ಯಾದಗಿರಿ | ಬೀದರ್‌ ಮಾದರಿಯಂತೆ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಆಗ್ರಹ

Date:

ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಏಜೆನ್ಸಿಗಳಿಂದ ಆಗುತ್ತಿರುವ ಅಕ್ರಮಗಳು ಹಾಗೂ ಅನ್ಯಾಯಗಳನ್ನು ತಡೆಗಟ್ಟಲು ಬೀದರ್ ಮಾದರಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ರಚಿಸಬೇಕೆಂದು ಆಗ್ರಹಿಸಲಾಯಿತು.

ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ(ರಿ) ಯಾದಗಿರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕಾರ್ಮಿಕ ಸಚಿವರು ಹಾಗೂ ರಾಜ್ಯ ಸರಕಾರವು ಈ ಹೊರಗುತ್ತಿಗೆ ಏಜೆನ್ಸಿಗಳ ಬದಲಿಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ರಚಿಸುವಂತೆ ಸಲಹೆ ನೀಡಿರುತ್ತಾರೆ. ಅದರಂತೆ ಈಗಾಗಲೇ ದಾವಣಗೆರೆ, ಬಳ್ಳಾರಿ, ಮೈಸೂರು, ಕೊಪ್ಪಳ ಜಿಲ್ಲೆ ಸೇರಿದಂತೆ ಹಲವೆಡೆ ರಚಿಸಲಾಗಿದ್ದು, ಅದೇ ಮಾದರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬೀದರ್ ಮಾದರಿಯ ‘ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ’ ರಚಿಸಬೇಕೆಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಬರುವ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿಶಾಲೆ, ಕಾಲೇಜುಗಳಲ್ಲಿ ಅಡುಗೆಯವರು, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರು, ಸ್ವಚ್ಛತೆ ಮತ್ತು ಜವಾನ ಸೇರಿ ಹುದ್ದೆಗಳಲ್ಲಿ ಹೊರಗುತ್ತಿಗೆ ಮೂಲಕ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುವ ನೂರಾರು ಕಾರ್ಮಿಕರಿಗೆ ಈ ಕಾರ್ಮಿಕರಿಗೆ ಮಾಸಿಕ ಕನಿಷ್ಠ ವೇತನ ಪಿಎಫ್, ಇಎಸ್‌ಐ, ನೇಮಕಾತಿ ಪತ್ರ, ಗುರುತಿನ ಚೀಟಿ, ವೇತನ ಚೀಟಿ, ರಜೆ ಸೌಲಭ್ಯಗಳು ಕಾಲಕಾಲಕ್ಕೆ ಸರಿಯಾಗಿ ದೊರಕುತ್ತಿಲ್ಲʼ ಎಂದರು.

ʼಗುತ್ತಿಗೆದಾರರು ಕಾರ್ಮಿಕರಿಗೆ ವೇತನ, ಪಿಎಫ್, ಇಎಸ್‌ಐ ಕೊಡುವುದರಲ್ಲಿ ವಂಚನೆ ಮಾಡುತ್ತಿದ್ದಾರೆ. ಇದರ ಬಗ್ಗೆ ಸಾಕಷ್ಟು ಸಲ ಸರ್ಕಾರದ ಗಮನಕ್ಕೆ ತಂದಾಗಲು ಸಮಸ್ಯೆ ಬಗೆ ಹರಿದಿಲ್ಲ. ಅಲ್ಲದೆ ಹೊರಗುತ್ತಿಗೆ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆ ಅನ್ವಯ ನಿಗದಿಯಾದ ಶಾಸನಬದ್ಧ ಸೌಲಭ್ಯಗಳನ್ನು ಸಹಿತ ನೀಡುತ್ತಿಲ್ಲʼ ಎಂದು ದೂರಿದರು.

ಹೊರಗುತ್ತಿಗೆ ಕಾರ್ಮಿಕರಿಗೆ ನ್ಯಾಯ ಒದಗಿಸಲು ಜಿಲ್ಲಾಧಿಕಾರಿಗಳು ತಮ್ಮ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ರಚಿಸಬೇಕೆಂದು ಆಗ್ರಹಿಸಿದರು. ʼಈ ಸಂಬಂಧ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ಸಂಗ್ರಹಿಸಲು ಸೂಚಿಸಿದ್ದೇನೆ. ಮಾಹಿತಿ ಪಡೆದ ನಂತರ ಖಂಡಿತ ನಿಯಮನುಸಾರ ಕ್ರಮಕೈಗೊಳ್ಳಲಾಗುವುದು ಎಂದುʼ ಜಿಲ್ಲಾಧಿಕಾರಿಗಳು ಸಕರಾತ್ಮಕವಾಗಿ ಸ್ಪಂದಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮೊಬೈಲ್ ಹೆಚ್ಚು ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಸಂಘದ ಜಿಲ್ಲಾಧ್ಯಕ್ಷ ಶರಣಪ್ಪ ಜಿ ತೆಳಿಗೇರಿಕರ್, ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್, ಜಿಲ್ಲಾ ಸಮಿತಿ ಸದಸ್ಯರಾದ ಭೀಮಶಂಕರ್ ನಾಯ್ಕಲ್, ಗಜಾನಂದ ನಟೇಕರ್, ಶ್ರೀಕಾಂತ್ ಚಿಕ್ಕಮೇಟಿ, ಮೋನಮ್ಮ, ಲಾವಣ್ಯ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...