ಯಾದಗಿರಿ | ಬೆಳೆ ನಾಶ ಜಿಲ್ಲೆಯನ್ನು ಹಸಿ ಬರವೆಂದು ಘೋಷಿಸಿ, ಸಾಲ ಮನ್ನಾ ಮಾಡುವಂತೆ ರೈತ ಸಂಘದ ಆಗ್ರಹ

Date:

ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿ ಹತ್ತಿ, ಭತ್ತ, ತೊಗರಿ ಸೇರಿದಂತೆ ಮುಂಗಾರಿನ ಬೆಳೆಗಳು ಹಾನಿಗೊಳಗಾದ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಹಸಿ ಬರ ಪ್ರದೇಶವೆಂದು ಘೋಷಿಸಿ, ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಸಮಿತಿ, ಯಾದಗಿರಿ ಆಗ್ರಹಿಸಿದೆ.

ಸೋಮವಾರ ಯಾದಗಿರಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದ ನಂತರ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟ್ ಮಾತನಾಡಿ, ‘ಈ ವರ್ಷ ಮಳೆಗಾಳಿ ಮತ್ತು ಅನಿಯಮಿತ ಹವಾಮಾನದ ಪರಿಣಾಮವಾಗಿ ಮುಂಗಾರಿನ ಬೆಳೆಗಳು ಸಂಪೂರ್ಣ ಹಾಳಾಗಿವೆ. ಹತ್ತಿ, ಭತ್ತ, ಮೆಣಸಿನಕಾಯಿ ಸೇರಿದಂತೆ ಹಲವು ಬೆಳೆಗಳು ನೆಲಕ್ಕುರುಳಿವೆ. ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ರೈತರು ಬೆಳೆ ಮಾರಾಟಕ್ಕೂ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಜಿಲ್ಲೆಯನ್ನು ಹಸಿ ಬರವೆಂದು ಘೋಷಿಸಿ, ಸಾಲ ಮನ್ನಾ ಮಾಡಬೇಕು,” ಎಂದು ಆಗ್ರಹಿಸಿದರು.

ಅವರು ಮುಂದುವರಿಸಿ, ‘ಹಿಂಗಾರಿನ ಬೆಳೆಗೆ ಆಣೆಕಟ್ಟಿನಿಂದ ನೀರು ಒದಗಿಸಲು ನೀರಾವರಿ ಸಲಹಾ ಸಮಿತಿ ತೀರ್ಮಾನವನ್ನು ತಕ್ಷಣ ಪ್ರಕಟಿಸಬೇಕು. ಸರ್ಕಾರ ತಡ ಮಾಡಿದರೆ ರೈತ ಸಂಘವು ರಸ್ತೆಗಿಳಿದು ಹೋರಾಟ ನಡೆಸಲಿದೆ,’ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಾದಗಿರಿ | ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ : ಪ್ರಕರಣ ದಾಖಲು

ಜಿಲ್ಲಾಧ್ಯಕ್ಷ ಶರಣು ಮಂದರವಾಡ ಮಾತನಾಡಿ, ‘ಅತಿ ಮಳೆಯ ಪರಿಣಾಮವಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಜಿಲ್ಲೆಯನ್ನು ಹಸಿ ಬರವೆಂದು ಘೋಷಿಸಿ, ಸಾಲ ಮನ್ನಾ ಮಾಡಬೇಕು. ಅಲ್ಪಸ್ವಲ್ಪ ಬೆಳೆದಿರುವ ಹತ್ತಿ, ಭತ್ತಕ್ಕೆ ಖರೀದಿ ಕೇಂದ್ರ ತೆರೆಯಬೇಕು ಮತ್ತು ಹಾನಿಗೊಳಗಾದ ಹೊಲಗಳಿಗೆ ಸೂಕ್ತ ಪರಿಹಾರ ನೀಡಬೇಕು,’ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಲ್ಕಣ್ಣ ಚಿಂತಿ, ಚಂದ್ರಕಲಾ ಬಾಗೂರು, ಮಲ್ಲಣ್ಣ ನೀಲಹಳ್ಳಿ, ಭೀಮರಾಯ ಎಲೇರಿ, ಪ್ರಭಾಕರರೆಡ್ಡಿ ಕೊಂಗಂಡಿ, ಭೀಮರಾಯ ಹಾಲಗೇರಾ, ಫಕೀರ್ ಅಹ್ಮದ್ ಮರಡಿ ವಡಗೇರಾ, ಶಿವರಾಜ ಕೋನಹಳ್ಳಿ, ದುರ್ಗಪ್ಪ ಕೋನಹಳ್ಳಿ, ಮಂಜುನಾಥ ಕೋನಹಳ್ಳಿ, ದುರ್ಗಪ್ಪ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...