ಯಾದಗಿರಿ | ಜಾತಿಗಣತಿ ವರದಿ ಅಂಗೀಕರಿಸಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಪ್ರತಿಭಟನೆ

Date:

ಅಕ್ಟೋಬರ್ 25ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನ ಮಾಡಬೇಕು. ದಲಿತ, ಹಿಂದುಳಿದ ವರ್ಗಗಳ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ. 50ರಿಂದ ಶೇ 75ಕ್ಕೆ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಯಾದಗಿರಿಯಲ್ಲಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಮುಖಂಡರು, ಸಾಮಾಜಿಕ ನ್ಯಾಯ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿಗಣತಿ (ಸಾಮಾಜಿಕ ಆರ್ಥಿಕ ಗಣತಿ) ವರದಿಯನ್ನು ಸ್ವೀಕರಿಸಿದ್ದು ಅಭಿನಂದನಾರ್ಹ. ಕೂಡಲೇ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ದಸಂಸ ಮುಂಖಡ ಮರೆಪ್ಪ ಚಟ್ಟೇರಕರ್ ಮಾತನಾಡಿ, ಅಕ್ಟೋಬರ್ 25ರಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನಕ್ಕಾಗಿ ಆಗ್ರಹಿಸಿ ಹಾಗೂ ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ.50 ರಿಂದ ಶೇ.75ಕ್ಕೆ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತ್ತೀಚೆಗೆ ಸರ್ಕಾರವು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿ ಜನಗಣತಿ ವರದಿಯನ್ನು ಸ್ವೀಕರಿಸಿದ್ದನ್ನು ದಲಿತ ಸಂಘರ್ಷ ಸಮಿತಿಯು ಸ್ವಾಗತಿಸಿ ಅಭಿನಂದನೆ ಸಲ್ಲಿಸುತ್ತದೆ” ಎಂದರು.

ಜಾತಿ ಜನಗಣತಿ ವರದಿ ಸ್ವೀಕಾರಗೊಂಡ ಕೂಡಲೇ ಕೆಲವು ಪಟ್ಟಭದ್ರರು ಹಾಗೂ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು ತೀವ್ರ ಅಸಮಾಧಾನ ಹೊರಹಾಕಿ ವಿರೋಧ ವ್ಯಕ್ತಪಡಿಸುತ್ತಿರುವುದು ಕಳವಳಕಾರಿ ಸಂಗತಿ. ಈ ಪಟ್ಟಭದ್ರ ಜಾತಿವಾದಿಗಳು ಜಾತಿಗಣತಿ ವರದಿ ತಿರಸ್ಕರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವುದನ್ನು ದಸಂಸ ತೀವ್ರವಾಗಿ ಖಂಡಿಸುತ್ತದೆ. ಸಾಮಾಜಿಕ ನ್ಯಾಯ ವಿರೋಧಿಯಾದ ಅಸಮಾಧಾನ, ವಿರೋಧ, ಪ್ರತಿಭಟನೆಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೆ ಸಾಮಾಜಿಕ ನ್ಯಾಯದ ಪರವಾಗಿ ದೃಢ ನಿಲುವು ತಾಳಬೇಕೆಂದು” ಮನವಿ ಮಾಡಿದರು.

yAdgiri 1

“ಈ ಜಾತಿ ಜನಗಣತಿ ವರದಿಯ ಅಂಕಿ – ಅಂಶಗಳ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರ ಹಿಂದುಳಿದ ವರ್ಗಗಳ ಈಗಿರುವ ಶೇ.50 ರಷ್ಟು ಶೈಕ್ಷಣಿಕ, ಔದ್ಯೋಗಿಕ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದರ ಮೂಲಕ ಕರ್ನಾಟಕ ರಾಜ್ಯದ ಸಾಮಾಜಿಕ ನ್ಯಾಯ’ದ ಪರಂಪರೆಯನ್ನು ತಾವು ಮತ್ತು ತಮ್ಮ ಸರ್ಕಾರ ಮತ್ತೊಮ್ಮೆ ಎತ್ತಿ ಹಿಡಿದು ದೇಶಕ್ಕೇ ಮಾದರಿ ಆಡಳಿತ ನೀಡುವಿರೆಂದು ನಂಬುತ್ತೇವೆ” ಎಂದರು.

ನಂತರ ಮುಖ್ಯಮಂತ್ರಿಗೆ ಬರೆದ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಅವರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾನಪ್ಪ ಕಟ್ಟಿಮನಿ, ಗೋಪಾಲ ತಳಗೇರಿ, ಹೊನ್ನಪ್ಪ ನಾಟೇಕಾರ್, ಬಸವರಾಜ ಗುಡಿಮನಿ, ಭೀಮರಾಯ, ಸೈದಪ್ಪ ಕೂಲೂರು, ಪರಶುರಾಮ ಒಡೆಯರ್, ಬಸವರಾಜ, ಸಂಪತ್ ಚಿನ್ನಾಕಾರ, ಮರಿಲಿಂಗ ಕುರಕುಂಬಳ, ನಾಗರಾಜ, ಕೂಲುರ, ಬಸವರಾಜ, ಅಪ್ಪಣ ಹಳಗೇರಿ, ವಿಶಾಲ್ ಕೌಳೂರ್, ಶ್ರೀಕಾಂತ ತಲಾರಿ, ಭೀಮರಾಯ ಸುಂಗಲಕರ್, ಮಲ್ಲಿನಾಥ ಸುಂಗಲಕರ್, ವಸಂತ ಸುಂಗಲಕರ್, ವಿಜಯ ಆಶನಾಳ, ಅಂಬರೀಶ್ ಚಟ್ಟೇರಕರ್, ಪಿಂಟು ದಾಸನಕೇರಿ, ಜೈಭೀಮ್ ಕೂಲ್ಲೂರಕರ್, ಶಿವಶಂಕರ ಬಂದಳ್ಳಿ, ಮಲ್ಲು ಕೌಳೂರ್, ಭೀಮರಾಯ ಯಂಡಳ್ಳಿ, ಬಸು ಬೋಳಾರಿ, ಲಾಲಪ್ಪ ತಲಾರಿ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...