ಯಾದಗಿರಿ | ಮಾ.14 ರಿಂದ ಏ.15 ರವರೆಗೆ ಕಾಲುವೆಗೆ ನೀರು ಹರಿಸಲು ರೈತ ಸಂಘ ಆಗ್ರಹ

Date:

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಣಪೂರ ಬಸವಸಾಗರ ಜಲಾಶಯದಿಂದ ಬೇಸಿಗೆ ಬೆಳೆಗೆ ಮಾರ್ಚ್ 14 ರಿಂದ ಏಪ್ರಿಲ್ 15ರವರೆಗೆ ನಿರಂತರವಾಗಿ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸಾಮೂಹಿಕ ಸಂಘಟನೆಗಳ ವೇದಿಕೆ ಆಗ್ರಹಿಸಿತು.

ಸುರಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಹಣಮಂತರಾಯ ಚಂದಲಾಪೂರ ಮಾತನಾಡಿ, ʼಮಾ.14 ರಂದು ಸಲಹಾ ಸಮಿತಿಯಲ್ಲಿ ವಾರ ಬಂದಿ ಪದ್ಧತಿಯಂತೆ ಏಪ್ರಿಲ್ 6 ರವರೆಗೆ ಕಾಲುವೆಗೆ ನೀರು ಹರಿಸುತ್ತೇವೆಂದು ತಿಳಿಸಲಾಗಿದೆ. ಇದು ಆವೈಜ್ಞಾನಿಕ ಪರಿಹಾರವಾಗಿದೆ. ವಾರಬಂದಿ ಮಾಡದೆ ನಿರಂತರವಾಗಿ ಏಪ್ರಿಲ್ 15 ರವರೆಗೆ ನೀರು ಬಿಟ್ಟರೆ ಮಾತ್ರ ರೈತರಿಗೆ ಫಸಲು ಕೈ ಸೇರುತ್ತದೆ. ಈಗಾಗಲೇ ಸರ್ಕಾರಕ್ಕೆ ಎರಡ್ಮೂರು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸಲಿಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಮಾರ್ಚ್ 22 ರಿಂದ 30 ರವರೆಗೆ ನೀರು ಬಂದ್ ಮಾಡಿ ಏಪ್ರಿಲ್ 6 ರವರೆಗೆ ನೀರು ಬಿಡುವುದು ತಿಳಿಸಿದ್ದಾರೆ. ಆದರೆ ಇದರಿಂದಾಗಿ ರೈತರು ಬಿತ್ತನೆ ಮಾಡಿದ ಒಂದು ಬೆಳೆ ಕೂಡಾ ಬರುವುದಿಲ್ಲ. ಬೇಸಿಗೆ ಬಿಸಿಲಿಗೆ ಬೆಳೆ ಒಣಗಿ ನಷ್ಟ ಅನುಭವಿಸುವ ಪರಿಸ್ಥಿತಿ ಬರುತ್ತದೆ. ಕೂಡಲೇ ಈ ನಿರ್ಧಾರ ಕೈಬಿಟ್ಟು ಇಂದಿನಿಂದ ವಾರಬಂದಿ ಪದ್ಧತಿಯಂತೆ ಏಪ್ರಿಲ್ 15ರ ವರೆಗೆ ಕಾಲುಗೆ ನೀರು ಹರಿಸಬೇಕುʼ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಒಂದು ವೇಳೆ ನೀರು ಬಿಡದಿದ್ದರೆ ರೈತರ ಬೆಳೆ ಸಂಪೂರ್ಣ ಹಾನಿಯಾಗುತ್ತದೆ. ಅದಕ್ಕೆ ಸರ್ಕಾರವೇ ನೇರ ಹೊಣೆ ಹೊರಬೇಕಾಗುತ್ತದೆ. ಈ ನಷ್ಟದಿಂದ ಸಾಲಬಾಧೆ ತಾಳಲಾರದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರಬಹುದು. ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ರೈತ ಸಂಘದಿಂದ ಸಂಬಂಧಪಟ್ಟ ಕಚೇರಿಗೆ ಬೀಗ ಹಾಕಿ ನ್ಯಾಯ ಸಿಗುವವರೆಗೆ ಹೋರಾಟ ನಡೆಸಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ತೊಗರಿ ಬೆಳೆ ಹಾನಿ, ಆರ್ಥಿಕ ಹೊರೆ; ಒಂದೇ ತಿಂಗಳಲ್ಲಿ ಆರು ಮಂದಿ ರೈತರ ಆತ್ಮಹತ್ಯೆ

ರೈತ ಸಂಘದ ಪ್ರಮುಖರಾದ ಅಯ್ಯಣ್ಣ ಹಾಲಭಾವಿ, ಮಹಾದೇವಿ ಬೇವಿನಾಳಮಠ, ಮಲ್ಲನಗೌಡ ಹಗರಟಗಿ, ಭೀಮಣ್ಣ ಲಕ್ಷ್ಮೀಪೂರ, ಬುಚ್ಚಪ್ಪ ನಾಯಕ, ಮಲ್ಲಣ್ಣ ಹುಬ್ಬಳಿ, ಸಿದ್ದಪ್ಪ ಗುಡ್ಡಕಾಯಿ, ವೆಂಕಟೇಶಗೌಡ ಕುಪಗಲ್, ನಿಂಗಣ್ಣ ಬಾಚಿಮಟ್ಟಿ, ಮಲ್ಲಣ್ಣ ಸಾಹುಕಾರ, ಜುಮ್ಮಣ್ಣ ಕೆಂಗೂರಿ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...