊನ್ನಪ್ಪ ಪೂಜಾರಿ ಇವರ ಮೇಲೆ ಕ್ರಮ ಜರುಗಿಸಬೇಕು.
9) ತಡಿಬಿಡಿ ಗ್ರಾಮ ಪಂಚಾಯತಿಯಲ್ಲಿ ಇಬ್ಬರು ಪಿ.ಡಿ.ಓ.ಗಳು ಇದ್ದು ಜನ ಸಾಮಾನ್ಯರು ಕೆಲಸ ಮಾಡದೆ ನನ್ನದು ಚಾರ್ಜ ಇಲ್ಲಾ, ನಿನ್ನದು ಚಾರ್ಜ ಇಲ್ಲವೆಂದು ಕುಂಟು ನೆಪ ಹೇಳುತ್ತಿದ್ದಾರೆ. ಸದರಿ ಪಿ.ಡಿ.ಒ.ರವರ ಮೇಲೆ ಕ್ರಮ ಜರುಗಿಸುವ ಕುರಿತು.
10) ಸುರಪುರ ತಾಲೂಕಿನ ವಾಗಣಗೇರಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ತಳವಾರಗೇರಾ ಗ್ರಾಮದ ಪಂಪ್ ಆಪರೇಟರ ಅವಧಿ ಮುಗಿದು 7 ತಿಂಗಳು ಕಳೆದಿದೆ. ಇನ್ನು ಪಂಪ್ ಆಪರೇಟರನ್ನು ನೇಮಕ ಮಾಡಿಕೊಂಡಿರುವುದಿಲ್ಲ. ಸದರಿ ಖಾಲಿ ಹುದ್ದೆಗೆ ಆದಷ್ಟು ಬೇಗನೆ ನೇಮಕ ಮಾಡಿಕೊಳ್ಳಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...