ಯಾದಗಿರಿ | ಮಕ್ಕಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು; ಶರಣಬಸಪ್ಪ ಗೌಡ ಪಾಟೀಲ್ ದರ್ಶನಾಪುರ

Date:

ಮಕ್ಕಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಕರೆ ನೀಡಿದರು.

ಯಾದಗಿರಿಯ ವರ್ಲ್ಡ್ ವಿಷನ್ ಇಂಡಿಯಾ ಕ್ಷೇತ್ರ ಅಭಿವೃದ್ಧಿ ಸಂಸ್ಥೆಯಿಂದ ಶಹಪುರದಲ್ಲಿ ಏರ್ಪಡಿಸಿದ್ದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

“ವರ್ಲ್ಡ್ ವಿಷನ್ ಸಂಸ್ಥೆ ಸುಮಾರು ಐದು ವರ್ಷಗಳಿಂದ ಮಕ್ಕಳಿಗಾಗಿ ಮಹಿಳೆಯರಿಗಾಗಿ ಮತ್ತು ಗ್ರಾಮ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳು ಮಾಡುತ್ತಾ ಬಂದಿದೆ, ಅವರ ಕಾರ್ಯವು ಶ್ಲಾಘನೀಯ” ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯೋಜನಾಧಿಕಾರಿ ಅನಿಲ್ ತೇಜಪ್ಪ ಬಲ್ಲೂರಕರ್ ಮಾತನಾಡಿ, ಸಂಸ್ಥೆಯು ಮಕ್ಕಳ ಅಭಿವೃದ್ಧಿಗಾಗಿ ಹಮ್ಮಿಕೊಂಡಿರುವಂತಹ ಕಾರ್ಯಕ್ರಮಗಳನ್ನು ಬಗ್ಗೆ ವಿವರಿಸಿದರು. ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಸರ್ಕಾರದೊಂದಿಗೆ ಸಹಕರಿಸುತ್ತೇವೆಂದು ತಿಳಿಸಿದರು.

ವರ್ಲ್ಡ್ ವಿಷನ್ ಸಂಸ್ಥೆ ವತಿಯಿಂದ ಹೊಸಪೇಟೆ ಗ್ರಾಮದ ಸರ್ಕಾರಿ ಶಾಲೆಯ 18 ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ ಮಾಡಿದರು.
ಮತ್ತು 30 ಮಂದಿ ಮಕ್ಕಳಿಗೆ ಪೌಷ್ಟಿಕ ಆಹಾರ ಧಾನ್ಯಗಳನ್ನು, ಹಾಗು ಡಿಗ್ಗಿ, ಜೆ ತಾಂಡಾ, ಎಮ್ ತಾಂಡಾ, ರಸ್ಥಾಪುರ ಅಂಗನವಾಡಿ ಕೇಂದ್ರಗಳಿಗೆ ತಲಾ 30 ಕುರ್ಚಿಗಳು ಹಾಗೂ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು.

ಮಲ್ಲಣ್ಣ ದೇಸಾಯಿ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು, ನಿಷತ್ ಅಂಜುಮ್ ಅಂಗನವಾಡಿ ಮೇಲ್ವಿಚಾರಕರು ವೇದಿಕೆ ಮೇಲೆ ಇದ್ದರು.

ಕಾರ್ಯಕ್ರಮದಲ್ಲಿ ಸುಂದರ್, ರಾಬರ್ಟ್, ಮೋಹನ್, ಅಶೋಕ್, ಶಿವು, ಸಿದ್ದಮ್ಮ ಹಾಗೂ ವರ್ಲ್ಡ್ ವಿಷನ್ ಸಂಸ್ಥೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...