ಯಾದಗಿರಿ | ಎಲ್ಲ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ

Date:

ಯಾದಗಿರಿ ಜಿಲ್ಲೆಯ ಕೆಲವು ತಾಲೂಕುಗಳನ್ನು ಮಾತ್ರ ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿದೆ. ಆ ಪಟ್ಟಿಯನ್ನು ಕೈಬಿಟ್ಟು ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡತವೆಂದು ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಸುರಪುರ ತಹಶೀಲ್ದಾರ್‌ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಲಭಾವಿ ಮಾತನಾಡಿ, “ಈಗಾಗಲೇ ಜನರಿಂದಲೇ ಸಂಪೂರ್ಣವಾಗಿ ಬಹುಮತ ಪಡೆದು ನೂತನ ಸರ್ಕಾರ ರಚನೆಯಾಗಿದ್ದು, ಜನರ ಹಿತ ಕಾಯಬೇಕಾಗಿರುವುದು ಆಡಳಿತ ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ ಎರಡ್ಮೂರು ವರ್ಷಗಳಿಂದ ರೈತರು, ಕೂಲಿ ಕಾರ್ಮಿಕರು ಮತ್ತು ದುಡಿಯುವ ವರ್ಗದವರ ಬದುಕು ಚಿಂತಾಜನಕವಾಗಿದೆ. ಸಕಾಲಕ್ಕೆ ಸರಿಯಾಗಿ ಮಳೆ ಬಾರದೆ ಅಲ್ಪ-ಸ್ವಲ್ಪ ಮಳೆ ಬಂದಿದ್ದರಿಂದ ರೈತರು ಸಾಲ ಸೂಲ ಮಾಡಿ ಬೀಜ ಬಿತ್ತಿದ್ದಾರೆ. ಆದರೆ ಮಳೆ ಬರದೆ ಅದೂ ಕೂಡಾ ಸಂಪೂರ್ಣ ಒಣಗಿ ಹೋಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರು ಸಾಲಸೋಲ ಮಾಡಿ ಬೆಳೆಗೆ ಗೊಬ್ಬರ, ಆಳುಗಳಿಗೆ ಕೂಲಿ ಸೇರಿದಂತೆ ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ಆದರೆ ಮಳೆ ಬಾರದೆ ಇರುವುದರಿಂದ ರೈತರು ಆತ್ಮಹತ್ಯೆಗೆ ಶರಣಾಗುವಂತಹ ಪರಿಸ್ಥಿತಿ ಉಂಟಾಗಿದೆ. ಈಗಾಗಲೇ ಶೇಂಗಾ ಬೀಜ, ಗೊಬ್ಬರ, ಕೀಟನಾಶಕಗಳ ದರ ಗಗನಕ್ಕೇರಿದೆ. ಆದರೆ ಮೂರು ವರ್ಷಗಳಿಂದ ರೈತರು ಹಾಕಿರುವ ಬಂಡವಾಳವೇ ಸರಿಯಾಗಿ ಕೈಗೆ ಬಾರದಂತಾಗಿದೆ. ಈ ವರ್ಷ ಅಲ್ಲಸ್ವಲ್ಪ ಬೆಳೆದಿರುವಂತ ಹತ್ತಿ, ಶೇಂಗಾ, ತೊಗರಿ ಬೆಳೆಗೆ ಸರಿಯಾಗಿ ಬೆಲೆ ಇಲ್ಲದೇ ರೈತರು ಕಷ್ಟದಲ್ಲಿ ಜೀವನ ಕಳೆಯುತ್ತಿದ್ದಾರೆ. ರೈತರು ಬೆಳೆದಂತಹ ಬೆಳೆಗೆ ಸರ್ಕಾರ ಬೆಂಬಲ ಬೆಲೆ ನೀಡಿ ಖರೀದಿಸುವುದರ ಜತೆಗೆ ವೈಜ್ಞಾನಿಕ ಬೆಲೆಗೆ ಖರೀದಿ ಮಾಡಬೇಕು” ಎಂದು ಆಗ್ರಹಿಸಿದರು.

“ನೆಪ ಮಾತ್ರಕ್ಕೆ ರಾಷ್ಟ್ರೀಕೃತ ಬ್ಯಾಂಕುಗಳಾಗಿರಬಹುದು ಮತ್ತು ಸಹಕಾರ ಬ್ಯಾಂಕಗಳಾಗಿರಬಹುದು ರೈತರಿಗೆ ಸಾಲ ಕೊಡುವುದರಲ್ಲಿ, ಹಲವಾರು ತಾರತಮ್ಯ ಮಾಡಿದ್ದಾರೆ. ಸಹಕಾರ ಬ್ಯಾಂಕ್‌ಗಳಲ್ಲಿ ಈಗಾಗಲೇ 3 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಕೊಡುತ್ತೇವೆಂದು ಹೇಳಿಕೆಯಲ್ಲಿ ಮಾತ್ರ ಇದೆ. ಆದರೆ ಹೊಸದಾಗಿ ಮೆಂಬರ್ ಆಗಿರುವ ಸದಸ್ಯರಿಗೆ ಸಾಲ ನೀಡಿಲ್ಲ. ಅಲ್ಲದೆ ಈವರೆಗೆ ಯಾರಿಗೂ 3 ಲಕ್ಷ ರೂ. ಸಾಲ ನೀಡಿಲ್ಲ” ಎಂದು ಆರೋಪಿಸಿದರು.

“ಯಾದಗಿರಿ ಜಿಲ್ಲಾದ್ಯಂತ ಶಿಕ್ಷಕರು ವರ್ಗಾವಣೆಗೊಂಡು ಹುದ್ದೆಗಳು ಖಾಲಿಯಾಗಿ ಮಕ್ಕಳ ಶಿಕ್ಷಣದ ಕಲಿಕೆಯ ಮೇಲೆ ಪರಿಣಾಮ ಬೀರುತ್ತಿದೆ. ‘ಕಲ್ಯಾಣ ಕರ್ನಾಟಕ ಈಗಾಗಲೇ ಶಿಕ್ಷಣದಿಂದ ವಂಚಿತಗೊಂಡಿದ್ದು, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಇವುಗಳನ್ನು ಕೇವಲ ಕಲ್ಯಾಣ ಕರ್ನಾಟದಲ್ಲಿ ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿ ಅಡಿಯಲ್ಲಿ ತುರ್ತಾಗಿ ಶಿಕ್ಷಕರ ಹುದ್ದೆಗೆ ಕೂಡಲೇ ಭರ್ತಿ ಮಾಡಿಕೊಳ್ಳಬೇಕು” ಎಂದು ಆಗ್ರಹಿಸಿದರು.

“7 ತಾಸು ವಿದ್ಯುತ್ ನೀಡಿದರೂ ಕೂಡ ರೈತರ ಪಂಪ್‌ಸೆಟ್‌ಗೆ ವಿದ್ಯುತ್ ಸಾಕಾಗುತ್ತಿಲ್ಲ. ಇಂತಹದರಲ್ಲಿ 2 ತಾಸು ಕಡಿತಗೊಳಿಸಿ, 5 ತಾಸು ವಿದ್ಯುತ್ ಕೊಡುತ್ತೇವೆಂದು ಸರ್ಕಾರ ಆದೇಶ ಮಾಡಿರುವುದನ್ನು ಹಿಂಪಡೆದು ಮೊದಲಿನಂತೆ 7 ತಾಸು 3 ಫೇಸ್ ವಿದ್ಯುತ್ ನೀಡಿದರೆ ನೀರಾವರಿ ಮೂಲಕ ಬೆಳೆ ಮಾಡಿಕೊಂಡಿರುವ ರೈತರ ಜಮೀನಿಗೆ ಪಂಪಸೆಟ್ ಮೂಲಕ ನೀರು ಹಾಯಿಸಲು ಅನುಕೂಲವಾಗುತ್ತದೆ. ಇಲ್ಲವಾದರೆ ಬೆಳೆಗಳು ಒಣಗುತ್ತವೆ. ಈ ಹಿನ್ನೆಲೆಯಲ್ಲಿ ಸರ್ಕಾರ ತಮ್ಮ ನಿಲುವನ್ನು ಬದಲಾಯಿಸಿಕೊಂಡು 7 ತಾಸು ವಿದ್ಯುತ್ ನೀಡಬೇಕು” ಎಂದು ಒತ್ತಾಯಿಸಿದರು.

“ಈಗಾಗಲೇ ಗ್ರಾಮೀಣ ಪ್ರದೇಶದ ರಸ್ತೆಗಳು ಹಾಳಾಗಿದ್ದು, ಟೆಂಡರ್ ಕರೆದರು ಆ ಕೆಲಸಗಳನ್ನು ತಕ್ಷಣವೇ ಪ್ರಾರಂಭಿಸಬೇಕು ಮತ್ತು ಇನ್ನು ಟೆಂಡರ್ ಆಗದೆ ಬಾಕಿ ಉಳಿದಿರುವ ಕೆಲಸವನ್ನು ತಕ್ಷೆಣವೇ ಪ್ರಾರಂಭ ಮಾಡಬೇಕು.

“ರೈತರು ಈಗಾಗಲೇ ಅಲ್ಪಸ್ವಲ್ಪ ಹತ್ತಿ ಬೆಳೆ ಬೆಳೆದಿದ್ದು, ಅದಕ್ಕೆ ಪೂರಕವಾದ ಬೆಲೆ ಇಲ್ಲ. ಈ ಕುರಿತು ರೈತ ಸಂಘ ತಹಶೀಲ್ದಾರ್‌ ಮತ್ತು ಜಿಲ್ಲಾಧಿಕಾರಿ ಗಮನಕ್ಕೆ ತಂದು ಕೇಂದ್ರ ಸರ್ಕಾರ ಘೋಷಣೆ ಮಾಡಿರುವಂತ ಬೆಂಬಲ ಬೆಲೆ ಮುಖಾಂತರ ಖರೀದಿ ಕೇಂದ್ರಗಳನ್ನು ತೆರೆದು ಖರೀದಿಸುವಂತೆ ಒತ್ತಾಯಿಸಬೆಂದು ಮನವಿ ಮಾಡಿದರೂ ಈವರೆಗೆ ಯಾವುದೇ ಕ್ರಮ ನಡೆದಿಲ್ಲ. ಈಗಲಾದರೂ ಕೂಡಲೇ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ಬೆಂಬಲ ಬೆಲೆ ಮುಖಾಂತರ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಿದ್ಯುತ್ ವಿತರಣಾ ಘಟಕಕ್ಕೆ ಮೊಸಳೆ ಬಿಟ್ಟು ರೈತರ ಆಕ್ರೋಶ

ಈ ವೇಳೆ ಅಯ್ಯಣ್ಣ ಹಾಲಬಾವಿ, ಹಣಮಂತ್ರಾಯ ಚಂದಲಾಪೂರ, ಶಿವನಗೌಡ ರುಕ್ಕಾಪೂರ, ಭೀಮಣ್ಣ ತಿಪ್ಪನಟಗಿ, ವೆಂಕಟೇಶ್ ಗೌಡ ಕುಪಗಲ್, ತಿಪ್ಪಣ್ಣ ಜಂಪಾ, ದೇವಣ್ಣ ಎರಕಿಹಾಳ, ಲೋಹಿತ್ ಕುಮಾರ್ ಮುಂಗಿಹಾಳ, ನಾಗಪ್ಪ ಕುಪಗಲ,‌ ಖುದಾಭಕ್ಷ, ಮಾನಪ್ಪ ಕೊಂಬಿನ್, ಮಲ್ಲಣ್ಣ ಹಲಭಾವಿ, ರಾಮು ಕರ್ನಾಳ, ಸಿದಪ್ಪ, ರಂಗಯ್ಯ ಬೂದುರ್, ಶಿವಲಿಂಗಪ್ಪ, ಹಣಮಂತ ಬಂದೇಸಾಬ್ ಕರ್ನಾಳ, ಅಂಬರೀಷ್, ಬಸಣ್ಣ, ಭೀಮಯ್ಯ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...