ಯಾದಗಿರಿ | ಒಳಮೀಸಲಾತಿ : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು ಒತ್ತಾಯಿಸಿ ‌ಪ್ರತಿಭಟನೆ

Date:

ಒಳಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌ ಅವರ ವರದಿ ಅವೈಜ್ಞಾನಿಕ, ಅಪೂರ್ಣ, ಮತ್ತು ದುರುದ್ದೇಶ ಪೂರಿತವಾಗಿದ್ದು, ಈ ವರದಿಯನ್ನು ಸರಕಾರ ತಿರಸ್ಕರಿಸಿ ಬಲಗೈ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಡಾ.ಬಿ.ಆ‌ರ್.ಅಂಬೇಡ್ಕರ್ ವೃತ್ತದಿಂದ ಸುಭಾಷ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ‌ ನಡೆಸುವುದರ ಮೂಲಕ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ದಸಂಸ ಜಿಲ್ಲಾಧ್ಯಕ್ಷ ಮರೆಪ್ಪ ಚಟ್ಟೇರಕರ್‌ ಮಾತನಾಡಿ, “ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗವು ನೀಡಿರುವ ವರದಿ ತಡೆ ಹಿಡಿದು ತಕ್ಷಣ ಸಚಿವ ಸಂಪುಟದ ಉಪ ಸಮಿತಿ ನೇಮಿಸಿ ಸ್ಪಷ್ಟ ಮತ್ತು ನ್ಯಾಯ ಸಮೃತವಾದ ವೈಜ್ಞಾನಿಕವಾಗಿ ವರದಿ ಸಿದ್ದಪಡಿಸಿ ಸಮಸ್ತ ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತ ಹಿರಿಯ ಮುಖಂಡ ನೀಲಕಂಠ ಬಡಿಗೇರ ಮಾತನಾಡಿ, ʼಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿದ ಪರೈಯ್ಯ ಪರವನ್ ಜಾತಿಯನ್ನು ಎಡಗೈ ಪಂಗಡಕ್ಕೆ ಸೇರಿಸಿರುವುದಲ್ಲದೇ ಸಮುದಾಯಕ್ಕೆ ಸೇರಿದ ಇನ್ನೂ ಹಲವು ಜಾತಿಗಳನ್ನು ಅತ್ಯಂತ ಹಿಂದುಳಿದ ಜಾತಿಗಳ ಗುಂಪಿಗೆ ಸೇರಿಸಿ ಬಲಗೈ ಸಮುದಾಯದ ಜನ ಸಂಖ್ಯೆಯನ್ನು ಉದ್ದೇಶ ಪೂರ್ವಕವಾಗಿ ಕಡಿಮೆ ಮಾಡಿರುವುದಲ್ಲದೇ, ಜಾತಿಯೇ ಅಲ್ಲದ ಆದಿಕರ್ನಾಟಕ, ಆದಿದ್ರಾವಿಡ, ಅದಿಆಂದ್ರ ಸಮೂಹಕ್ಕೆ ಶೇಕಡ 1ರಷ್ಟು ಮೀಸಲಾತಿ ನಿಗದಿಪಡಿಸಿರುವುದನ್ನು ರದ್ದುಪಡಿಸಿ, ಸದರಿ ಮೀಸಲಾತಿಯನ್ನು ಸಂಬಂಧಿಸಿದ ಜಾತಿಗಳಿಗೆ ಹಂಚಿಕೆ ಮಾಡಲು ಸಚಿವ ಸಂಪುಟದ ಉಪ ಸಮಿತಿ ರಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದರು.

ಇದನ್ನೂ ಓದಿ : ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ವಿಧಿವಶ

ಪ್ರತಿಭಟನೆಯಲ್ಲಿ ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿಯ ನಾಗಣ್ಣ ಬಡಿಗೇರ, ರಾಮಣ್ಣ ಸಾದ್ಯಾಪೂರ, ಶಿವುಪುತ್ರ ಜವಳಿ, ಮಹಾದೇವ ದಿಗ್ವಿ, ಗಾಳೆಪ್ಪ ಪೂಜಾರಿ, ಶ್ರೀಶೈಲ ಹೊಸ್ಮನಿ, ಮಲ್ಲಿಕಾರ್ಜುನ ಪೂಜಾರಿ, ರಾಯಪ್ಪ ಸಾಲಿಮನಿ, ಸೈದಪ್ಪ ಕುಯಿಲೂರ್, ಮಲ್ಲಿಕಾರ್ಜುನ ಕುರಕುಂಬಳಕ, ಪ್ರಭು ಬುಕ್ಕಲ್, ಡಾ. ಭಗವಂತ ಅನವಾರ, ರಾಹುಲ್ ಹುಲಿಮನಿ, ಚಂದಪ್ಪ ಮುನಿಯಪ್ಪನೋರ್, ಶರಣು ಎಸ್ ನಾಟೇಕಾರ್, ಸಂತೋಷ ನಿರ್ಮಲಕರ್, ಕಾಶಿನಾಥ ನಾಟೇಕಾರ್, ಚಂದ್ರಕಾಂತ ಮುನಿಯಪ್ಪನೋರ, ಪರಶುರಾಮ ಒಡೆಯರ್, ನಿಂಗಣ್ಣ ಬೀರನಾಳ, ಸಂಪತ್ ಚಿನ್ನಾಕರ್, ವಸಂತ ಸುಂಗಲಕರ್, ಸೇರಿದಂತೆ ಅನೇಕರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...