ಯಾದಗಿರಿ | ರೈತರಿಗೆ ಸಮರ್ಪಕ ರಸಗೊಬ್ಬರ ವಿತರಣೆಗೆ ಒತ್ತಾಯಿಸಿ ರೈತ ಸಂಘ ಪ್ರತಿಭಟನೆ

Date:

ಸಮರ್ಪಕವಾಗಿ ರಸಗೊಬ್ಬರ ವಿತರಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ ಸಮಿತಿ ಮುಖಂಡರು ಹಾಗೂ ರೈತರು ನಗರದ ಗಾಂಧಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಕೃಷಿ ಇಲಾಖೆಯ ಉಪ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದರು.

ಸಂಘದ ತಾಲ್ಲೂಕು ಸಮಿತಿ ಅಧ್ಯಕ್ಷ ಹಣಮಂತ್ರಾಯ ಚಂದಲಾಪುರ ಮಾತನಾಡಿ, ʼರೈತರಿಗೆ ಸಮರ್ಪಕವಾಗಿ ಯೂರಿಯಾ ರಸಗೊಬ್ಬರ ದೊರೆಯುತ್ತಿಲ್ಲ. ಬೆಳಿಗ್ಗೆಯಾದರೆ ದಿನಂಪತ್ರಿ ಗಂಟೆಗಟ್ಟಲೆ ರಸಗೊಬ್ಬರ ಮಳಿಗೆ ಮುಂದೆ ನಿಂತು ವರ್ತಕರು ಕೊಟ್ಟಷ್ಟು ತೆಗೆದುಕೊಂಡು ಹೋಗುವ ದುಸ್ಥಿತಿ ನಿರ್ಮಾಣವಾಗಿದೆʼ ಎಂದು ಆರೋಪಿಸಿದರು.

ʼಮುಂಗಾರು ಮಳೆ ಸಮಯಕ್ಕೆ ಸರಿಯಾಗಿ ಬಂದಿರುವುದರಿಂದ ಜಿಲ್ಲೆಯಾದ್ಯಂತ ಉತ್ತಮ ಬಿತ್ತನೆಯಾಗಿದ್ದು, ರೈತರು ಸಾಲ ಮಾಡಿ ಶೇಂಗಾ, ಹತ್ತಿ, ಸಜ್ಜೆ, ತೊಗರಿ, ಭತ್ತ ಸೇರಿ ಇನ್ನಿತರ ಬೆಳೆಗಳನ್ನು ಬೆಳೆದಿರುತ್ತಾರೆ. ಮೂರು ಬಾರಿ ಗೊಬ್ಬರ, ಕೀಟನಾಶಕ ಸಿಂಪಡಿಸಿದರೆ ಮಾತ್ರ ಈ ಬೆಳೆಗಳು ಬರುತ್ತವೆ. ಈ ವರ್ಷ ಯೂರಿಯಾ ರಸಗೊಬ್ಬರದ ಅಭಾವವುಂಟಾಗಿ ರೈತರು ಸಂಕಷ್ಟ ಎದುರಿಸುವಂತಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕೃಷಿ ಅಧಿಕಾರಿಗಳು ರೈತರಿಗೆ ಗೊಬ್ಬರ ಸಿಕ್ಕಿದೆ ಎಂದು ಸುಳ್ಳು ಹೇಳುತ್ತಾರೆ. ಆದರೆ ಸಿಗುತ್ತಿಲ್ಲ. ಅಧಿಕಾರಿಗಳು ಸತ್ಯಾಂಶ ಅರ್ಥಮಾಡಿಕೊಳ್ಳಬೇಕು. ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಕೃಷಿ ಅಧಿಕಾರಿಗಳು ರೈತರಿಗೆ ಬೇಕಾಗುವಷ್ಟು ಗೊಬ್ಬರ ತರಿಸಿ ಕೊಟ್ಟು ರೈತರ ನೆರವಿಗೆ ಧಾವಿಸಬೇಕು. ನಿರ್ಲಕ್ಷ ತೋರಿಸಿದಲ್ಲಿ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ದೊರೆಯುವವರೆಗೆ ನಿರಂತರವಾಗಿ ಉಗ್ರವಾದ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾದ ಅಂಗವಿಕಲ ಸಹೋದರಿಯರಿಗೆ ಬೇಕಿದೆ ಸಹಾಯಹಸ್ತ!

ಮುಖಂಡರಾದ ಹನುಮಗೌಡ ನಾರಾಯಣಪೂರ, ಸಾಹೇಬಗೌಡ ಮದಲಿಂಗನಾಳ, ವೆಂಕಟೇಶಗೌಡ ಕುಪಗಲ್, ಮಲ್ಲು ಹಾಲಭಾವಿ, ಭೀಮನಗೌಡ ಕರ್ನಾಳ, ದೇವಿಂದ್ರಪ್ಪ ತಿಪ್ಪನಟಗಿ, ಭೀಮಣ್ಣ ತಿಪ್ಪನಟಗಿ, ತಿಪ್ಪಣ್ಣ ಜಂಪಾ, ನಾಗಪ್ಪ ಕುಪಗಲ್, ಶಿವನಗೌಡ ರುಕ್ಕಾಪೂರ, ದೇವಪ್ಪ ತಿಪ್ಪನಟಗಿ, ತಿಪಣ್ಣ ತಳವಾರ, ದೇವಣ್ಣ ಎರಕಿಹಾಳ, ಯಂಕೋಬ ದೊರೆ ಕುಪಗಲ್, ಲೋಹಿತ್‌ಕುಮಾರ, ನಿಂಗನಗೌಡ ಗುಳಬಾಳ, ಮೌನೇಶ ಅರಳಹಳ್ಳಿ, ಪ್ರಭು ದೊರಿ, ತಿಪ್ಪಣ್ಣ ತಳವಾರ, ಗದ್ದೆಪ್ಪ ನಾಗಬೇವಿನಾಳ, ಖುದಾಭಕ್ಷ, ಯಂಕಪ್ಪ ದಾಸರ, ಮಾನಪ್ಪ ಕೊಂಬಿನ್, ತಿರುಪತಿ ಕುಪಗಲ್ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...