ಯಾದಗಿರಿ | ನರಗುಂದ ಬಂಡಾಯ ರೈತ ಹುತಾತ್ಮ ದಿನಾಚರಣೆ

Date:

ನರಗುಂದದಲ್ಲಿ 1980ರಲ್ಲಿ ನಡೆದ ರೈತ ಚಳುವಳಿಯಲ್ಲಿ ಅಂದಿನ ಗುಂಡೂರಾವ್ ಸರಕಾರದ ಪೊಲೀಸರು ಹೋರಾಟ ನಿರತ ರೈತರಿಗೆ ಗುಂಡು ಹಾರಿಸಿ ಕೊಂದಿರುವ ನೆನಪಿನ ಅಂಗವಾಗಿ ಪ್ರತಿ ವರ್ಷದಂತೆ ನರಗುಂದ-ನವಲಗುಂದ ಬಂಡಾಯ ರೈತ ಹುತಾತ್ಮ ದಿನಾಚರಣೆಯನ್ನು ಸೋಮವಾರ ಶಹಾಪುರದ ಎಪಿಎಮ್‌ಸಿ ಕಾರ್ಯಾಲಯದಲ್ಲಿ ಜರುಗಿತು.

ಚಿಂತಕ ಶಿವಣ್ಣ ಇಜೇರಿ ಮಾತನಾಡಿ, ‘1981-82 ರಲ್ಲಿ ರೈತ ಸಂಘದ ಜೈಲ್ ಭರೋ ಕಾರ್ಯಕ್ರಮದಲ್ಲಿ ಜೈಲಿಗೆ ಹೋದ ಪ್ರಸಂಗದ ನೆನಪನ್ನು ಎಳೆಎಳೆಯಾಗಿ’ ಬಿಚ್ಚಿಟ್ಟರು.

ರೈತ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಾಗರತ್ನಮ್ಮ ವಿ. ಪಾಟೀಲ ಅವರು ದೇವನಹಳ್ಳಿ ಬಲವಂತ ಭೂಸ್ವಾಧೀನ ಹೋರಾಟದಲ್ಲಿ ಭಾಗವಹಿಸಿದ ಪ್ರಸಂಗ ಮತ್ತು ಸರಕಾರ ಈ ನಿರ್ಣಾಯ ಕೈಬಿಟ್ಟುಕೊಟ್ಟಿರುವುದರ ಕುರಿತು ಪ್ರಸ್ತಾಪಿಸಿ ಅಲ್ಲಿನ ರೋಚಕ ಜಯದ ಕುರಿತು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಸಂಘದ ನಲವತ್ತೈದು ವರುಷ ನಡೆದು ಬಂದ ದಾರಿ, ಚುನಾವಣಾ ರಾಜಕೀಯ, ಸದ್ಯ ಮುಂದಿರುವ ರೈತ ಸಂಘದ ಸವಾಲುಗಳ ಕುರಿತು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ವಿವರಿಸಿದರು.

ರೈತರಿಗೆ ಯಾವುದೇ ದ್ರವ ರೂಪದ ರಸಗೊಬ್ಬರವನ್ನು ಲಿಂಕಾಗಿ ಕೊಡದೆ ರೈತರಿಗೆ ಬೇಕಿರುವ ಗೊಬ್ಬರಗಳನ್ನು ಜಿಲ್ಲಾಡಳಿತ ಪೂರೈಸಲೇಬೇಕು. ಗೊಬ್ಬರ ಸಲುವಾಗಿ ಕೃಷಿ ಇಲಾಖೆ ಅಧಿಕಾರಿಗಳ ಮತ್ತು ರೈತರ ಸಭೆ ಕರೆದು ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ತಹಸೀಲ್ದಾರ್‌ ಅವರನ್ನು ಭೇಟಿಯಾಗಿ ಆಗ್ರಹಿಸಿದರು.

ಇದನ್ನೂ ಓದಿ : ಬೀದರ್‌ | ಅಕ್ರಮ ಆಸ್ತಿ ಗಳಿಕೆ ಆರೋಪ : ಆರೋಗ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್‌ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ರೈತ ಸಂಘದ ಪ್ರಮುಖರಾದ ಶರಣು ಮಂದ್ರವಾಡ, ಚಂದ್ರಕಲಾ ವಡಿಗೇರಿ, ಮುದ್ದಣ್ಣ ಅಮ್ಮಾಪುರ್, ಮಲ್ಲಣ್ಣನಾಯಕ, ಮಲ್ಕಣ್ಣ ಚಿಂತಿ, ಭೀಮಣ್ಣನಾಯಕ, ಫಕೀರ್ ಅಹ್ಮದಸಾಬ್, ಹಣ್ಮಂತ್ರಾಯ ಗುಜ್ಜಲ್, ಬಾಲಾಜಿ, ಶರಣು ಯಕ್ಷಿಂತಿ, ಚಾಂದಪಾಷಸಾಬ್, ಬಸವರಾಜ ಲಕ್ಷ್ಮೀಪುರ, ಸಾಯಬ್ ಲಾಲ್ ಹುಣಸಿಗಿ, ಪ್ರಭಾಕರ ಪಾಟೀಲ, ಸುನಿಲ ಕೊಂಗಂಡಿ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...