ಯಾದಗಿರಿ | ಉದ್ಘಾಟನೆ ಕಾಣದ ನೂತನ ಪೊಲೀಸ್ ಠಾಣೆ ಕಟ್ಟಡ; ಜಾಲಿ‌ಮುಳ್ಳು ಬೇಲಿ ಬಡಿಯುವ ಎಚ್ಚರಿಕೆ

Date:

ಯಾದಗಿರಿ ನಗರದಲ್ಲಿ ನಿರ್ಮಾಣವಾಗಿರುವ ನೂತನ ಪೊಲೀಸ್ ಠಾಣೆ ಕಚೇರಿಯನ್ನು ಒಂದುವಾರದೊಳಗೆ ಉದ್ಘಾಟಿಸದಿದ್ದರೆ ಜಾಲಿ‌ಮುಳ್ಳು ಬೇಲಿ ಬಡಿಯಬೇಕಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ್ ಪೊಲೀಸ್‌ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

“ಯಾದಗಿರಿ ನಗರದ ಹೃದಯಭಾಗದಲ್ಲಿರುವ ಪ್ರಮುಖ ಗಾಂಧಿಚೌಕದಲ್ಲಿ ಸುಮಾರು ₹1.65 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪೊಲೀಸ್ ಠಾಣೆ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ ಕಂಡಿಲ್ಲ. ಕಚೇರಿ ಕಟ್ಟಡ ಕಾಮಗಾರಿ ‌ಮುಗಿದು ಒಂದು ವರ್ಷ ಗತಿಸಿದರೂ ಪೊಲೀಸ್ ಠಾಣೆ ಉದ್ಘಾಟಿಸಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಎಂಟು ತಿಂಗಳ ಹಿಂದೆಯೇ ಪೊಲೀಸ್ ಹೌಸಿಂಗ್ ಕಾರ್ಪೊರೇಷನ್ ಪೊಲೀಸ್ ವರಿಷ್ಠಾಧಿಕಾರಿಗೆ ಹಸ್ತಾಂತರ ಮಾಡಿದೆ. ಆದರೆ ಪೊಲೀಸ್ ವರಿಷ್ಠಾಧಿಕಾರಿಗಳು ಈವರೆಗೆ ನೂತನ ಕಟ್ಟಡವನ್ನು ಉದ್ಘಾಟನೆ ಮಾಡುವ ಗೋಜಿಗೆ ಹೋಗಿಲ್ಲ. ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ. ಸಂಗೀತಾ ಅವರು ಅಧಿಕಾರ ಸ್ವೀಕರಿಸಿ ಒಂದು ವರ್ಷ ಪೂರೈಸಿದೆ. ಆದರೆ ಈವರೆಗೂ ಸರ್ಕಾರ ಹಾಗೂ ಜಿಲ್ಲಾಡಳಿತದ ಗಮನಕ್ಕೆ ತಂದು ಚರ್ಚೆ ನಡೆಸುವ ಉಸಾಬರಿಗೂ ಹೋಗಿಲ್ಲ. ಹೀಗಾಗಿ ಕೋಟ್ಯಂತರ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಕಟ್ಟಡ ಪುಂಡ ಪೋಕರಿಗಳ ಅಡ್ಡವಾಗಿ ಮಾರ್ಪಟ್ಟಿದೆ. ಸರ್ಕಾರ ಕುಂಟುನೆಪ ಹೇಳದೆ ಕೂಡಲೇ ಪೊಲೀಸ್ ಠಾಣೆ ಕಚೇರಿ ಉದ್ಘಾಟನೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾದಗಿರಿ ಜಿಲ್ಲಾ ಕೇಂದ್ರವಾಗಿ 14 ವರ್ಷ ಕಳೆದ ಬಳಿಕ ನಿಜಾಮರ ಕಾಲದಲ್ಲಿ ನಿರ್ಮಿಸಿದ ಪೊಲೀಸ್ ಠಾಣೆ ಕಟ್ಟಡ ಕೆಡವಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆದರೆ ಉದ್ಘಾಟನೆ ಮಾಡದಿರೋದು ದುರ್ದೈವದ ಸಂಗತಿಯಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸ್ತಿರುವ ಪೊಲೀಸರ ಸ್ಥಿತಿಯೇ ಕೈದಿಗಳ ಸ್ಥಿತಿಯಾಗಿದೆ. ಪೊಲೀಸ್ ವಸತಿನಿಲಯದಲ್ಲಿ ಜಾಗವಿಲ್ಲದಂತಾಗಿದೆ. ಹಾಗಾಗಿ ‌ಕೂಡಲೇ ನೂತನ ಕಟ್ಟಡ ಉದ್ಘಾಟಿಸಿ ಕಚೇರಿ ಮಾಡಿಕೊಳ್ಳಿ. ಇಲ್ಲವಾದಲ್ಲಿ ಪೊಲೀಸ್ ವಸತಿನಿಲಯವನ್ನು ಬಾಡಿಗೆಗೆ ಕೊಟ್ಟರೆ ಬಾಡಿಗೆ ಹಣವಾದರೂ ಬಂದು ಸರ್ಕಾರದ ಬೊಕ್ಕಸಕ್ಕೆ ಹೋಗುತ್ತದೆ. ಪೊಲೀಸ್ ಠಾಣೆ ಕಟ್ಟಡ ಉದ್ಘಾಟನೆಗೆ ಗೃಹ ಸಚಿವರೇ ಬರಬೇಕಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾದರೂ ಉದ್ಘಾಟಿಸಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದದ್ದು : ತಡೋಳಾ ಶ್ರೀ

ನೂತನ ಕಟ್ಟಡ ಉದ್ಘಾಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಯಾದಗಿರಿ ಎಸ್‌ಪಿಯನ್ನು ಸಂಪರ್ಕಿಸಿದಾಗ ಮಾತನಾಡಿ, “ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಗೃಹ ಸಚಿವರು ಈ ಕುರಿತು ಚರ್ಚಿಸುತ್ತಿದ್ದಾರೆ. ಗೃಹ ಸಚಿವರು ಬರುವ ದಿನಾಂಕವನ್ನು ತಿಳಿಸಿದ ಕೂಡಲೇ ಉದ್ಘಾಟನೆಗೆ ಹಣಿಮಾಡಿಕೊಳ್ಳುತ್ತೇವೆ” ಎಂದು ಪ್ರತಿಕ್ರಿಯಿಸಿದರು.

ಈ ಸಂದರ್ಭದಲ್ಲಿ ಬಸವರಾಜ್ ಇಟಗಿ, ಬಾಬಾಖಾನ್, ಸಾಬಯ್ಯ, ವಿಶ್ವನಾಥ, ಭೀಮಶೆಪ್ಪ, ರಾಜು ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...