ಯಾದಗಿರಿ | ಏ.15ರವರೆಗೆ ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಲು ಆಗ್ರಹ

Date:

ಏ.15ರವರೆಗೆ ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಬೇಕು. ಬೆಳೆದು ನಿಂತ ಪೈರು ಸಂರಕ್ಷಣೆ ಮಾಡಬೇಕು. ಮೆಣಸಿನಕಾಯಿ ಬೆಲೆ ಕುಸಿತವಾಗಿದ್ದು, ತಕ್ಷಣ ಹೆಚ್ಚಿನ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಶಹಾಪುರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಸೋಮವಾರ ನಗರದ ಸಿ.ಬಿ.ಕಮಾನ್‌ನಿಂದ ನಗರದ ಬಸವೇಶ್ವರ ವೃತ್ತದವರೆಗೆ ಪ್ರತಿಭಟನೆ ಮೂಲಕ ಆಗಮಿಸಿ ವೃತ್ತದಲ್ಲಿ ಕೆಲಹೊತ್ತು ಪ್ರತಿಭಟನೆ ನಡೆಸಿದರು. ಬಳಿಕ ಜಿ.ಪಂ. ಸಿಇಒ ಲವೀಶ್ ಒರ್ಡಿಯಾ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದರು.

ʼಬೇಸಿಗೆ ಕಾಲದಲ್ಲಿ ಕುಡಿಯುವ ನೀರನ್ನು ಮಾನವೀಯತೆ ಮೇಲೆ ಬಿಡುಗಡೆ ಮಾಡಿದ್ದರೆ ರೈತರದ್ದು ಯಾವುದೇ ತಕರಾರು ಇರುತ್ತಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ತಮ್ಮ ಸ್ವಾರ್ಥ ಸಾಧನೆಗಾಗಿ ನಮ್ಮ ಕತ್ತು ಹಿಸುಕಿ ರಾತ್ರೋರಾತ್ರಿ ತೆಲಂಗಾಣ ರಾಜ್ಯಕ್ಕೆ ನೀರು ಹರಿಸಿರುವುದು ಯಾವ ಪುರುಷಾರ್ಥಕ್ಕಾಗಿʼ ಎಂದು ರೈತ ಮುಖಂಡರು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕಾಲುವೆಗೆ ನೀರು ಹರಿಸುವಂತೆ ಮನವಿ ಮಾಡಿದರೆ ಹಲವಾರು ಕಾನೂನು ಹೇಳುತ್ತಿರಿ. ಆದರೆ ಯಾವುದೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಕರೆಯದೆ ಹಾಗೂ ಯಾರ ಗಮನಕ್ಕೂ ತರದೆ ನೀರು ಹರಿಸಿದ್ದು, ನಮ್ಮ ರೈತರ ಶಾಪ ನಿಮಗೆ ತಟ್ಟಲಿದೆʼ ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತರು ಆಕ್ರೋಶ ಹೊರಹಾಕಿದರು.

ರಾಜ್ಯ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ, ʼಈಗಾಗಲೇ ಬೇಸಿಗೆ ಹಂಗಾಮಿನ ಬೆಳೆಗಳಾದ ಶೇಂಗಾ, ಸಜ್ಜೆ, ಮೆಣಸಿನಕಾಯಿ, ಹತ್ತಿ, ಸೂರ್ಯಕಾಂತಿ ಮುಂತಾದ ಬೆಳೆಗಳನ್ನು ಬಿತ್ತನೆ ಮಾಡಲಾಗಿದೆ. ಈಗ ಬೇಸಿಗೆ ಕಾಲವಾಗಿದ್ದರಿಂದ ಅಧಿಕ ನೀರು ಬೆಳೆಗೆ ಬೇಕಾಗುತ್ತದೆ. ಕಾಲುವೆಗೆ ನಿರಂತರ ನೀರು ಹರಿಸಿದರೆ ಸಮಸ್ಯೆ ಉಂಟಾಗುವುದಿಲ್ಲ. ಇಲ್ಲದೆ ಹೋದರೆ ರೈತರ ನಡುವೆ ಕಂದಕ ಉಂಟಾಗುತ್ತದೆ. ನಾರಾಯಣಪೂರ ಹಾಗೂ ಆಲಮಟ್ಟಿ ಜಲಾಶಯದಲ್ಲಿ ಸಾಕಷ್ಟು ನೀರಿನ ಸಂಗ್ರಹವಿದೆ. ನಿಗಮದ ಅಧಿಕಾರಿಗಳು ಕಾಗಕ್ಕ ಗುಬ್ಬಕ್ಕನ ಕತೆ ಹೇಳಿ ರೈತರನ್ನು ಯಾಮಾರಿಸಬೇಡಿʼ ಎಂದು ತಿಳಿಸಿದರು.

ʼಬೇಸಿಗೆ ಕಾಲವಾಗಿದ್ದರಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ರೈತರ ಅನುಕೂಲಕ್ಕಾಗಿ 7ಗಂಟೆ ನಿರಂತರವಾಗಿ ವಿದ್ಯುತ್ ಹರಿಸಬೇಕು. ಇದರಿಂದ ಕೃಷಿ ಪಂಪಸೆಟ್‌ಗಳಿಗೆ ನೆರವಾಗಲಿದೆ. ತೊಗರಿ ಹಾಗೂ ಹತ್ತಿ ಖರೀದಿಯನ್ನು ಇನ್ನೂ ಒಂದು ತಿಂಗಳ ವಿಸ್ತರಿಸಬೇಕು. ತೀವ್ರವಾಗಿ ಕುಸಿತ ಕಂಡಿರುವ ಮೆಣಸಿನಕಾಯಿ ಬೆಳೆಗೆ ಕನಿಷ್ಠ ಬೆಂಬಲ ಮೇಲೆ ₹30ಸಾವಿರ ನೀಡಬೇಕುʼ ಎಂದು ರೈತರ ಮುಖಂಡರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮಾಜಿ ಎಂಎಲ್‍ಸಿ ಕಾಜಿ ಅರಶದ್ ಅಲಿ ನಿಧನ

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಮಹಿಳಾ ಘಟಕ ಅಧ್ಯಕ್ಷೆ ನಾಗರತ್ನಮ್ಮ ವಿ. ಪಾಟೀಲ, ಯಾದಗಿರಿ ಜಿಲ್ಲಾಧ್ಯಕ್ಷ ಶರಣು.ವಿ.ಮಂದರವಾಡ,‌ ಜಿಲ್ಲಾಧ್ಯಕ್ಷೆ ಮಹಿಳಾ ಘಟಕ ಚಂದ್ರಕಲಾ ಬಾಗೂರು, ಯಾದಗಿರಿ ಜಿಲ್ಲಾ ಕಾರ್ಯದರ್ಶಿ ಮುದ್ದಣ್ಣ ಅಮ್ಮಾಪೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಹಾಪೂರ ಮಲ್ಕಣ್ಣ.ಎಸ್.ಚಿಂತಿ, ಶಹಾಪೂರ ತಾಲೂಕಾಧ್ಯಕ್ಷ ಪ್ರಭಾಕರ ರೆಡ್ಡಿ ಕೊಂಗಂಡಿ, ಶೋರಾಪೂರ ತಾಲೂಕಾಧ್ಯಕ್ಷ ಭೀಮಣ್ಣ ನಾಯಕ, ವಡಗೇರಾ ತಾಲೂಕಾಧ್ಯಕ್ಷ ಮಲ್ಲಣ್ಣ ನೀಲಹಳ್ಳಿ, ಹುಣಸಗಿ ತಾಲೂಕಾಧ್ಯಕ್ಷ ಶಂಕರ ಜಾಧವ, ಗುರುಮಿಠಕಲ್ ತಾಲೂಕಾಧ್ಯಕ್ಷ ಭೀಮರಾಯ ಎಲ್ಲೇರಿ, ಯಾದಗಿರಿ ತಾಲೂಕಾಧ್ಯಕ್ಷ ಬಾಲಾಜಿ ಟಿ.ವಡಗೇರಾ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...