ಯಾದಗಿರಿ | ಹೆಚ್ಚಿದ ಬಿಸಿಲ ಝಳ; ಪ್ರಾಣಿ, ಪಕ್ಷಿಗಳ ದಾಹ ನೀಗಿಸುತ್ತಿರುವ ಇಲಿಯಾಸ್ ಪಟೇಲ್

Date:

ರಾಜ್ಯಾದ್ಯಂತ ತೇವಾಂಶ ಕಡಿಮೆಯಾಗಿ ಉಷ್ಣಾಂಶದಲ್ಲಿ ಭಾರೀ ಏರಿಕೆಯಾಗಿರುವುದರಿಂದ ಸಹಿಸಿಕೊಳ್ಳಲಾಗದಷ್ಟು ಬಿಸಿಲ ಝಳಕ್ಕೆ ಪ್ರಾಣಿ-ಪಕ್ಷಿಗಳು ಬಸವಳಿಯುತ್ತಿವೆ. ಈ ಹಿನ್ನೆಲೆಯಲ್ಲಿ ಇಲಿಯಾಸ್ ಪಟೇಲ್ ಪ್ರಾಣಿ, ಪಕ್ಷಿಗಳಿಗಾಗಿ ನೀರುಣಿಸಿ ದಾಹ ನೀಗಿಸುತ್ತಿದ್ದಾರೆ.

ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಅಲೆದಾಡುತ್ತಿವೆ. ಬಾನಲ್ಲಿ ಹಾರಾಡುವ ಪಕ್ಷಿಗಳಂತೂ ಬಿಸಿಲ ತಾಪಕ್ಕೆ ತಲೆತಿರುಗಿ ನೆಲಕ್ಕಪ್ಪಳಿಸುತ್ತಿವೆ. ಇವುಗಳಲ್ಲಿ ಎತ್ತರದಲ್ಲಿ ಹಾರಾಡುವ ಹದ್ದು, ಕಾಗೆ, ಪಾರಿವಾಳಗಳೂ ಹೆಚ್ಚಿನ ಸಂಖ್ಯೆಯಲ್ಲಿ ಕೆಳಗೆ ಬೀಳುತ್ತಿವೆ. ಕೆರೆ ಕಟ್ಟೆಗಳು ಬರಿದಾಗಿರುವುದರಿಂದ ಕಾಡು ಪ್ರಾಣಿಗಳಿಗೂ ನೀರು ಸಿಗುತ್ತಿಲ್ಲ. ಹಿಂದೆ ಉದ್ಯಾನಗಳು, ಕೆರೆ-ಕುಂಟೆಗಳು ತುಂಬಿರುತ್ತಿದ್ದವು. ಹಳ್ಳ ಕೊಳ್ಳಗಳಲ್ಲೂ ನೀರಿರುತ್ತಿತ್ತು. ಆದರೆ ಈಗ ಕೆರೆಗಳು ಮಾಯವಾಗಿವೆ. ಪ್ರಾಣಿ-ಪಕ್ಷಿಗಳು ತಮ್ಮ ದಾಹ ಇಂಗಿಸಿಕೊಳ್ಳಲು ನೀರು ಸಿಗದ ಸನ್ನಿವೇಶ ಸೃಷ್ಟಿಯಾಗಿದೆ.

“ಗಿರಿನಾಡು ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದ ಇಲಿಯಾಸ್ ಪಟೇಲ್ ಅವರು ಪ್ರಾಣಿ ಮತ್ತು ಪಕ್ಷಿಗಳಿಗಾಗಿ ನೀರುಣಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಸದಾ ನಿರಂತರವಾಗಿ ಸಮಾಜಮುಖಿ ಸೇವೆ ನಡೆಸುತ್ತಿರುವ ಪ್ರಮುಖ ವ್ಯಕ್ತಿಯಾಗಿದ್ದಾರೆ. ಅವರು ತಮ್ಮ ದಯಾಳತೆಯನ್ನು ಪ್ರದರ್ಶಿಸಿ, ಪ್ರತಿದಿನವೂ ಬಳಕೆಯಾದ ನೀರಿನ ಬಾಟಲಿಗಳನ್ನು ಸಂಗ್ರಹಿಸಿ, ತಮ್ಮ ಮನೆಯ ಸುತ್ತಲೂ ಇರುವ ನಾಲ್ಕೈದು ಮರಗಳಿಗೆ ಸುಮಾರು ಹತ್ತು ಹದಿನೈದು ಬಾಟಲಿಗಳು ಕತ್ತರಿಸಿ ಗಿಡ, ಮರಗಳಿಗೆ ನೇತಾಕಿ ಅವುಗಳಲ್ಲಿ ಎರಡು ಮೂರು ಬಾಟಲಿಗಳಲ್ಲಿ ಪಕ್ಷಿಗಳಿಗೆ ತಿನ್ನಲು ದವಸಧಾನ್ಯ ಹಾಕಿ ಉಳಿದ ಬಾಟಲಿಗಳಲ್ಲಿ ನೀರು ಹಾಕಿ, ಪ್ರತಿನಿತ್ಯ ಬಾಟಲಿಗಳನ್ನು ಸ್ವಚ್ಛಗೊಳಿಸಿ ಪುನಃ ನೀರು ಹಾಕುವ ಮೂಲಕ ಪ್ರಕೃತಿಯ ಪ್ರಾಣಿ ಮತ್ತು ಪಕ್ಷಿಗಳಿಗೆ ಆಹಾರ, ಪಾನೀಯವನ್ನು ಒದಗಿಸಿ ಈ ಮೂಲಕ ಆತ್ಮತೃಪ್ತಿ ಪಡೆದುಕೊಳ್ಳುತ್ತಿರುವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ನೀರಾವರಿ ಹಕ್ಕಿಗಾಗಿ ಹೋರಾಟಕ್ಕೆ ಮುಂದಾಗಬೇಕು: ನಿವೃತ್ತ ನ್ಯಾ. ವಿ ಗೋಪಾಲಗೌಡ

“ಮಾಜದ ಪ್ರತಿ ಸದಸ್ಯನೂ ತಮ್ಮ ಸುತ್ತಲೂ ಇರುವ ಜೀವಜಾತಿಗಳಿಗೆ ಕಳಕಳಿಯಿಂದ ಮತ್ತು ಕರ್ತವ್ಯದಿಂದ ವರ್ತಿಸುವುದರಿಂದ, ಸಾಂಸ್ಕೃತಿಕ ಹಾಗೂ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದೆ. ಇನ್ನೊಂದು ಪ್ರಮುಖ ಅಂಶವೆಂದರೆ, ಅವರು ಈ ಸೇವೆಯನ್ನು ಮಾಡುತ್ತಿದ್ದು, ಇತರರು ಇದರಿಂದ ಪ್ರೇರಿತವಾಗಿ ತಮ್ಮ ಸಮುದಾಯಗಳಲ್ಲಿ ಕಾರ್ಯಗಳನ್ನು ಮಾಡಬೇಕು” ಎಂದು ಸಮುದಾಯದ ಜನರಿಗೆ ತಿಳಿಸಿದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...