ಯಾದಗಿರಿ | ಮಣಿಪುರ ಘಟನೆ: ಅತ್ಯಾಚಾರ ಆರೋಪಿಗಳಿಗೆ ಮರಣ ದಂಡನೆ ವಿಧಿಸಿ; ದಸಂಸ ಆಗ್ರಹ

Date:

ಮಣಿಪುರ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ) ಕಾರ್ಯಕರ್ತರು ಯಾದಗಿರಿ ಜಿಲ್ಲೆ ಶಹಾಪುರ ತಹಶೀಲ್ದಾರ್‌ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಸಂಚಾಲಕ ಶಿವಪುತ್ರಪ್ಪ ಜವಳಿ ಮಾತನಾಡಿ, “ಭಾರತದ ಸಂವಿಧಾನದಂತೆ ಇಲ್ಲಿನ ಮಹಿಳೆಯರು ಹಾಗೂ ಪುರುಷರು ಸಮಾನರು. ಆದರೆ ಮಹಿಳೆಯರು ಕೀಳು, ಪುರುಷರು ಮೇಲು ಎಂಬ ಭಾವನೆಯಿಂದ ನಡೆಯುವ ಪ್ರವೃತ್ತಿ ಇಂದಿಗೂ ನಿಂತಿಲ್ಲ. ಇದಕ್ಕೆ ಮಣಿಪುರದಲ್ಲಿ ನಡೆದ ಘಟನೆಯೇ ಸಾಕ್ಷಿ. ಈ ಮನಸ್ಥಿತಿ ಬದಲಾಗಬೇಕು, ಜುಲೈ 19ರಂದು ಮೈತೇಯಿ ಸಮುದಾಯದ ಗುಂಪಿನ ಜನರು ಕುಕಿ ಎಂಬ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಸಂಪೂರ್ಣ ಬೆತ್ತಲೆ ಮಾಡಿ ಸಾಮೂಹಿಕ ಅತ್ಯಚಾರ ಮಾಡುವ ಮೂಲಕ ಅಮಾನವೀಯ ಕೃತ್ಯವೆಸಗಿದ್ದಾರೆ. ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ರಾಷ್ಟ್ರಪತಿಯವರು ಕೂಡಲೇ ಮಧ್ಯ ಪ್ರವೇಶಿಸಿ ಶಾಂತಿ ಸ್ಥಾಪಿಸಲು ಪ್ರಯತ್ನಿಸಬೇಕು” ಎಂದು ಒತ್ತಾಯಿಸಿದರು.

“ರಾಜ್ಯದ ಧರ್ಮಸ್ಥಳದಲ್ಲಿ ಸೌಜನ್ಯ ಎಂಬ ಮಹಿಳೆಯ ಮೇಲೆ ಸಾಮೂಹಿಕ ಅತ್ಯಚಾರವೆಸಗಿ ಹತ್ಯೆ ಮಾಡಿದ್ದು, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿಯ ಮೇಲೆ ಅತ್ಯಚಾರ ಮತ್ತು ಹತ್ಯೆ ಎಸಗಿರುವಂತಹ ಆರೋಪಿಗಳ ಮೇಲೆ ಅಪರಾಧ ಪ್ರಕರಣ ದಾಖಲಿಸಿ, ನ್ಯಾಯಾಂಗ ತನಿಖೆಗೆ ಒಳಪಡಿಸಿ ಇಂತಹ ಕೃತ್ಯವೆಸಗಿದ ಆರೋಪಿಗಳನ್ನು ಗಲ್ಲಿಗೇರಿಸಬೇಕು. ನೊಂದ ಕುಟುಂಬಗಳಿಗೆ ಸರ್ಕಾರದಿಂದ ಸಹಾಯ ನೀಡಿ ಅಲ್ಲಿರುವ ಆಡಳಿತ ಸರ್ಕಾರ ಸೂಕ್ತ ರಕ್ಷಣೆ ಒದಗಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಮಣಿಪುರ ಘಟನೆ; ಆ.7ರಂದು ಪ್ರತಿಭಟನೆಗೆ ಕರೆ

ಚಂದಪ್ಪ ಮನಿಯೊಪ್ಪನೊರ, ಶಿವಕುಮಾರ ತಳವಾರ, ಶಿವಲಿಂಗ ಹಸನಾಪೂರ, ಜಿಲ್ಲಾ ಸಂಘಟನಾ ಸಂಚಾಲಕ ಮಲ್ಲಪ್ಪ, ತಾಲೂಕ ಸಂಚಾಲಕಿ ಶಾಂತಿ, ಸಂತೋಷ ನಾಟೇಕರ, ಶರಬ ದೋರನಹಳ್ಳಿ, ವಾಸು ಕೋಗಿಳಕರ, ಶ್ರೀಮಂತ ಸಿಂಗನಹಳ್ಳಿ, ಶರಣಪ್ಪ ಕೋಟಿ ಸೇರಿದಂತೆ ಬಹುತೇಕ ಮಂದಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...