ಯಾದಗಿರಿ | ನಗರಸಭೆ ಸಿಬ್ಬಂದಿಗಳ ವರ್ಗಾವಣೆಗೆ ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹ

Date:

ಯಾದಗಿರಿ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪದ್ಮಾವತಿ ಹಾಗೂ ಸೀನಿಯರ್ ಪ್ರೋಗ್ರಾಮರ್ ಮಲ್ಲಪ್ಪ ಅವರನ್ನು ಬೇರೆ ಸ್ಥಳಕ್ಕೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಜಯ ಕರ್ನಾಟಕ ಜನಪರ ವೇದಿಕೆಯ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಸಂಘಟನೆಯ ಪದಾಧಿಕಾರಿ, ಜಿಲ್ಲಾಧ್ಯಕ್ಷ ತೇಜರಾಜ್ ರಾಥೋಡ್ ಮಾತನಾಡಿ, “ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪದ್ಮಾವತಿ ಅವರು 2023ರ ಸೆಪ್ಟೆಂಬರ್ 19ರಿಂದ ಈವರೆಗೆ ಕೆಲಸ ನಿರ್ವಹಿಸುತ್ತಿದ್ದು, ಮಲ್ಲಪ್ಪ ಎನ್ ಸೀನಿಯರ್ ಪ್ರೋಗ್ರಾಮರ್ ಅವರು 2006ರ ನವೆಂಬರ್ 7ರಿಂದ ಈವರೆಗೆ ಈ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಸಾರ್ವಜನಿಕರಿಗೆ ಸ್ಪಂದಿಸುತ್ತಿಲ್ಲ. ನಗರಸಭೆಗೆ ಬರುವ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡುತ್ತಿಲ್ಲ” ಎಂದು ಆರೋಪಿಸಿದರು.

“ಜನಸಾಮಾನ್ಯರೊಂದಿಗೆ ಏಕವಚನದಲ್ಲಿ ಮಾತನಾಡುತ್ತಾರೆ. ಇವರಿಬ್ಬರೂ ಸ್ಥಳೀಯರಿದ್ದು, ಜನರನ್ನು ನಿತ್ಯವೂ ಕಚೇರಿಯಿಂದ ಕಚೇರಿಗೆ ಅಲೆದಾಡಿಸುತ್ತಾರೆ. ದಲ್ಲಾಳಿಗಳ ಮೂಲಕ ಹಣ ಪಡೆದು, ಕೆಲಸ ಮಾಡುತ್ತಿದ್ದಾರೆ. ಸರ್ವಾಧಿಕಾರಿಗಳಾಗಿ ಅಹಂಕಾರದಿಂದ ಅಂದಾ ದರ್ಬಾರ್ ನಡೆಸುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಫೆ.24ರಂದು ಸಾಗರದಲ್ಲಿ ಸಹ್ಯಾದ್ರಿ ಗಾನ ಸಿರಿ ಬಳಗದಿಂದ ಹಾಡುಗಳ ಸ್ಪರ್ಧೆ

“ಈ ಇಬ್ಬರು ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಿ, ಕೂಡಲೇ ಇಲ್ಲಿಂದ ವರ್ಗಾವಣೆ ಮಾಡಬೇಕು. ಒಂದು ವಾರದಲ್ಲಿ ಕ್ರಮ ಕೈಗೊಳ್ಳದೇ ಹೋದರೆ ತಮ್ಮ ಕಚೇರಿ ಎದುರು ಸಾರ್ವಜನಿಕರೊಂದಿಗೆ
ತೀವ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...