ಯಾದಗಿರಿ | ಸರ್ಕಾರಿ ಜಾಗ ಒತ್ತುವರಿ; ಕ್ರಮಕ್ಕೆ ಆಗ್ರಹ

Date:

ಯಾದಗಿರಿ ಜಿಲ್ಲೆಯ ಮೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಜಮೀನು ತೆರವುಗೊಳಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ.

ಜಿಲ್ಲೆಯ ಮುದ್ನಾಳ ಪಂಚಾಯಿತಿಯ ಮುದ್ನಾಳ, ಹಾಲಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಡಿಹಾಳ ಮತ್ತು ಗುಂಡಗುರ್ತಿ ಪಂಚಾಯಿತಿ ವ್ಯಾಪ್ತಿಯ ಟೋಕಾಪುರ ಗ್ರಾಮಗಳಲ್ಲಿ ಸರ್ಕಾರಿ ಗಾಯರಾಣ ಜಾಗವನ್ನು ಕೆಲವು ಪಟ್ಟಭದ್ರ ಶಕ್ತಿಗಳು, ಒತ್ತುವರಿ ಮಾಡಿ ಸರ್ಕಾರಿ ಜಾಗದಲ್ಲಿ ಬೃಹತ್ ಆಕಾರದ ಮನೆ ನಿರ್ಮಾಣಕ್ಕೆ ಮುಂದಾಗಿದ್ದ ವೇಳೆ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಉಮೇಶ ಕೆ. ಮುದ್ನಾಳ ಅವರು ಆರೋಪಿಸಿದರು.

“ಮನೆ ನಿರ್ಮಾಣಕ್ಕೆ ತಳಪಾಯ ಹಾಕುತ್ತಿದ್ದಾಗಲೇ ಅಧಿಕಾರಿಗಳಿಗೆ ದೂರು ಕೊಟ್ಟಿದ್ದೆವು. ಆದರೆ, ಮನೆ ಮುಕ್ತಾಯಗೊಂಡರೂ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿದವರ ವಿರುದ್ಧ ಯಾದಗಿರಿ ಮತ್ತು ಶಹಾಪುರದ ಜೆಸ್ಕಾಂ ಎಇಇ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೆಸ್ಕಾಂ ಅಧಿಕಾರಿಗಳು ನಾಮಕಾವಸ್ತೆಗೆ ಗ್ರಾಮಕ್ಕೆ ಭೇಟಿ ನೀಡಿ, ವಿದ್ಯುತ್ ತೆರವುಗೊಳಿಸದೇ ಸುಳ್ಳು ದಾಖಲೆ ಸೃಷ್ಟಿಸುತ್ತಿದ್ದು, ಎಂಜಲು ಕಾಸಿಗೆ ಅವರ ಗುಲಾಮರಾಗಿ ವರ್ತಿಸುತ್ತಿದ್ದಾರೆ. ಅಂತಹ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಈ ಮೂರೂ ಗ್ರಾಮಗಳಿಗೆ ಆಕಸ್ಮಿಕ ಭೇಟಿ ನೀಡಿ ಸಂಪೂರ್ಣ ವರದಿ ತರಿಸಿಕೊಂಡು ಊರು ಅಭಿವೃದ್ಧಿ ಮಾಡದ ಅಧಿಕಾರಿಗಳು ತಾವೇ ಅಬಿವೃದ್ಧಿಯಾಗುತ್ತಿದ್ದಾರೆ. ಸಮಯಕ್ಕ ಸರಿಯಾಗಿ ಕಚೇರಿಗೆ ಹೋಗದೆ ಯಾದಗಿರಿಯಲ್ಲಿ ಕುಳಿತು ರಾಜಕೀಯ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸಮಂಜಸ?” ಎಂದಿದ್ದಾರೆ.

“ಈ ಮೂರು ಗ್ರಾಮಗಳಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿರುವ ಕುರಿತು ಎಲ್ಲ ದಿನಪತ್ರಿಕೆ, ಮಾಧ್ಯಮಗಳಲ್ಲಿ ಆರು ತಿಂಗಳು ಹಿಂದೆಯೇ ವರದಿಯಾಗಿದ್ದರೂ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಒತ್ತುವರಿ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮೆಹಬೂಬ್ ಸುಭಾನಿ ದರ್ಗಾ ಎದುರಿನ ತಡೆಗೋಡೆ ತೆರವಿಗೆ ಆಗ್ರಹ

“ಮೂರೂ ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿ ವ್ಯವಸ್ಥೆ ಮಾಡಬೇಕು. ಸಿಸಿ ರಸ್ತೆ, ಚರಂಡಿಗಳನ್ನು ನಿರ್ಮಿಸಿ ರಸ್ತೆ ಮೇಲೆ ಹರಿಯುವ ಹೊಲಸು ನೀರಿನಿಂದ  ಸಾಂಕ್ರಾಮಿಕ ರೋಗ ಹರಡದಂತೆ ತಡೆಯಬೇಕು” ಎಂದು ಒತ್ತಾಯಿಸಿದರು.

“ಅಕ್ರಮ ಎಸಗಿದವರ ವಿರುದ್ಧ ಕೂಡಲೇ ಕ್ರಮ ಕೈಗೊಂಡು, ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಬೇಕು ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ವಿರುದ್ಧವೇ ಪ್ರತಿಭಟನೆ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...