ಯಾದಗಿರಿ | ವಿದ್ಯುತ್‌ ಸಮಸ್ಯೆ ಬಗೆಹರಿಸದ ಜೆಸ್ಕಾಂ ಅಧಿಕಾರಿಗಳ ಅಮಾನತಿಗೆ ಆಗ್ರಹ

Date:

ವಿದ್ಯುತ್ ಕಂಬಗಳು ಹಾಗೂ ನಗರದಲ್ಲಿ ದಿನನಿತ್ಯ ಆಗುತ್ತಿರುವ ವಿದ್ಯುತ್‌ ಸಮಸ್ಯೆ ಬಗ್ಗೆ ನಿಷ್ಕಾಳಜಿತನ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಜಿಲ್ಲಾ ಸಮಿತಿ ಯಾದಗಿರಿ ವತಿಯಿಂದ ಜೆಸ್ಕಾಂ ಮುಖ್ಯ ಕಾರ್ಯಪಾಲಕ ‌ಅಭಿಯಂತರರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧಕ್ಷ ರಾಹುಲ್ ಕೊಲ್ಲೂರಕರ್ ಮಾತನಾಡಿ, ʼಯಾದಗಿರಿ ನಗರದ ಕೋಟೆಗಾರವಾಡಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದುಗಡೆ ವಿದ್ಯುತ್ ಕಂಬ ಮತ್ತು ವೈರ್ ಜೋತು ಬಿದ್ದಿದ್ದು, ಇದರಿಂದ ಶಾಲಾ ಮಕ್ಕಳಿಗೆ ಇಲ್ಲಿನ ನಿವಾಸಿಗಳಿಗೆ ಬಹಳ ತೊಂದರೆ ಆಗುತ್ತಿದೆ. ಏನಾದರೂ ಜೀವಕ್ಕೆ ಅಪಾಯವಾದರೆ ಯಾರೂ ಹೊಣೆ, ಪುಟ್ಟ ಮಕ್ಕಳು ಅಪಾಯದೊಂದಿಗೆ ಬದುಕುತ್ತಿದ್ದಾರೆ. ಇಲ್ಲಿನ ಮನೆ ಪಕ್ಕದಲ್ಲಿ ವಿದ್ಯುತ್ ಕಂಬದ ಕಬ್ಬಿಣದ ಸರಳು ಮುರಿದು ಹೋಗಿದ್ದು ನೆಲಕ್ಕುರುಳುವ ಸ್ಥಿತಿಯಲ್ಲಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈ ಬಗ್ಗೆ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದರೂ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಳ್ಳದೇ ನಿಷ್ಕಾಳಜಿತನ ತೋರಿದ್ದು, ಅಧಿಕಾರಿಗಳಾದ ಜೆಇ, ಎಇಇ ಲೈನ್‌ಮ್ಯಾನ್ 2 ಬಾರಿ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದರು.‌ ಯಾವುದೇ ಕ್ರಮ ಕೈಗೊಂಡಿಲ್ಲ. ಎಇಇ ಕಛೇರಿಗೆ ಹಲವಾರು ಬಾರಿ ಭೇಟಿ ನೀಡಿದರೂ ಕೂಡಾ ನಿರ್ಲಕ್ಷ್ಯ ತೋರಿ ಕರ್ತವ್ಯ ಲೋಪ ಎಸಗಿದ್ದಾರೆ. ನಮ್ಮ ಯಾವುದೇ ಮನವಿ ಪತ್ರಕ್ಕೆ ಹಿಂಬರಹ ನೀಡಿರುವುದಿಲ್ಲ ಹಾಗೂ ಸದರಿ ಕೋಟೆಗಾರವಾಡಾದಲ್ಲಿ ದಿನಕ್ಕೆ 5-6 ಬಾರಿ ಬೇಕಾಬಿಟ್ಟಿಯಾಗಿ ವಿದ್ಯುತ್ ಲೈನ್ ತೆಗೆಯುತ್ತಾರೆ ಲೈನ್ ಜಂಪ್ ಆಗಿ ಟಿವಿ, ಫ್ರಿಡ್ಜ್ ಗಳು ಹಾಳಾಗಿದ್ದು, ಸಾಕಷ್ಟು ಅನಾಹುತಗಳಿ ಆಗಿವೆ. ಅಧಿಕಾರಿಗಳಿಗೆ ಪೋನ್ ಮಾಡಿದರೆ ಕರೆ ಸ್ವೀಕರಿಸುವುದಿಲ್ಲʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಢಲೇ ನಿಷ್ಕಾಳಜಿ ತೋರಿದ ಜೆಸ್ಕಾಂ ಎಇಇ, ಜೆಇ,‌ ಎಸ್‌ಓ ಅವರ ಮೇಲೆ ಶಿಸ್ತು ಕ್ರಮ ಜರುಗಿಸಿ ಅವರನ್ನು ಅಮಾನತು ಮಾಡಬೇಕು. ಒಂದು ವಾರದಲ್ಲಿ ಸದರಿ ಅಧಿಕಾರಿಗಳನ್ನು ಅಮಾನತುಗೊಳಿಸಿ ಸಮಸ್ಯೆ ಬಗೆಹರಿಸದೇ ಹೋದಲ್ಲಿ ತಮ್ಮ ಕಛೇರಿಗೆ ಮುಳ್ಳು ಬೇಲಿ ಹಚ್ಚಿ ಪ್ರತಿಭಟನೆ ಮಾಡಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಬೀದರ್‌ | ಸಿದ್ರಾಮಯ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಾಗ ಶಾಸಕ ಬಿ.ಆರ್.ಪಾಟೀಲ್‌ ಸತ್ಯ ಹೇಳ್ತಾರೆ

ಈ ಸಂದರ್ಭದಲ್ಲಿ ಮೋನಪ್ಪ ಮುನೇಪ್ಪಾನೋರ್, ಆಂಜನೇಯ ಭಂಡಾರಿ, ರಮೇಶ್ ಕೌಳೂರ್, ಹಸೇನ್ ನಾಧಫ್, ರಾಮು ಗಣಪುರ, ಹಣಮಂತ ಕೊಲ್ಲೂರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...