ಯಾದಗಿರಿ | ಪ್ರಭಾರಿ ಮುಖ್ಯ ಶಿಕ್ಷಕ ಶಿವಶರಣ ಕುದರಿ ಅಮಾನತು; ಆದೇಶ ಹಿಂಪಡೆಗೆ ದಸಂಸ ಆಗ್ರಹ

Date:

ಸುರಪುರ ತಾಲೂಕಿನ ದೇವಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಜನ ವಾರ್ಡ್‌ನ ಪ್ರಭಾರಿ ಮುಖ್ಯ ಶಿಕ್ಷಕ ಶಿವಶರಣ ಕುದರಿ ಅವರ ಅಮಾನತು ಆದೇಶವನ್ನು ಪರಿಶೀಲಿಸಿ ತನಿಖೆ ಬಳಿಕ ಸೇವೆಗೆ ನಿಯೋಜಿಸಲಾಗುವುದು ಎಂದು ಯಾದಗಿರಿ ಡಿಡಿಪಿಐ ಅಧಿಕಾರಿ ಭರವಸೆ ನೀಡಿದ್ದಾರೆ.

ದೇವಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರ ಅಮಾನತು ಹಿಂಪಡೆಯುವಂತೆ ಆಗ್ರಹಿಸಿ ದಸಂಸದಿಂದ ನಡೆಸಿದ್ದ ಪ್ರತಿಭಟನೆಗೆ ಪ್ರತಿಕ್ರಿಯಿಸಿ ಮಾತನಾಡಿದ್ದಾರೆ.

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಶಿವಶರಣ ಕುದರಿ ಅವರ ಅಮಾನತು ಆದೇಶವನ್ನು ಹಿಂಡೆಯುವಂತೆ ಆಗ್ರಹಿಸಿ ದಸಂಸ ಯಾದಗಿರಿ ಜಿಲ್ಲಾ ಶಾಖೆಯಿಂದ ಪ್ರತಿಭಟನೆ ಮಾಡುವುದರ ಮೂಲಕ ಶಾಲಾ ಶಿಕ್ಷಣ ಇಲಾಖೆ ಉಪ-ನಿರ್ದೇಶಕರು ಮತ್ತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ಪತ್ರ ಸಲ್ಲಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಶಿವಲಿಂಗ ಎಂ ಹಸನಾಪುರ ಅವರು, “ಮುಖ್ಯ ಶಿಕ್ಷಕ ಶಿವಶರಣ ಕುದರಿ ಅವರನ್ನು ಕುತಂತ್ರದಿಂದ ಅಮಾನತು ಮಾಡಿರುವುದು ಖಂಡನೀಯ. ಮುಖ್ಯ ಗುರುಗಳನ್ನು, ಶಿಕ್ಷಕರನ್ನು ನಿಯಮನುಸಾರವಾಗಿ ಸರ್ಕಾರದ ಸೇವೆಯಿಂದ ಅಮಾನತುಗೊಳಿಸಬೇಕಾದರೆ, ಶಾಲೆಗೆ ಬಂದ ಸರ್ಕಾರದ ನಿರ್ವಹಣೆ ಅನುದಾನ ದುರ್ಬಳಕೆಯಾಗಿರಬೇಕು, ಶಾಲಾ ಕಟ್ಟಡ ಕಾಮಗಾರಿಗೆ ಬಂದ ಅನುದಾನ ದುರ್ಬಳಕೆಯಾಗಿರಬೇಕು ಇಲ್ಲವೇ ಶಾಲಾ ಮಕ್ಕಳ ಜತೆಗೆ ಮತ್ತು ಪಾಲಕ-ಪೋಷಕರೊಂದಿಗೆ ಆಸಭ್ಯವಾಗಿ ವರ್ತಿಸಿದ್ದರೆ ಮಾತ್ರ ಸೇವೆಯಿಂದ ಅಮಾನತುಗೊಳಿಸುವ ಆದೇಶವಿರುತ್ತದೆ” ಎಂದರು.

“ಸದರಿ ಪ್ರಭಾರಿ ಮುಖ್ಯ ಶಿಕ್ಷಕ ಶಿವಶರಣ ಕುದರಿ ಅವರು ಎಲ್ಲ ಜವಾಬ್ದಾರಿಗಳನ್ನೂ ಸರಿಯಾಗಿ ನಿಭಾಯಿಸಿಕೊಂಡು ಬಂದಿದ್ದು, ಶಾಲಾ ಮಕ್ಕಳ ಜೊತೆ ಮತ್ತು ಪಾಲಕ-ಪೋಷಕರ ಜತೆಗೆ ಅತಿ ಸೌಜನ್ಯದಿಂದ ವರ್ತಿಸಿದ್ದಾರೆ. ಇವರ ಕುರಿತು ಪತ್ರಿಕೆಯಲ್ಲಿ ಮತ್ತು ದೃಶ್ಯ ಮಾಧ್ಯಮದಲ್ಲಿ ಅಪಪ್ರಚಾರ ವರದಿ ನೋಡಿ, ಅಮಾನತು ಮಾಡಿರುವುದು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

“ಆರೋಪದ ಕುರಿತು ಯಾವುದೇ ವಿಚಾರಣೆ ಮಾಡದೆ, ಈ ಶಾಲೆಗೆ ಭೇಟಿ ನೀಡದೆ, ನೋಟಿಸ್ ಜಾರಿಗೊಳಿಸದೆ, ಲಂಚ ಮತ್ತು ರಾಜಕೀಯ ಒತ್ತಡದಿಂದ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ, ಪ್ರಭಾರಿ ಮುಖ್ಯ ಶಿಕ್ಷಕ ಶಿವಶರಣ ಕುದರಿಯವರನ್ನು ಅಮಾನತುಗೊಳಿಸಿದ್ದು ತುಂಬಾ ವಿಷಾದನೀಯ. ಇದರಿಂದ ಶಾಲಾ ಮಕ್ಕಳ ವ್ಯಾಸಂಗ ಮತ್ತು ಬಿಸಿಯೂಟಕ್ಕೆ ತೊಂದರೆ ಉಂಟಾಗಿದೆ” ಎಂದರು.

“ಪ್ರಕರಣದ ಕುರಿತು ಉಲ್ಲೇಖ-2ರನ್ವಯ ಶಾಲಾ ಶಿಕ್ಷಣ ಇಲಾಖೆ ಉಪ-ನಿರ್ದೇಶಕರಿಗೆ ಮನವಿ ಮಾಡಿಕೊಳ್ಳಲು ಹೋದಾಗ, ಸದರಿ ಉಪ-ನಿರ್ದೇಶಕರು, “ನಿಮ್ಮ ವಿರುದ್ಧ ಕೇಸ್ ಮಾಡಿ ಒಳಗೆ ಹಾಕಿಸುತ್ತೇವೆ” ಎಂದು ಬೆದರಿಸಿರುವುದು ಕಾನೂನು ಬಾಹಿರವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಸ್‌ಸಿ ಸಮುದಾಯಕ್ಕೆ ರುದ್ರಭೂಮಿ ಮಂಜೂರು; ಜಿಲ್ಲಾಧಿಕಾರಿ ಸೂಚನೆ

“ಈ ವಿಚಾರ ಕುರಿತು ಕೂಲಂಕುಷವಾಗಿ ಪರಿಶೀಲನೆ ಮಾಡಿ ಇದನ್ನು ಗಂಭೀರವಾಗಿ ಪರಿಗಣಿಸಿ, ಸುಳ್ಳು ವರದಿ ಸಲ್ಲಿಸಿ ಅಮಾನತುಗೊಳಿಸಲು ಸಹಕರಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಸದರಿ ಪ್ರಭಾರಿ ಮುಖ್ಯ ಶಿಕ್ಷಕರ ಅಮಾನತು ಆದೇಶ ಹಿಂಪಡೆದು ಅದೇ ಶಾಲೆಯಲ್ಲಿ ಸೇವೆ ಸಲ್ಲಿಸಲು ಅನುಕೂಲ ಮಾಡಿಕೊಡಬೇಕು. ಒಂದು ವೇಳೆ ನಮ್ಮ ಮನವಿಗೆ ಸರಿಯಾಗಿ ಸ್ಪಂದಿಸದಿದ್ದಲ್ಲಿ ಶೀಘ್ರದಲ್ಲಿಯೇ ಈ ಶಾಲಾ ಮಕ್ಕಳು, ಪಾಲಕ-ಪೋಷಕರೊಂದಿಗೆ ಸೇರಿ ದೇವಾಪುರ ರಾಜ್ಯ ಹೆದ್ದಾರಿ ತಡೆದು ತೀವ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದರು.

ಶಿವಪುತ್ರ ಜವಳಿ ಜಿಲ್ಲಾ ಸಂಚಾಲಕ ಚಂದಪ್ಪ ಮುನ್ನಿಯಪ್ಪನೋರ, ತಿಪ್ಪಣ್ಣ ಬಿ ಶೆಳ್ಳಗಿ, ಚನ್ನಬಸಪ್ಪ ತಳವಾರ್, ಶೇಖರ್ ಮಂಗಳೂರು, ರಾಜು ಬಡಿಗೇರ, ಹಣಮಂತ ರತ್ತಾಳ, ಯಲ್ಲಪ್ಪ ರತ್ತಾಳ, ಖಾಜಾ ಅಜ್ಜೀರ, ದೇವೀಂದ್ರಪ್ಪ ವಿ ವಾಗಣಗೇರಾ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...